ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಮುದ್ದೇಬಿಹಾಳ : ಕೆರೆಯನ್ನು ಅತಿಕ್ರಮಣ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ಇದ್ದರೂ ಅಲ್ಲಿ ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ.ಬರೀ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದೀರಿ. ಇಂದಿರಾನಗರದಲ್ಲಿ ಬಡವರು ಮನೆಗಳು,ಶೆಡ್‌ಗಳನ್ನು ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲಿತ ಸಮುದಾಯದವರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ ಎಂದು ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹರಿಹಾಯ್ದರು.

ಪಟ್ಟಣದಲ್ಲಿ ಮಾತನಾಡಿದ ಅವರು, ತಹಶೀಲ್ದಾರ್ ವಿರುದ್ಧವೂ ಏಕವಚನ ಪ್ರಯೋಗಿಸಿ, ಏಯ್ ತಹಶೀಲ್ದಾರ್ ಕತ್ತೆ ಕಾಯ್ತಿದ್ದೀಯಾ ? ಹಿಂದೂಗಳದ್ದಾದರೆ ಒಡೆದು ಹಾಕುವುದು, ಮುಸ್ಲಿಂರದ್ದಾದರೆ ಸುಮ್ಮನೆ ಬಿಡುತ್ತೀರಾ ? ಹತ್ತು ಎಕರೆ ಸ್ಮಶಾನವನ್ನು ಅತಿಕ್ರಮಣ ಮಾಡಿಕೊಂಡಿರುವವರು ಯಾರು ? ಪುರಸಭೆ ಅಧ್ಯಕ್ಷ ಹೇಳಬೇಕು. ತಹಶೀಲ್ದಾರ್‌ರು, ಪೊಲೀಸರು, ಮುಖ್ಯಾಧಿಕಾರಿಗಳಿಗೆ ದಮ್ ಇದ್ದರೆ ಕೆರೆಯ ಅತಿಕ್ರಮಣ ತೆರವು ಮಾಡಿ ಎಂದು ನಡಹಳ್ಳಿ ಖಾರವಾಗಿ ಪ್ರಶ್ನಿಸಿದರು.

ದನದ ಕೊಂಡವಾಡದ ಜಾಗೆಯಲ್ಲಿ ಮದರಸಾ ಶಾಲೆ ನಿರ್ಮಿಸುತ್ತಿದ್ದೀಯಾ ಎಂದು ಪುರಸಭೆ ಅಧ್ಯಕ್ಷರಿಗೆ ಮಾಜಿ ಶಾಸಕರು ಪ್ರಶ್ನಿಸಿದರು. ಇಂದಿರಾ ಸರ್ಕಲ್‌ದಲ್ಲಿ ಒಂದು ಅಂಗಡಿ ತೆರವು ಮಾಡಲಿಲ್ಲ. ಅವರನ್ನು ಮುಟ್ಟಿದರೆ ಅವರು ಇವರಿಗೆ ಒದ್ದು ಕಳಿಸುತ್ತಾರೆ. ಅದಕ್ಕೆ ಅಲ್ಲಿನವರನ್ನು ತೆರವು ಮಾಡಬೇಡಿ ಎಂಬುದು ಶಾಸಕರ ಸೂಚನೆ ಇದೆ.ಬಡವರು, ದಲಿತರು, ಬೀದಿ ಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ಮಾಡುವುದನ್ನು ಕೈ ಬಿಡಬೇಕು.ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡಬೇಕು.ನನ್ನ ಅವಧಿಯಲ್ಲಿ ಈ ರೀತಿಯ ಚಟುವಟಿಕೆಗಳಿಗೆ ಆಸ್ಪದ ಕೊಟ್ಟಿರಲಿಲ್ಲ ಎಂದು ಹೇಳಿದರು.

ಶಾಸಕ ನಾಡಗೌಡರಿಗೆ ಬಹಿರಂಗ ಸವಾಲು ಹಾಕಿದ ಮಾಜಿ ಶಾಸಕ ನಡಹಳ್ಳಿ ನನ್ನ ಅವಧಿಯಲ್ಲಿ 1500 ಕೋಟಿ ರೂ.ಗಳ ಅಭಿವೃದ್ಧಿ ಬಗ್ಗೆ ದಾಖಲೆಗಳಿದ್ದು ಅವರು ಪತ್ರಿಕಾಗೋಷ್ಠಿ ಮಾಡಿ ಕೇಳಲಿ ಕೊಡುತ್ತೇನೆ.ಒಂದೂವರೆ ವರ್ಷದಲ್ಲಿ ಏನು ತಂದಿದ್ದಾರೆ ಎಂಬುದನ್ನು ಅವರು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಅನಾರೋಗ್ಯದಲ್ಲೂ ನಡಹಳ್ಳಿ ಬೆಂಬಲ: ಕಾಲಿನ ಶಸ್ತçಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದರೂ ಶುಕ್ರವಾರ ಎರಡನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ರೈತಪರ ನಡೆಗೆ ಸಾರ್ವಜನಿಕರ ಮೆಚ್ಚುಗೆ ಪಾತ್ರವಾಯಿತು.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ