SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

ಬೆಂಗಳೂರು: ಮೆಡಿಕಲ್‌ ಕಾಲೇಜು ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರೂಪಾಯಿವರೆಗೆ ಕಾಲೇಜು ಶುಲ್ಕ ಪಾವತಿಸುವ ಸಮಾಜ ಕಲ್ಯಾಣ ಇಲಾಖೆಯ ಪ್ರೋತ್ಸಾಹಧನ ಯೋಜನೆಯನ್ನು ಆರ್ಥಿಕ ಇಲಾಖೆಯು ತಿರಸ್ಕರಿಸಿದೆ.

ಸಮಾಜ ಕಲ್ಯಾಣ ಇಲಾಖೆಯು ಅ.24ರಂದು ಹೊರಡಿಸಿರುವ ‘ಸೇರ್ಪಡೆ ಆದೇಶ’ದ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.95ರಷ್ಟು ಅಂಕ ಪಡೆದು, ನೀಟ್ ಪರೀಕ್ಷೆಯ ರ್ಯಾಂಕ್‌ನಿಂದ ಸರ್ಕಾರಿ ಕೋಟಾದಡಿ ಸೀಟ್ ಲಭ್ಯವಾಗದೆ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ಕಾಲೇಜು ಶುಲ್ಕ ಪಾವತಿಸಲು 25 ಲಕ್ಷ ಪ್ರೋತ್ಸಾಹ ಧನ ನೀಡಬೇಕು. ಅಲ್ಲದೇ, ಆ ವಿದ್ಯಾರ್ಥಿ 1ನೇ ವರ್ಷದ ಪರೀಕ್ಷೆಯಲ್ಲಿ ಶೇ.60 ರಷ್ಟು ಅಂಕ ಪಡೆದರೆ ಪುನಃ 25 ಲಕ್ಷ ರೂಪಾಯಿ ಮಂಜೂರು ಮಾಡಬೇಕು ಎಂದು ತಿಳಿಸಲಾಗಿತ್ತು. ಆದರೆ, ಈ ಆದೇಶ ಹೊರಡಿಸಿದ ಎರಡೇ ದಿನಗಳಲ್ಲಿ ಅಂದರೆ ಅ.26ರಂದು ಹಣಕಾಸು ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿದೆ.

ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯೊಂದಿಗೆ ಮೆರಿಟ್ ಆಧಾರದ ಮೇಲೆ ಹಾಸ್ಟೆಲ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೂಲಸೌಕರ್ಯ ಸುಧಾರಣೆಗಾಗಿ ಅನುದಾನ ಕೋರಿರುವ ಅನೇಕ ಪ್ರಸ್ತಾವನೆಗಳು ಬಾಕಿ ಇವೆ. ಇಂತಹ ಸಂದರ್ಭದಲ್ಲಿ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರೋತಾಹಧನ ನೀಡುವ ಯೋಜನೆಯನ್ನು ಕೈಬಿಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನುಸಾರ ಈ ಕ್ರಮ ವಹಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಗೆ ಆರ್ಥಿಕ ಇಲಾಖೆ ತಿಳಿಸಿದೆ ಎಂದು ಮೂಲಗಳಿಂದ ಖಚಿತವಾಗಿದೆ.

ಮೆರಿಟ್ ಸೀಟು ಪಡೆದವರಿಗೆ ಸಿಗೋದು ₹2 ಲಕ್ಷ!

ಇಲಾಖೆಯು ಹಾಲಿ ಹೊಂದಿರುವ ಯೋಜನೆಯಡಿಯಲ್ಲಿ ಕಠಿಣವಾದ ಸ್ಪರ್ಧಾತ್ಮಕ ಪ್ರವೇಶಪರೀಕ್ಷೆಗಳನ್ನು ಬರೆದು ಐಐಟಿ, ಐಐಎಂ, ಐಐಎಸಿ, ಎನ್‌ಐಟಿ ಮುಂತಾದಡೆ ಸೀಟು ಪಡೆಯುವ ಪ್ರತಿಭಾನ್ವಿತರಿಗೆ ಹಾಗೂ ನೀಟ್ ಮೂಲಕ ಸರ್ಕಾರಿ ಸೀಟು ಪಡೆದು ಎಂಬಿಬಿಎಸ್ ಓದುವವರಿಗೆ 2 ಲಕ್ಷ ರು. ಪ್ರೋತ್ಸಾಹಧನ ನೀಡ ಲಾಗುತ್ತಿದೆ. ಹೀಗಿರುವಾಗ ಆಡಳಿತ ಮಂಡಳಿ ಕೋಟಾದವರಿಗೆ 50 ಲಕ್ಷ ರು. ಪ್ರೋತ್ಸಾಹಧನ ನೀಡುವುದು ಅಸಮಂಜಸವಾಗುತ್ತದೆ ಎನ್ನುವ ಕಾರಣಕ್ಕೆ ಆರ್ಥಿಕ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ