ವಿಶೇಷ ವರದಿ-ಶಂಕರ ಹೆಬ್ಬಾಳ
ಮುದ್ದೇಬಿಹಾಳ : ತೀವ್ರ ಕುತೂಹಲ ಕೆರಳಿಸಿದ್ದ ಮುದ್ದೇಬಿಹಾಳ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕೃಷಿ ಇಲಾಖೆಯ ಅಧಿಕಾರಿ ಅರವಿಂದ ಹೂಗಾರ ಅವಿರೋಧ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029 ನೇ ಅವಧಿಗೆ ಮುದ್ದೇಬಿಹಾಳ ತಾಲೂಕಿನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆರೋಗ್ಯ ಇಲಾಖೆಯಿಂದ ಆನಂದಗೌಡ ಬಿರಾದಾರ, ಕೃಷಿ ಇಲಾಖೆಯಿಂದ ಅರವಿಂದ ಹೂಗಾರ ಹಾಗೂ ಶಿಕ್ಷಣ ಇಲಾಖೆಯಿಂದ ಬಸನಗೌಡ ಮುದ್ನೂರ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಸೋಮವಾರ ಸಂಜೆಯವರೆಗೂ ನಡೆದ ಪ್ರಕ್ರಿಯೆಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ಬಸನಗೌಡ ಮುದ್ನೂರ ಹಾಗೂ ಆನಂದಗೌಡ ಬಿರಾದಾರ ಅವರಿಬ್ಬರು ಹೂಗಾರ ಅವರನ್ನು ಬೆಂಬಲಿಸಿ ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದ ಕಾರಣ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ ಎಸ್.ಆರ್.ಕಟ್ಟೀಮನಿ ತಿಳಿಸಿದರು.
ಸಹಾಯಕರಾಗಿ ಭೀಮಸಿ ಹೂಗಾರ ಕಾರ್ಯನಿರ್ವಹಿಸಿದರು.
ನೂತನ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಅರವಿಂದ ಹೂಗಾರ ಅವರನ್ನು ಆರೋಗ್ಯ ಇಲಾಖೆಯ ನೌಕರರು ಅಭಿನಂದಿಸಿದರು.
—
ಸಂಘಟನಾ ಚತುರರು, ಸದ್ದಿಲ್ಲದೇ ನೌಕರರ ಹಿತ ಬಯುಸುವವರು :
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ತಾಲ್ಲೂಕು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅರವಿಂದ ಹೂಗಾರ ಸಂಘಟನಾ ಚತುರರು.ಸರಳ ಜೀವಿಗಳು ಮೃದು ಸ್ವಭಾವದವರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬ್ಯಾಂಕ್ ನ ಅಧ್ಯಕ್ಷರಾಗಿ, ಹಾಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಶೇಷ ಎಂದರೆ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ಆಪ್ತರಾಗಿ, ಸಚಿವ ಎಚ್.ಕೆ.ಪಾಟೀಲ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಹೂಗಾರ ಅವರಿಗೆ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಸ್ಥಾನ ಅನಾಯಾಸವಾಗಿ ಲಭಿಸಿರುವುದು ಅವರ ಸಂಘಟನಾ ಚಾತುರ್ಯಕ್ಕೆ ದೊರೆತ ಮನ್ನಣೆ ಎಂದೇ ವಿಶ್ಲೇಷಿಸಲಾಗುತ್ತಿದೆ.
—
ಕೃಷಿ ಇಲಾಖೆಯ ಹಿಂದಿನ ಅಧಿಕಾರಿ ಎಸ್.ಆರ್.ಕಟ್ಟೀಮನಿ ಕಳೆದ 4 ಅವಧಿಯಲ್ಲಿ ತಾಲ್ಲೂಕು ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು.ಇದೀಗ ಹೂಗಾರ ಅವರೂ ಅದೇ ಇಲಾಖೆಯಿಂದ ಬಂದಿದ್ದು ಅಧ್ಯಕ್ಷ ಸ್ಥಾನ ಕೃಷಿ ಇಲಾಖೆಯಲ್ಲಿ ಉಳಿದಂತಾಗಿದೆ.

ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
Latest News
ಐಪಿಎಲ್ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್ ಲಾಡ್ ಆಗ್ರಹ
ಬೆಂಗಳೂರು: ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ
ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್
ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ
ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್
ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ
ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ
ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು
ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ ಸಂಗಾತಿ ಹಾಗೂ ಹೊಸ ಜೀವನದ ಕನಸಿನೊಂದಿಗೆ ಕಾರನ್ನೇರಿ ಪಯಣ ಬೆಳೆಸಿದ್ದಳು. ವಿಧಿಯ ಮುಂದೆ, ಅಪಘಾತದಲ್ಲಿ ಕನಸು ನುಚ್ಚು ನೂರಾಗಿದೆ. ಎರಡು ದಿನಗಳ ಹಿಂದೆ ಸಾಗರ
ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ
ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ