ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಮುದ್ದೇಬಿಹಾಳ : ಅಂಗನವಾಡಿಯಲ್ಲಿಯೇ ಕಾರ್ಯಕರ್ತೆಯರಿಬ್ಬರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ಪಟ್ಟಣದ ಪಿಲೇಕೆಮ್ಮನಗರದ ಅಂಗನವಾಡಿ ಕೇಂದ್ರ ನಂ.1 ರಲ್ಲಿ ಶುಕ್ರವಾರ ನಡೆದಿದೆ.

ಕಾರ್ಯಕರ್ತೆಯರಾದ ಶಾಂತಾ ಮಾಮನಿ ಹಾಗೂ ರೇಣುಕಾ ರಾಮಕೋಟಿ ಎಂಬುವರು ಪರಸ್ಪರ ಬಡಿದಾಡಿಕೊಂಡಿದ್ದಾರೆ.ಮೊದಲು ಅದೇ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿದ್ದ ಶಾಂತಾ ಮಾಮನಿ ಅವರು ಸೇವೆ ಸಲ್ಲಿಸುತ್ತಿದ್ದರು. ಅವರನ್ನು ಸಿಡಿಪಿಒ ವರದಿ ಆಧರಿಸಿ ಸಂಗಮೇಶ್ವರ ನಗರದ 1ನೇ ಅಂಗನವಾಡಿ ಕೇಂದ್ರಕ್ಕೆ ಸ್ಥಳ ಬದಲಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಆದೇಶ ಹೊರಡಿಸಿದ್ದರು.ಅವರ ಸ್ಥಾನಕ್ಕೆ ರೇಣುಕಾ ಅವರನ್ನು ಪ್ರಭಾರಿಯಾಗಿ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ.

ರೇಣುಕಾ ಅವರನ್ನು ಕೇಂದ್ರದ ಮೇಲ್ವಿಚಾರಕರು ಗುರುವಾರ ಕರ್ತವ್ಯಕ್ಕೆ ಹಾಜರು ಮಾಡಿಸಿದ್ದರು. ಶುಕ್ರವಾರ ಬೆಳಗ್ಗೆ ಕೇಂದ್ರಕ್ಕೆ ಬಂದಿದ್ದ ಶಾಂತಾ ಮತ್ತು ರೇಣುಕಾ ನಡುವೆ ಮಕ್ಕಳ ಎದುರೇ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊAಡಿದ್ದು ಏಕಾಏಕಿ ಇಬ್ಬರೂ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡಿದ್ದಾರೆ.ಈ ಗದ್ದಲ ಕೇಳಿದ ಅಕ್ಕಪಕ್ಕದವರು ಕೇಂದ್ರಕ್ಕೆ ಬಂದು ಜಗಳ ಬಿಡಿಸಿ ಬುದ್ಧಿವಾದ ಹೇಳಿದ್ದಾರೆ.

ವಿಷಯ ತಿಳಿದು ಪೊಲೀಸರು ಆಸ್ಪತ್ರೆಗೆ ತೆರಳಿ ರೇಣುಕಾ ಅವರಿಂದ ಹೇಳಿಕೆ ಪಡೆದುಕೊಂಡಿದ್ದಾರೆ.ಇವರಿಬ್ಬರ ಮಧ್ಯೆ ಮೊದಲಿನಿಂದಲೂ ಹಗೆತನ ಇದ್ದು ಇಬ್ಬರ ಪರವಾಗಿ ತಾಲ್ಲೂಕಿನ ಎರಡು ಅಂಗನವಾಡಿ ಸಂಘಟನೆಗಳ ಮಧ್ಯೆಯೂ ಹೋರಾಟಗಳು ಪ್ರತಿ ಹೋರಾಟಗಳು ನಡೆದಿದ್ದವು.ಇದೀಗ ಈ ಹಂತಕ್ಕೆ ಕಾರ್ಯಕರ್ತೆಯರು ಹೊಡೆದಾಡುವ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಈ ಕುರಿತು ಸಿಡಿಪಿಒ ಶಿವಮೂರ್ತಿ ಕುಂಬಾರ ಅವರನ್ನು ಸಂಪರ್ಕಿಸಿದಾಗ ಘಟನೆಯ ಕುರಿತು ಮಾಹಿತಿ ಬಂದಿದ್ದು ಶನಿವಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದಿದ್ದಾರೆ.ಪಿಲೇಕೆಮ್ಮ ನಗರದ ಒಂದನೇ ಅಂಗನವಾಡಿ ಕೇಂದ್ರದಲ್ಲಿ ಕಳೆದ 30 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವ ಶಾಂತಾ ಅವರನ್ನು ವರ್ಗಾವಣೆ ಮಾಡಿರುವುದೇ ಈ ಅವಾಂತರಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ