ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ಸಂಬAಧಿಸಿದAತೆ ಕಾರ್ಯಕರ್ತೆ ಶಾಂತಾ ಮಾಮನಿ ಅವರನ್ನು ಸುಳ್ಳು ಆರೋಪಗಳ ಆಧಾರದ ಮೇಲೆ ವರ್ಗಾವಣೆಗೆ ಹುನ್ನಾರ ನಡೆಸಿದಾಗ ಪ್ರತಿಭಟನೆ ನಡೆಸಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಲಿಖಿತ ಪತ್ರ ಸಲ್ಲಿಸಿ ಕಾರ್ಯಕರ್ತೆಗೆ ಕಿರುಕುಳ ಕೊಡುತ್ತಿರುವ ಬಗ್ಗೆ ಗಮನ ಸೆಳೆಯಲಾಗಿತ್ತು.ಆಗ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಹಾಗೆ ಬಿಟ್ಟಿದ್ದರು.ಕಾರ್ಯಕರ್ತೆ ಮಗಳ ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿ ಹೋದ ಸಮಯವನ್ನು ತಿಳಿದುಕೊಂಡು ಸಿಡಿಪಿಓ ಶಿಫಾರಸ್ಸಿನ ಮೇರೆಗೆ ಇಲಾಖೆಯ ಉಪನಿರ್ದೇಶಕರು ಶಾಂತಾ ಮಾಮನಿ ಅವರ ಜಾಗಕ್ಕೆ ರೇಣುಕಾ ರಾಮಕೋಟಿ ಎನ್ನುವರನ್ನು ನಿಯೋಜಿಸಿದ್ದಾರೆ ಎಂದು ದೂರಿದರು.

ಸಿಡಿಪಿಒ, ಮೇಲ್ವಿಚಾರಕಿಯರು ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ. ಉಪನಿರ್ದೇಶಕರು ಸ್ವಜಾತಿ ಪ್ರೇಮ ಮೆರೆದಿದ್ದು ತಮ್ಮ ವರ್ಗಾವಣೆ ಆದೇಶ ಬಾರದೇ ಮೂಲ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಜೊತೆಗೆ ಇದ್ದವರು ಶಾಂತಾ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನನಗೆ ಮಗಳ ಅನಾರೋಗ್ಯದ ಸಲುವಾಗಿ ರಜೆ ಪಡೆದುಕೊಂಡಿದ್ದೆ.ಒAದೆರಡು ದಿನ ಬರಲು ಆಗುವುದಿಲ್ಲ ಎಂದು ಮೇಲ್ವಿಚಾರಕಿಯರಿಗೂ ತಿಳಿಸಿದ್ದೆ.ಆದರೆ ನನಗೆ ಬೇರೆಡೆ ವರ್ಗಾವಣೆ ಆಗಿದೆ ಎಂದು ಮೌಖಿಕವಾಗಿ ತಿಳಿಸಿದರು.ಇದಾದ ಬಳಿಕ ನಾನು ಮೂಲಕ ಕೆಲಸ ಮಾಡುವ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಸಂಗಡಿಗರು ಹಲ್ಲೆ ಮಾಡಿದರು.ನಾನು ಒಂದೆರಡು ಏಟು ಅವರಿಗೆ ಮರಳಿ ಕೊಟ್ಟಿದ್ದೇನೆ.ಮೂವ್ವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ಮೇಲೆ ಸುಳ್ಳು ಆರೋಪ ಮಾಡಿ ಬೇರೆಡೆ ವರ್ಗಾವಣೆ ಮಾಡಿದರೆ ಹೇಗೆ ಸಹಿಸುವುದು ? ಬಾಣಂತಿಯರು, ಮಕ್ಕಳು ಆಹಾರ ಕೊಟ್ಟಿಲ್ಲ ಎಂದು ಹೇಳಿದರೆ ಅಲ್ಲಿಂದ ಬೇರೆ ಎಲ್ಲಿಯಾದರೂ ಕಳಿಸಿದರೂ ಅಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮಧ್ಯೆಯೇ ದ್ವೇಷದ ವಾತಾವರಣ ಬಿತ್ತುತ್ತಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ, ಮೇಲ್ವಿಚಾರಕಿಯವರನ್ನು ಅಮಾನತುಗೊಳಿಸಬೇಕು.ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನ.11 ರಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಶೋಭಾ ಕಾಖಂಡಕಿ, ಎಸ್.ಎ.ಹುಣಶ್ಯಾಳ ಸೇರಿದಂತೆ ಹಲವರು ಇದ್ದರು.


ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ 15 ಬಾರಿ ಭೇಟಿ ಕೊಟ್ಟಿದ್ದೇನೆ.ಸದರಿ ಕಾರ್ಯಕರ್ತೆ ಶಾಂತಾ ಮಾಮನಿ ಅವರು ಮೇಲ್ವಿಚಾರಕಿಯವರು ವಗಾವಣೆ ಪ್ರತಿ ಕೊಡಲು ಹೋದರೂ ಪಡೆದುಕೊಂಡಿಲ್ಲ.ಜಗಳದ ವಿಷಯಕ್ಕೆ ಸಂಬAಧಿಸಿದAತೆ ಕಾರಣ ಕೇಳಿ ಇಬ್ಬರಿಗೂ ನೋಟಿಸ್ ಕೊಟ್ಟಿದ್ದೇವೆ.ಮೂರು ದಿನದಲ್ಲಿ ಅವರಿಂದ ಉತ್ತರ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಸಿಡಿಪಿಓ ಶಿವಮೂರ್ತಿ ಕುಂಬಾರ ಪತ್ರಿಕೆಗೆ ತಿಳಿಸಿದ್ದಾರೆ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600