ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಮುದ್ದೇಬಿಹಾಳ : ಅಂಗನವಾಡಿಯಲ್ಲಿಯೇ ಕಾರ್ಯಕರ್ತೆಯರಿಬ್ಬರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ಪಟ್ಟಣದ ಪಿಲೇಕೆಮ್ಮನಗರದ ಅಂಗನವಾಡಿ ಕೇಂದ್ರ ನಂ.1 ರಲ್ಲಿ ಶುಕ್ರವಾರ ನಡೆದಿದೆ.

ಕಾರ್ಯಕರ್ತೆಯರಾದ ಶಾಂತಾ ಮಾಮನಿ ಹಾಗೂ ರೇಣುಕಾ ರಾಮಕೋಟಿ ಎಂಬುವರು ಪರಸ್ಪರ ಬಡಿದಾಡಿಕೊಂಡಿದ್ದಾರೆ.ಮೊದಲು ಅದೇ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿದ್ದ ಶಾಂತಾ ಮಾಮನಿ ಅವರು ಸೇವೆ ಸಲ್ಲಿಸುತ್ತಿದ್ದರು. ಅವರನ್ನು ಸಿಡಿಪಿಒ ವರದಿ ಆಧರಿಸಿ ಸಂಗಮೇಶ್ವರ ನಗರದ 1ನೇ ಅಂಗನವಾಡಿ ಕೇಂದ್ರಕ್ಕೆ ಸ್ಥಳ ಬದಲಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಆದೇಶ ಹೊರಡಿಸಿದ್ದರು.ಅವರ ಸ್ಥಾನಕ್ಕೆ ರೇಣುಕಾ ಅವರನ್ನು ಪ್ರಭಾರಿಯಾಗಿ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ.

ರೇಣುಕಾ ಅವರನ್ನು ಕೇಂದ್ರದ ಮೇಲ್ವಿಚಾರಕರು ಗುರುವಾರ ಕರ್ತವ್ಯಕ್ಕೆ ಹಾಜರು ಮಾಡಿಸಿದ್ದರು. ಶುಕ್ರವಾರ ಬೆಳಗ್ಗೆ ಕೇಂದ್ರಕ್ಕೆ ಬಂದಿದ್ದ ಶಾಂತಾ ಮತ್ತು ರೇಣುಕಾ ನಡುವೆ ಮಕ್ಕಳ ಎದುರೇ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊAಡಿದ್ದು ಏಕಾಏಕಿ ಇಬ್ಬರೂ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡಿದ್ದಾರೆ.ಈ ಗದ್ದಲ ಕೇಳಿದ ಅಕ್ಕಪಕ್ಕದವರು ಕೇಂದ್ರಕ್ಕೆ ಬಂದು ಜಗಳ ಬಿಡಿಸಿ ಬುದ್ಧಿವಾದ ಹೇಳಿದ್ದಾರೆ.

ವಿಷಯ ತಿಳಿದು ಪೊಲೀಸರು ಆಸ್ಪತ್ರೆಗೆ ತೆರಳಿ ರೇಣುಕಾ ಅವರಿಂದ ಹೇಳಿಕೆ ಪಡೆದುಕೊಂಡಿದ್ದಾರೆ.ಇವರಿಬ್ಬರ ಮಧ್ಯೆ ಮೊದಲಿನಿಂದಲೂ ಹಗೆತನ ಇದ್ದು ಇಬ್ಬರ ಪರವಾಗಿ ತಾಲ್ಲೂಕಿನ ಎರಡು ಅಂಗನವಾಡಿ ಸಂಘಟನೆಗಳ ಮಧ್ಯೆಯೂ ಹೋರಾಟಗಳು ಪ್ರತಿ ಹೋರಾಟಗಳು ನಡೆದಿದ್ದವು.ಇದೀಗ ಈ ಹಂತಕ್ಕೆ ಕಾರ್ಯಕರ್ತೆಯರು ಹೊಡೆದಾಡುವ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಈ ಕುರಿತು ಸಿಡಿಪಿಒ ಶಿವಮೂರ್ತಿ ಕುಂಬಾರ ಅವರನ್ನು ಸಂಪರ್ಕಿಸಿದಾಗ ಘಟನೆಯ ಕುರಿತು ಮಾಹಿತಿ ಬಂದಿದ್ದು ಶನಿವಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದಿದ್ದಾರೆ.ಪಿಲೇಕೆಮ್ಮ ನಗರದ ಒಂದನೇ ಅಂಗನವಾಡಿ ಕೇಂದ್ರದಲ್ಲಿ ಕಳೆದ 30 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವ ಶಾಂತಾ ಅವರನ್ನು ವರ್ಗಾವಣೆ ಮಾಡಿರುವುದೇ ಈ ಅವಾಂತರಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ