Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

T20 Match India vs South Africa: ಸೌತ್​​ ಆಫ್ರಿಕಾದ ಡರ್ಬನ್​ನಲ್ಲಿ ಸಂಜು ಸ್ಯಾಮ್ಸನ್ (Sanju Samson) ಶೋ ಸಖತ್​​ ಆಗಿ ಮೂಡಿಬಂತ್ತು. ಹೌದು, ಸಂಜು ಸ್ಯಾಮ್ಸನ್​ ಸ್ಪೋಟಕ ಆಟಕ್ಕೆ ಸೌತ್​ ಆಫ್ರಿಕಾ ಬೌಲರ್​ಗಳು ಕಕ್ಕಾಬಿಕ್ಕಿಯಾದರು.

ಸಿಕ್ಸ್​​.. ಸಿಕ್ಸ್​​.. ಸಿಕ್ಸ್​.. ಡರ್ಬನ್​ನಲ್ಲಿ ನಿನ್ನೆ ಸಿಕ್ಸರ್​​ಗಳ ಸುರಿಮಳೆ ಸುರಿಯಿತು. ಒಂದಲ್ಲ.. ಎರಡಲ್ಲ.. ಬರೋಬ್ಬರಿ 10 ಸಿಕ್ಸರ್​ಗಳು! ಇಡೀ ತಂಡದ್ದಲ್ಲ.. ಒಬ್ಬನೇ ಒಬ್ಬ ಸಿಡಿಸಿದ ಸಿಕ್ಸರ್​ಗಳಿವು!

ನಿನ್ನೆ ನಡೆದ ಸೌತ್​ ಆಫ್ರಿಕಾ ವಿರುದ್ಧದ T20 Matchನಲ್ಲಿ ಟಾಸ್​​ ಸೋತು ಬ್ಯಾಟಿಂಗ್​ಗಿಳಿದ ಟೀಮ್​ ಇಂಡಿಯಾ ಆರಂಭದಲ್ಲೇ ವಿಕೆಟ್​ ಕಳೆದುಕೊಂಡಿತು. ಓಪನರ್​ ಅಭಿಶೇಕ್​ ಶರ್ಮಾ 7 ರನ್​ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಕ್ರಿಸ್​ಗೆ ಬಂದ ಸೂರ್ಯಕುಮಾರ್​ ಯಾದವ್​ ಅಬ್ಬರಿಸಿ ಮರೆಯಾದರು. 1 ಸಿಕ್ಸರ್​​, 2 ಬೌಂಡರಿ ಸಿಡಿಸಿದ ಸೂರ್ಯ 21 ರನ್​ಗಳಿಸಿ ನಿರ್ಗಮಿಸಿದರು.

ಒಂದೆಡೆ ವಿಕೆಟ್​ ಉರುಳ್ತಾ ಇದ್ರೆ, ಇನ್ನೊಂದೆಡೆ ಸೈಲೆಂಟ್ ಸ್ಟಾರ್​​ ಸಂಜು (Sanju Samson) ಫುಲ್​ ವೈಲೆಂಟ್​ ಆಗಿದ್ದರು. ಸೌತ್​ ಆಫ್ರಿಕಾ ಬೌಲರ್​​ಗಳ ಬೆಂಡೆತ್ತಿದ ಸಂಜು, ಸಿಕ್ಸರ್​ಗಳ ಮಳೆ ಸುರಿಸಿದರು. ಸಂಜು ಸ್ಯಾಮ್ಸನ್​ ಆಟಕ್ಕೆ ಸೌತ್​ ಆಫ್ರಿಕಾ ಬೌಲರ್​ಗಳ ಬಳಿ ಆನ್ಸರೇ ಇರಲಿಲ್ಲ. ಕ್ಯಾಪ್ಟನ್​ ಮರ್ಕರಮ್​ಗೆ ಫೀಲ್ಡ್​ ಪ್ಲೇಸ್​ಮೆಂಟ್​ ಮಾಡೋ ಟೆನ್ಶನ್​​ ಅನ್ನೋದು ಬರೆಲೇ ಇಲ್ಲ. ಸಂಜು ಹೊಡೆದ ಶಾಟ್ಸ್​​ಗಳು ಎಲ್ಲಾ ಬೌಂಡರಿಯಾಚೆ ಹೋಗುತ್ತಿದ್ದವು.

ಡರ್ಬನ್​ನ T20 Matchನಲ್ಲಿ 10 ಸಿಕ್ಸರ್​ ಸಿಡಿಸಿ ಮಿಂಚಿದ ಸಂಜು (Sanju Samson) ಸ್ಯಾಮ್ಸನ್​ 7 ಕ್ಲಾಸಿಕ್​ ಬೌಂಡರಿಗಳನ್ನೂ ಚಚ್ಚಿದ್ರು. ಬರೋಬ್ಬರಿ 214ರ ಸ್ಟ್ರೈಕ್​ರೇಟ್​ನಲ್ಲಿ ಬ್ಯಾಟ್​ ಬೀಸಿದ ಸ್ಯಾಮ್ಸನ್​ 47 ಎಸೆತಗಳಲ್ಲೇ ಸೆಂಚುರಿ ಸಿಡಿಸಿ ಮಿಂಚಿದರು.

ಸಂಜು ಸ್ಯಾಮ್ಸನ್​ಗೆ ಸಾಥ್​ ಕೊಟ್ಟ ತಿಲಕ್​ ವರ್ಮಾ 18 ಎಸೆತಗಳಲ್ಲೇ 33 ರನ್​ ಚಚ್ಚಿದ್ರು. 3 ಬೌಂಡರಿ, 2 ಸಿಕ್ಸರ್​ಗಳನ್ನ ಬಾರಿಸಿದರು. 33 ರನ್​ಗಳಿಸಿ ತಿಲಕ್​ ವರ್ಮಾ ಔಟಾದರೆ ಶತಕದ ಬೆನ್ನಲ್ಲೇ ಸಂಜು ಸ್ಯಾಮ್ಸನ್​ ವಿಕೆಟ್​ ಒಪ್ಪಿಸಿದರು. ಇದ್ರೊಂದಿಗೆ ಟೀಮ್​ ಇಂಡಿಯಾ ಕುಸಿತ ಆರಂಭವಾಯ್ತು.

ಹಾರ್ದಿಕ್​ ಪಾಂಡ್ಯ, ರಿಂಕು ಸಿಂಗ್​, ಅಕ್ಷರ್​ ಪಟೇಲ್​ ಅಲ್ಪ ಮೊತ್ತಕ್ಕೆ ಔಟಾದರು. ಪರಿಣಾಮ ಟೀಮ್​ ಇಂಡಿಯಾ ಕೊನೆಯ 6 ಓವರ್​ಗಳಲ್ಲಿ ಕೇವಲ 40 ರನ್​ಗಳಿಸಿತು. ಅಂತಿಮವಾಗಿ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 202 ರನ್​ ಕಲೆ ಹಾಕಿತು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ