ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ಸಂಬAಧಿಸಿದAತೆ ಕಾರ್ಯಕರ್ತೆ ಶಾಂತಾ ಮಾಮನಿ ಅವರನ್ನು ಸುಳ್ಳು ಆರೋಪಗಳ ಆಧಾರದ ಮೇಲೆ ವರ್ಗಾವಣೆಗೆ ಹುನ್ನಾರ ನಡೆಸಿದಾಗ ಪ್ರತಿಭಟನೆ ನಡೆಸಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಲಿಖಿತ ಪತ್ರ ಸಲ್ಲಿಸಿ ಕಾರ್ಯಕರ್ತೆಗೆ ಕಿರುಕುಳ ಕೊಡುತ್ತಿರುವ ಬಗ್ಗೆ ಗಮನ ಸೆಳೆಯಲಾಗಿತ್ತು.ಆಗ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಹಾಗೆ ಬಿಟ್ಟಿದ್ದರು.ಕಾರ್ಯಕರ್ತೆ ಮಗಳ ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿ ಹೋದ ಸಮಯವನ್ನು ತಿಳಿದುಕೊಂಡು ಸಿಡಿಪಿಓ ಶಿಫಾರಸ್ಸಿನ ಮೇರೆಗೆ ಇಲಾಖೆಯ ಉಪನಿರ್ದೇಶಕರು ಶಾಂತಾ ಮಾಮನಿ ಅವರ ಜಾಗಕ್ಕೆ ರೇಣುಕಾ ರಾಮಕೋಟಿ ಎನ್ನುವರನ್ನು ನಿಯೋಜಿಸಿದ್ದಾರೆ ಎಂದು ದೂರಿದರು.

ಸಿಡಿಪಿಒ, ಮೇಲ್ವಿಚಾರಕಿಯರು ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ. ಉಪನಿರ್ದೇಶಕರು ಸ್ವಜಾತಿ ಪ್ರೇಮ ಮೆರೆದಿದ್ದು ತಮ್ಮ ವರ್ಗಾವಣೆ ಆದೇಶ ಬಾರದೇ ಮೂಲ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಜೊತೆಗೆ ಇದ್ದವರು ಶಾಂತಾ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನನಗೆ ಮಗಳ ಅನಾರೋಗ್ಯದ ಸಲುವಾಗಿ ರಜೆ ಪಡೆದುಕೊಂಡಿದ್ದೆ.ಒAದೆರಡು ದಿನ ಬರಲು ಆಗುವುದಿಲ್ಲ ಎಂದು ಮೇಲ್ವಿಚಾರಕಿಯರಿಗೂ ತಿಳಿಸಿದ್ದೆ.ಆದರೆ ನನಗೆ ಬೇರೆಡೆ ವರ್ಗಾವಣೆ ಆಗಿದೆ ಎಂದು ಮೌಖಿಕವಾಗಿ ತಿಳಿಸಿದರು.ಇದಾದ ಬಳಿಕ ನಾನು ಮೂಲಕ ಕೆಲಸ ಮಾಡುವ ಕೇಂದ್ರಕ್ಕೆ ಹೋದಾಗ ಅಲ್ಲಿದ್ದ ರೇಣುಕಾ ಹಾಗೂ ಅವರ ಸಂಗಡಿಗರು ಹಲ್ಲೆ ಮಾಡಿದರು.ನಾನು ಒಂದೆರಡು ಏಟು ಅವರಿಗೆ ಮರಳಿ ಕೊಟ್ಟಿದ್ದೇನೆ.ಮೂವ್ವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ಮೇಲೆ ಸುಳ್ಳು ಆರೋಪ ಮಾಡಿ ಬೇರೆಡೆ ವರ್ಗಾವಣೆ ಮಾಡಿದರೆ ಹೇಗೆ ಸಹಿಸುವುದು ? ಬಾಣಂತಿಯರು, ಮಕ್ಕಳು ಆಹಾರ ಕೊಟ್ಟಿಲ್ಲ ಎಂದು ಹೇಳಿದರೆ ಅಲ್ಲಿಂದ ಬೇರೆ ಎಲ್ಲಿಯಾದರೂ ಕಳಿಸಿದರೂ ಅಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮಧ್ಯೆಯೇ ದ್ವೇಷದ ವಾತಾವರಣ ಬಿತ್ತುತ್ತಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ, ಮೇಲ್ವಿಚಾರಕಿಯವರನ್ನು ಅಮಾನತುಗೊಳಿಸಬೇಕು.ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನ.11 ರಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಶೋಭಾ ಕಾಖಂಡಕಿ, ಎಸ್.ಎ.ಹುಣಶ್ಯಾಳ ಸೇರಿದಂತೆ ಹಲವರು ಇದ್ದರು.


ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ 15 ಬಾರಿ ಭೇಟಿ ಕೊಟ್ಟಿದ್ದೇನೆ.ಸದರಿ ಕಾರ್ಯಕರ್ತೆ ಶಾಂತಾ ಮಾಮನಿ ಅವರು ಮೇಲ್ವಿಚಾರಕಿಯವರು ವಗಾವಣೆ ಪ್ರತಿ ಕೊಡಲು ಹೋದರೂ ಪಡೆದುಕೊಂಡಿಲ್ಲ.ಜಗಳದ ವಿಷಯಕ್ಕೆ ಸಂಬAಧಿಸಿದAತೆ ಕಾರಣ ಕೇಳಿ ಇಬ್ಬರಿಗೂ ನೋಟಿಸ್ ಕೊಟ್ಟಿದ್ದೇವೆ.ಮೂರು ದಿನದಲ್ಲಿ ಅವರಿಂದ ಉತ್ತರ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಸಿಡಿಪಿಓ ಶಿವಮೂರ್ತಿ ಕುಂಬಾರ ಪತ್ರಿಕೆಗೆ ತಿಳಿಸಿದ್ದಾರೆ.

Latest News

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.