ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಮುದ್ದೇಬಿಹಾಳ : ಮುಡಾ ಹಗರಣದ ತೂಗುಗತ್ತಿ ಯಾವಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೆ ತೂಗಾಡುತ್ತಿದೆಯೋ ಅಲ್ಲಿಂದಲೇ ಅವರಿಗೆ ಮತಿಭ್ರಮಣೆಯಾದಂತಾಗಿದ್ದು ವಕ್ಭ್ಬೋರ್ಡ್ ಹೆಸರಲ್ಲಿ ರೈತರ ಮೇಲೆ ದ್ವೇಷದ ರಾಜಕಾರಣ ಶುರು ಮಾಡಿದ್ದಾರೆ ಎಂದು ಮಾಜಿ ಶಾಸಕ, ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತರು ವಕ್ಭ್ ಬೋರ್ಡ್ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಎರಡನೇ ದಿನದ ಹೋರಾಟದಲ್ಲಿ ಅವರು ಬೆಂಬಲ ಸೂಚಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕರ್ನಾಟಕದಲ್ಲಿ ಎರಡೇ ತಿಂಗಳಲ್ಲಿ ಶೇ.38 ರಷ್ಟು ವಕ್ಭ್ ಆಸ್ತಿ ಹೆಚ್ಚಳವಾಗಿದೆ. ಸಾರ್ವಜನಿಕರು, ಮಠಾಧೀಶರು, ಬಿಜೆಪಿ ಪಕ್ಷದಿಂದ ಹೋರಾಟ ತೀವ್ರಗೊಂಡಾಗ ಸಿಎಂ ರೈತರ ಪಹಣಿಗಳಲ್ಲಿನ ವಕ್ಭ್ ಬೋರ್ಡ ಪದ ತೆಗೆದು ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಆದರೂ ತಹÀಶೀಲ್ದಾರರು , ಡಿಸಿ ಮಲಗಿದ್ದಾರೆಯೇ ಸಿಎಂ ಆದೇಶಕ್ಕೆ ಬೆಲೆ ಇಲ್ಲವೇ ? ಸಿಎಂ ಆದೇಶ ಮಾಡಿದ್ದೇನೆ ಎಂದು ಹೇಳಿಕೆ ಕೊಟ್ಟರೂ ಅದಕ್ಕೆ ಸ್ಪಂದನೆ ಇಲ್ಲವಾಗಿದೆ.ಕಾಂಗ್ರೆಸ್ ಸರ್ಕಾರ ಜನವಿರೋಧಿ, ರೈತ ವಿರೋಧಿ ಸರ್ಕಾರ ಎಂದು ಹೇಳಿದರು.

ಕೇವಲ ಬಾಯಿ ಮಾತಿನ ಮೇಲೆ ನೋಟೀಸ್ ವಾಪಸ್ ಪಡೆದುಕೊಂಡಿದ್ದೇನೆ ಎಂದು ಹೇಳಿದರೆ ಸಾಲದು. ವಕ್ಭ್ ಬೋರ್ಡ್ ಎಂದು ಎಂಟ್ರಿ ಮಾಡಿದ್ದನ್ನು ತೆಗೆದು ಹಾಕಬೇಕು. ಒಂದು ಎಕರೆ ಜಮೀನು ವಕ್ಭ್ ಬೋರ್ಡ್ಗೆ ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಗಂಗಾಧರ ನಾಡಗೌಡ , ಹೋರಾಟಗಾರ ನಾಗಲಿಂಗಯ್ಯ ಮಠ ಮಾತನಾಡಿ, ಸರ್ಕಾರದ ಕ್ರಮ ವಿರುದ್ಧ ಆಕ್ರೋಶ ಹೊರಹಾಕಿದರು. ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ 400 ಎಕರೆ ಜಮೀನುಗಳ ಮೇಲೆ ವಕ್ಭ್ ಬೋರ್ಡ್ ಹೆಸರು ಇರುವುದನ್ನು ತೆಗೆದು ಹಾಕಬೇಕು ಎಂದು ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಶಾಸಕ ಅಪ್ಪಾಜಿ ಮೌನವೇಕೆ ?: ತಾಲ್ಲೂಕಿನ ರೈತರಿಗೆ ಅನ್ಯಾಯವಾಗುತ್ತಿದ್ದರೂ ಶಾಸಕರು ಏನು ಮಾಡುತ್ತಿದ್ದೀರಿ ? ರೈತರ ಆಸ್ತಿ ಲೂಟಿ ಹೊಡೆಯುವವರ ಪರವಾಗಿದ್ದೀರಾ ? ಎಂದು ಮಾಜಿ ಶಾಸಕ ನಡಹಳ್ಳಿ ಪ್ರಶ್ನಿಸಿದರು.ಸಿಎಂ ಹೇಳಿಕೆ ಕೊಟ್ಟಿದ್ದು, ಆ ಬಗ್ಗೆ ಶಾಸಕರು ಹೋರಾಟಗಾರರಿಗೆ ಮನವರಿಕೆ ಮಾಡಿಕೊಡಬೇಕಿತ್ತು.ಆದರೆ ಈವರೆಗೂ ಅವರಿಂದ ರೈತರಪರವಾಗಿ ಒಂದು ಹೇಳಿಕೆ ಇಲ್ಲ.ತಹಶೀಲ್ದಾರ್‌ಗೆ ತಿಳಿಸಿ ವಕ್ಭ್ ಬೋರ್ಡ ಕರ್ನಾಟಕ ಸರ್ಕಾರ ತಗೆದುಹಾಕಲು ತಿಳಿಸಬೇಕು ಎಂದು ಹರಿಹಾಯ್ದರು.ಮುಖಂಡ ಕೆಂಚಪ್ಪ ಬಿರಾದಾರ, ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಸಂಗಣ್ಣ ಕುಂಬಾರ,ರವಿ ಜಗಲಿ,ರವೀಂದ್ರ ಬಿರಾದಾರ, ರೈತ ಸಂಘಟನೆಯ ಮುಖಂಡ ಸಂಗಣ್ಣ ಬಾಗೇವಾಡಿ ಸೇರಿದಂತೆ ರೈತ ಮಹಿಳೆಯರು ಪಾಲ್ಗೊಂಡಿದ್ದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು