ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 1 ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಕಾರ್ಯಕರ್ತೆಯರ ಮಧ್ಯೆ ಜಗಳ ಹಚ್ಚಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಹಾಗೂ ಮೇಲ್ವಿಚಾರಕಿ ಶಾಂತಾ ಗುಮಶೆಟ್ಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರದಿಂದ ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಹಾಗೂ ಸಹಾಯಕಿಯರ ಸೇವಾ ಸಂಘದ ಪದಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ ಕೇಂದ್ರಗಳ ಅವಧಿ ಮುಗಿದ ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಧರಣಿಯಲ್ಲಿ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಶಾಂತಾ ಮಾಮನಿ ಅವರು ಕಾನೂನು ಬದ್ಧವಾಗಿ ಅಲ್ಲಿನ ನಿವಾಸಿಗಳಿಗೆ ಒಳ್ಳೆಯ ಸೇವೆ ನೀಡಿದ್ದರೂ ಸಿಡಿಪಿಒ ಅವರ ಕುತಂತ್ರದಿAದ ರೇಣುಕಾ ಎಂಬ ಕಾರ್ಯಕರ್ತೆಗೆ ಅನುಕೂಲ ಮಾಡಿಕೊಡಲು ಹೆಚ್ಚುವರಿ ಆದೇಶ ಮಾಡಿ ಅನ್ಯಾಯ ಎಸಗಿದ್ದಾರೆ. ಈ ಬಗ್ಗೆ ಕೇಳಲು ಹೋದ ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ರೇಣುಕಾ ಹಾಗೂ ಸಹಾಯಕಿ, ಅವರ ಪುತ್ರಿ ಆಗಮಿಸಿ ಕೇಂದ್ರದಲ್ಲಿ ಬಡಿದಿದ್ದಾರೆ. ಹೊಡೆದಾಡುವ ಮುನ್ನ ರೇಣುಕಾ ಅವರು ವ್ಯವಸ್ಥಿತವಾಗಿ ಕೆಲವರನ್ನು ಕರೆತಂದು ಘಟನೆಯ ವಿಡಿಯೋ ಚಿತ್ರೀಕರಣ ಮಾಡುವಂತೆ ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದ್ದು ಶಾಂತಾ ಮಾಮನಿ ವಿರುದ್ಧ ದೂರು ದಾಖಲಿಸುವ ಕುತಂತ್ರವಾಗಿದೆ.ಇದಕ್ಕೆಲ್ಲ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರೇ ನೇರ ಹೊಣೆಗಾರರು.ಪಿಲೇಕೆಮ್ಮ ನಗರದ ಕೇಂದ್ರದಿAದ ಸಂಗಮೇಶ್ವರ ನಗರದ ಅಂಗನವಾಡಿ ಕೇಂದ್ರಕ್ಕೆ ಶಾಂತಾ ಮಾಮನಿ ಅವರನ್ನು ವರ್ಗಾವಣೆ ಮಾಡಿರುವುದಾಗಿ ಹೇಳುತ್ತಿರುವ ಅಧಿಕಾರಿಗಳು ಅಲ್ಲಿಗೆ ಅವರನ್ನು ಹಾಜರುಪಡಿಸದೇ ಬಿಟ್ಟಿದ್ದೇಕೆ ? ಎಂದು ಪ್ರಶ್ನಿಸಿದರು.

ಶಾಂತಾ ಮಾಮನಿ ಅವರಷ್ಟೇ ಅಲ್ಲದೇ ತಾಲ್ಲೂಕಿನ ಹಲವು ಅಂಗನವಾಡಿ ನೌಕರರಿಗೆ ಸಿಡಿಪಿಒ ಕುಂಬಾರ ಅವರಿಂದ ಸಮಸ್ಯೆ ಆಗುತ್ತಿದೆ. ಕಾರ್ಯಕರ್ತೆಯ ವರ್ಗಾವಣೆಗೆ ಶಾಸಕರು ಪತ್ರ ಕೊಟ್ಟಿದ್ದಾರೆ ಎಂಬುದನ್ನು ನಾವು ನಂಬುವುದಿಲ್ಲ ಎಂದು ಹೇಳಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನಾನು ಕಳೆದ 30 ವರ್ಷಗಳಿಂದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದೇನೆ.ನನಗೆ ಅಲ್ಲಿನ ಪುರಸಭೆ ಸದಸ್ಯೆಯ ಪುತ್ರನಿಂದ ಕಿರುಕಳ ಆಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ರೇಣುಕಾ ಅವರನ್ನು ಕೇಂದ್ರಕ್ಕೆ ತರಬೇಕು.ನನ್ನನ್ನು ಅಲ್ಲಿಂದ ಬೇರೆ ಕಳಿಸಬೇಕು ಎಂಬುದು ಇವರ ದುರುದ್ದೇಶವಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತೆಯರಾದ ಶೋಭಾ ಘಾಟಗೆ, ಶೋಭಾ ಕಾಖಂಡಕಿ, ವಿದ್ಯಾ ಮುರಾಳ, ಗುರುಬಾಯಿ ಕಾಳಗಿ, ಶಮಶ್ಯಾದ ಹುಣಶ್ಯಾಳ, ಸುನೀತ, ನೀಲಮ್ಮ ತೊಂಡಿಹಾಳ, ಮಂಜುಳಾ ಜಾಧವ, ಅಂಬುಜಾ ಕುಲಕರ್ಣಿ, ನಿರ್ಮಲಾ ನಾಶಿ, ರಾಜೇಶ್ವರಿ ಮಮದಾಪೂರ, ಷರೀಫಾ ಸಗರ,ಜೈಬುನ್ನಿಸಾ ದಿಡ್ಡಿಮನಿ ಇದ್ದರು.


ಹೋರಾಟಕ್ಕೆ ಬರುವಾಗ ಕಾರು ಅಡ್ಡಗಟ್ಟಿದ್ದಾರೆ:
ಸಿಡಿಪಿಒ ವಿರುದ್ಧ ಹೋರಾಟಕ್ಕೆ ಬರುವಾಗ ನನ್ನ ಕಾರನ್ನು ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ಅಡ್ಡಗಟ್ಟಿದರು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯಾಧ್ಯಕ್ಷೆ ನೀಲಮ್ಮ ಪಾಟೀಲ್ ದೂರಿದರು. ಕುಂಟೋಜಿ ಚರ್ಚ್ ದಾಟಿ ಬರುವ ರಸ್ತೆಯಲ್ಲಿ ನಾಲ್ವರು ರಸ್ತೆಯ ಮಧ್ಯೆಯೇ ಕಾರು ನಿಲ್ಲಿಸಿ ಹೋರಾಟಕ್ಕೆ ಏಕೆ ಹೊರಟಿದ್ದೀರಿ ಎಂದು ಪ್ರಶ್ನಿಸಿದರಲ್ಲದೇ ಕಾರಿನಿಂದ ಕೆಳಗಿಳಿಯುವಂತೆ ದಬಾಯಿಸಿದ್ದಾರೆ.ಆದರೆ ನಾನು ರಸ್ತೆಯಲ್ಲಿ ಇತರ ವಾಹನಗಳ ಚಾಲಕರ ಸಹಾಯದಿಂದ ಮುದ್ದೇಬಿಹಾಳದ ಹೋರಾಟದ ಸ್ಥಳಕ್ಕೆ ಬಂದಿದ್ದೇನೆ. ಹೋರಾಟ ಮಾಡುವುದಕ್ಕೂ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ನೀಲಮ್ಮ ಆರೋಪಿಸಿದರು.

.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ