ವಿಶೇಷ ವರದಿ-ಶಂಕರ ಹೆಬ್ಬಾಳ
ಮುದ್ದೇಬಿಹಾಳ : ತೀವ್ರ ಕುತೂಹಲ ಕೆರಳಿಸಿದ್ದ ಮುದ್ದೇಬಿಹಾಳ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕೃಷಿ ಇಲಾಖೆಯ ಅಧಿಕಾರಿ ಅರವಿಂದ ಹೂಗಾರ ಅವಿರೋಧ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029 ನೇ ಅವಧಿಗೆ ಮುದ್ದೇಬಿಹಾಳ ತಾಲೂಕಿನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆರೋಗ್ಯ ಇಲಾಖೆಯಿಂದ ಆನಂದಗೌಡ ಬಿರಾದಾರ, ಕೃಷಿ ಇಲಾಖೆಯಿಂದ ಅರವಿಂದ ಹೂಗಾರ ಹಾಗೂ ಶಿಕ್ಷಣ ಇಲಾಖೆಯಿಂದ ಬಸನಗೌಡ ಮುದ್ನೂರ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಸೋಮವಾರ ಸಂಜೆಯವರೆಗೂ ನಡೆದ ಪ್ರಕ್ರಿಯೆಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ಬಸನಗೌಡ ಮುದ್ನೂರ ಹಾಗೂ ಆನಂದಗೌಡ ಬಿರಾದಾರ ಅವರಿಬ್ಬರು ಹೂಗಾರ ಅವರನ್ನು ಬೆಂಬಲಿಸಿ ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದ ಕಾರಣ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ ಎಸ್.ಆರ್.ಕಟ್ಟೀಮನಿ ತಿಳಿಸಿದರು.
ಸಹಾಯಕರಾಗಿ ಭೀಮಸಿ ಹೂಗಾರ ಕಾರ್ಯನಿರ್ವಹಿಸಿದರು.
ನೂತನ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಅರವಿಂದ ಹೂಗಾರ ಅವರನ್ನು ಆರೋಗ್ಯ ಇಲಾಖೆಯ ನೌಕರರು ಅಭಿನಂದಿಸಿದರು.
—
ಸಂಘಟನಾ ಚತುರರು, ಸದ್ದಿಲ್ಲದೇ ನೌಕರರ ಹಿತ ಬಯುಸುವವರು :
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ತಾಲ್ಲೂಕು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅರವಿಂದ ಹೂಗಾರ ಸಂಘಟನಾ ಚತುರರು.ಸರಳ ಜೀವಿಗಳು ಮೃದು ಸ್ವಭಾವದವರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬ್ಯಾಂಕ್ ನ ಅಧ್ಯಕ್ಷರಾಗಿ, ಹಾಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಶೇಷ ಎಂದರೆ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ಆಪ್ತರಾಗಿ, ಸಚಿವ ಎಚ್.ಕೆ.ಪಾಟೀಲ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಹೂಗಾರ ಅವರಿಗೆ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಸ್ಥಾನ ಅನಾಯಾಸವಾಗಿ ಲಭಿಸಿರುವುದು ಅವರ ಸಂಘಟನಾ ಚಾತುರ್ಯಕ್ಕೆ ದೊರೆತ ಮನ್ನಣೆ ಎಂದೇ ವಿಶ್ಲೇಷಿಸಲಾಗುತ್ತಿದೆ.
—
ಕೃಷಿ ಇಲಾಖೆಯ ಹಿಂದಿನ ಅಧಿಕಾರಿ ಎಸ್.ಆರ್.ಕಟ್ಟೀಮನಿ ಕಳೆದ 4 ಅವಧಿಯಲ್ಲಿ ತಾಲ್ಲೂಕು ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು.ಇದೀಗ ಹೂಗಾರ ಅವರೂ ಅದೇ ಇಲಾಖೆಯಿಂದ ಬಂದಿದ್ದು ಅಧ್ಯಕ್ಷ ಸ್ಥಾನ ಕೃಷಿ ಇಲಾಖೆಯಲ್ಲಿ ಉಳಿದಂತಾಗಿದೆ.
ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
Latest News
ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ
ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ
ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ
ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ
ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ
ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು
650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್
ಎನ್ರೋಲ್ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ
ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್ಆಯ್ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ
32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ
ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ







