ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 1 ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಕಾರ್ಯಕರ್ತೆಯರ ಮಧ್ಯೆ ಜಗಳ ಹಚ್ಚಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಹಾಗೂ ಮೇಲ್ವಿಚಾರಕಿ ಶಾಂತಾ ಗುಮಶೆಟ್ಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರದಿಂದ ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಹಾಗೂ ಸಹಾಯಕಿಯರ ಸೇವಾ ಸಂಘದ ಪದಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ ಕೇಂದ್ರಗಳ ಅವಧಿ ಮುಗಿದ ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಧರಣಿಯಲ್ಲಿ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಶಾಂತಾ ಮಾಮನಿ ಅವರು ಕಾನೂನು ಬದ್ಧವಾಗಿ ಅಲ್ಲಿನ ನಿವಾಸಿಗಳಿಗೆ ಒಳ್ಳೆಯ ಸೇವೆ ನೀಡಿದ್ದರೂ ಸಿಡಿಪಿಒ ಅವರ ಕುತಂತ್ರದಿAದ ರೇಣುಕಾ ಎಂಬ ಕಾರ್ಯಕರ್ತೆಗೆ ಅನುಕೂಲ ಮಾಡಿಕೊಡಲು ಹೆಚ್ಚುವರಿ ಆದೇಶ ಮಾಡಿ ಅನ್ಯಾಯ ಎಸಗಿದ್ದಾರೆ. ಈ ಬಗ್ಗೆ ಕೇಳಲು ಹೋದ ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ರೇಣುಕಾ ಹಾಗೂ ಸಹಾಯಕಿ, ಅವರ ಪುತ್ರಿ ಆಗಮಿಸಿ ಕೇಂದ್ರದಲ್ಲಿ ಬಡಿದಿದ್ದಾರೆ. ಹೊಡೆದಾಡುವ ಮುನ್ನ ರೇಣುಕಾ ಅವರು ವ್ಯವಸ್ಥಿತವಾಗಿ ಕೆಲವರನ್ನು ಕರೆತಂದು ಘಟನೆಯ ವಿಡಿಯೋ ಚಿತ್ರೀಕರಣ ಮಾಡುವಂತೆ ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದ್ದು ಶಾಂತಾ ಮಾಮನಿ ವಿರುದ್ಧ ದೂರು ದಾಖಲಿಸುವ ಕುತಂತ್ರವಾಗಿದೆ.ಇದಕ್ಕೆಲ್ಲ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರೇ ನೇರ ಹೊಣೆಗಾರರು.ಪಿಲೇಕೆಮ್ಮ ನಗರದ ಕೇಂದ್ರದಿAದ ಸಂಗಮೇಶ್ವರ ನಗರದ ಅಂಗನವಾಡಿ ಕೇಂದ್ರಕ್ಕೆ ಶಾಂತಾ ಮಾಮನಿ ಅವರನ್ನು ವರ್ಗಾವಣೆ ಮಾಡಿರುವುದಾಗಿ ಹೇಳುತ್ತಿರುವ ಅಧಿಕಾರಿಗಳು ಅಲ್ಲಿಗೆ ಅವರನ್ನು ಹಾಜರುಪಡಿಸದೇ ಬಿಟ್ಟಿದ್ದೇಕೆ ? ಎಂದು ಪ್ರಶ್ನಿಸಿದರು.

ಶಾಂತಾ ಮಾಮನಿ ಅವರಷ್ಟೇ ಅಲ್ಲದೇ ತಾಲ್ಲೂಕಿನ ಹಲವು ಅಂಗನವಾಡಿ ನೌಕರರಿಗೆ ಸಿಡಿಪಿಒ ಕುಂಬಾರ ಅವರಿಂದ ಸಮಸ್ಯೆ ಆಗುತ್ತಿದೆ. ಕಾರ್ಯಕರ್ತೆಯ ವರ್ಗಾವಣೆಗೆ ಶಾಸಕರು ಪತ್ರ ಕೊಟ್ಟಿದ್ದಾರೆ ಎಂಬುದನ್ನು ನಾವು ನಂಬುವುದಿಲ್ಲ ಎಂದು ಹೇಳಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನಾನು ಕಳೆದ 30 ವರ್ಷಗಳಿಂದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದೇನೆ.ನನಗೆ ಅಲ್ಲಿನ ಪುರಸಭೆ ಸದಸ್ಯೆಯ ಪುತ್ರನಿಂದ ಕಿರುಕಳ ಆಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ರೇಣುಕಾ ಅವರನ್ನು ಕೇಂದ್ರಕ್ಕೆ ತರಬೇಕು.ನನ್ನನ್ನು ಅಲ್ಲಿಂದ ಬೇರೆ ಕಳಿಸಬೇಕು ಎಂಬುದು ಇವರ ದುರುದ್ದೇಶವಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತೆಯರಾದ ಶೋಭಾ ಘಾಟಗೆ, ಶೋಭಾ ಕಾಖಂಡಕಿ, ವಿದ್ಯಾ ಮುರಾಳ, ಗುರುಬಾಯಿ ಕಾಳಗಿ, ಶಮಶ್ಯಾದ ಹುಣಶ್ಯಾಳ, ಸುನೀತ, ನೀಲಮ್ಮ ತೊಂಡಿಹಾಳ, ಮಂಜುಳಾ ಜಾಧವ, ಅಂಬುಜಾ ಕುಲಕರ್ಣಿ, ನಿರ್ಮಲಾ ನಾಶಿ, ರಾಜೇಶ್ವರಿ ಮಮದಾಪೂರ, ಷರೀಫಾ ಸಗರ,ಜೈಬುನ್ನಿಸಾ ದಿಡ್ಡಿಮನಿ ಇದ್ದರು.


ಹೋರಾಟಕ್ಕೆ ಬರುವಾಗ ಕಾರು ಅಡ್ಡಗಟ್ಟಿದ್ದಾರೆ:
ಸಿಡಿಪಿಒ ವಿರುದ್ಧ ಹೋರಾಟಕ್ಕೆ ಬರುವಾಗ ನನ್ನ ಕಾರನ್ನು ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ಅಡ್ಡಗಟ್ಟಿದರು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯಾಧ್ಯಕ್ಷೆ ನೀಲಮ್ಮ ಪಾಟೀಲ್ ದೂರಿದರು. ಕುಂಟೋಜಿ ಚರ್ಚ್ ದಾಟಿ ಬರುವ ರಸ್ತೆಯಲ್ಲಿ ನಾಲ್ವರು ರಸ್ತೆಯ ಮಧ್ಯೆಯೇ ಕಾರು ನಿಲ್ಲಿಸಿ ಹೋರಾಟಕ್ಕೆ ಏಕೆ ಹೊರಟಿದ್ದೀರಿ ಎಂದು ಪ್ರಶ್ನಿಸಿದರಲ್ಲದೇ ಕಾರಿನಿಂದ ಕೆಳಗಿಳಿಯುವಂತೆ ದಬಾಯಿಸಿದ್ದಾರೆ.ಆದರೆ ನಾನು ರಸ್ತೆಯಲ್ಲಿ ಇತರ ವಾಹನಗಳ ಚಾಲಕರ ಸಹಾಯದಿಂದ ಮುದ್ದೇಬಿಹಾಳದ ಹೋರಾಟದ ಸ್ಥಳಕ್ಕೆ ಬಂದಿದ್ದೇನೆ. ಹೋರಾಟ ಮಾಡುವುದಕ್ಕೂ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ನೀಲಮ್ಮ ಆರೋಪಿಸಿದರು.

.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ