ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಮುಧೋಳ : ಬಾಕಿ ನೀಡದೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು ಎಂದು ಉಪವಿಭಾಗಾಧಿಕಾರಿಗೆ ಮನವಿ ಮಾಡಿಕೊಂಡಿದ್ದರೂ ಅವರ ಮಾತಿಗೆ ಮನ್ನಣೆ ನೀಡದೆ ಕಾರ್ಖಾನೆಗಳನ್ನು ಆರಂಭಿಸುತ್ತಿದ್ದಾರೆ ಎಂದು ಆಕ್ರೋಶಗೊಂಡ ರೈತರು ಸೋಮವಾರ ಕಾರ್ಖಾನೆಯೊಂದರ ಆವರಣಕ್ಕೆ ನುಗ್ಗಿದ ರೈತರು ಅಲ್ಲಿ ನಿಲ್ಲಿಸಿದ್ದ ಕಬ್ಬಿನ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ‌ ಮಾಡಿ‌ ತಮ್ಮ ಆಕ್ರೋ‌ಶ ಹೊರಹಾಕಿದರು.

ಇದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದ ರೈತರು ಬಾಕಿ ನೀಡದೆ ಕಾರ್ಖಾನೆ ಆರಂಭಿಸಿದ್ದರ ಕಾರ್ಖಾನೆ ಮಾಲೀಕರ ವಿರುದ್ದ ಹರಿಹಾಯ್ದಿದ್ದರು.

ರೈತ ಸಂಘಟನೆ ಅಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಕಬ್ಬು ಬಾಕಿ ಹಣ ನೀಡದ ಹೊರತು ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ಮೊನ್ನೆ ನಡೆದ ಮಾತುಕಥೆಯಾಗಿತ್ತು. ಅಂದು ಜಿಲ್ಲಾಡಳಿತ 13-14ರ ವರೆಗೆ ಕಾಲಾವಕಾಶ ನೀಡಿತ್ತು. ಆದರೆ ಇದೀಗ ಅಂದಿನ ಮಾತುಕತೆ ಮೀರಿ ಕಾರ್ಖಾನೆಗಳು ಆರಂಭ ಮಾಡುತ್ತಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡೀತ ಮಾತ್ರ ಕೈ ಕಟ್ಟಿ ಕುಳಿತಿದೆ‌. ಬಾಕಿ ನೀಡದೆ ಕಾರ್ಖಾನೆ ಆರಂಭಿಸುವ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೋರಾಟಗಾರರ ದಿಕ್ಕುತಪ್ಪಿಸುವ ಸಲುವಾಗಿ ಸಕ್ಕರೆ ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ‌
ಚುನಾವಣೆಯಲ್ಲಿರುವ ಜನಪ್ರತಿನಿಧಿಗಳು ರೈತರ ಹೆಸರಿನಲ್ಲಿ‌ ಪ್ರಚಾರ ಮಾಡುತ್ತಾರೆ ಇಲ್ಲಿ ರೈತರ ಬೆನ್ನುಲುಬು ಮುರಿಯುತ್ತಾರೆ ಎಂದು ಹೇಳಿದರು.

ಸುಭಾಸ ಶಿರಬೂರವರು ಮಾತನಾಡಿ, ಕಾರ್ಖಾನೆಗಳ ವಿರುದ್ಧ ಹೋರಾಡಲು‌ ನಮಗೆ ದಾಖಲೆಗಳ ಅಗತ್ಯತೆ ಇದೆ‌. ನಮ್ಮ ಬಳಿಯಿರುವ ದಾಖಲೆಯೊಂದಿಗೆ ಬಾಕಿ ನೀಡದ ಕಾರ್ಖಾನೆ ಮಾಲೀಕರ ವಿರುದ್ದ ಹೋರಾಡಿದಾಗ ಮಾತ್ರ ನಮ್ಮ ಬೇಡಿಕೆ ಈಡೇರಲು ಸಾಧ್ಯ‌. ಈ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದರು.

ಉಪವಿಭಾಗಧಿಕಾರಿ ಬಂದು ಕಾರ್ಖಾನೆ ಪ್ರಾರಂಭಿಸಲು ಕಬ್ಬು ತುಂಬಿಕೊಂಡು ಬಂದಿರುವ ಟ್ರ್ಯಾಕ್ಟರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ನಾವೆ ಹೋಗಿ ಅವುಗಳನ್ನು ತೆರಳುವಗೋಳಿಸುತ್ತೆವೆ ಅಂತಾ ರೈತರು ಪಟ್ಟು ಹಿಡಿದರು.

ಬಾರದ ಎಸಿ ಕಟ್ಟೆಯೊಡೆದ ಆಕ್ರೋಶ : ರೈತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸ್ಥಳಕ್ಕೆ ಉಪವಿಭಾಧಿಕಾರಿ ಬಾರದ ಕಾರಣ ರೈತರ ಆಕ್ರೋಶ‌ದ ಕಟ್ಟೆಯೊಡೆದು ಕಾರ್ಖಾನೆಯೊಂದಕ್ಕೆ‌ ನುಗ್ಗಿದರು. ಅಲ್ಲಿನ ಟ್ರ್ಯಾಕ್ಟರ್ ಗಳನ್ನು ಪಲ್ಟಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.

ಆಕ್ರೋಶಕ್ಕೆ ಕಾರಣವಾದ ಜಿಲ್ಲಾಡಳಿತ ನಡೆ : ಮೊನ್ನೆ ತಹಸೀಲ್ದಾರ್ ಕಚೇರಿಯಲ್ಲಿ ಅಹೋರಾತ್ರಿ ನಡೆದ ಪ್ರತಿಭಟನೆ ವೇಳೆ ತಡವಾಗಿ ರೈತರನ್ನು ಭೇಟಿಯಾಗಿದ್ದ ಜಮಖಂಡಿ ಉಪವಿಭಾಗಾಧಿಕಾರಿ 13-14ರಂದು ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ರೈತರೆದುರು ವಾಗ್ದಾನ ಮಾಡಿದ್ದರು. ಆದರೆ ನಿನ್ನೆಯಿಂದ ತಾಲೂಕಿನಲ್ಲಿ ಕೆಲ ಕಾರ್ಖಾನೆಗಳು ಆರಂಭವಾಗಿರುವುದು ರೈತರನ್ನು ಕೆರಳುವಂತೆ ಮಾಡಿತ್ತು. ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾಗಳು ಜಿಲ್ಲಾಧಿಕಾರಿಯಾಗಲಿ ಅಥವಾ ಉಪವಿಭಾಗಾಧಿಕಾರಿಯಾಗಲಿ ರೈತರನ್ನು ಭೇಟಿ‌ ಮಾಡಿ ಮಾತುಕಥೆಗೆ ಮುಂದಾಗಲಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯ ನಡೆಯೇ ರೈತರನ್ನು‌ ಕೆರಳುವಂತೆ ಮಾಡಿತು ಎಂಬ ಮಾತುಗಳು ಹೋರಾಟಗಾರರ ಸ್ಥಳದಿಂದ ಕೇಳಿಬಂದವು.

ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಯಂಕಣ್ಣ ಮಳಲಿ, ಹನಮಂತ ನಬಾಬ, ಹನಮಂತಗೌಡ ಪಾಟೀಲ ಮಹೇಶಗೌಡ ಪಾಟೀಲ, ನಾಗೇಶ ಗೋಲಶೆಟ್ಟಿ ಸೇರಿದಂತೆ ಇತರರು ಇದ್ದರು.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ