ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಮುಧೋಳ : ಬಾಕಿ ನೀಡದೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು ಎಂದು ಉಪವಿಭಾಗಾಧಿಕಾರಿಗೆ ಮನವಿ ಮಾಡಿಕೊಂಡಿದ್ದರೂ ಅವರ ಮಾತಿಗೆ ಮನ್ನಣೆ ನೀಡದೆ ಕಾರ್ಖಾನೆಗಳನ್ನು ಆರಂಭಿಸುತ್ತಿದ್ದಾರೆ ಎಂದು ಆಕ್ರೋಶಗೊಂಡ ರೈತರು ಸೋಮವಾರ ಕಾರ್ಖಾನೆಯೊಂದರ ಆವರಣಕ್ಕೆ ನುಗ್ಗಿದ ರೈತರು ಅಲ್ಲಿ ನಿಲ್ಲಿಸಿದ್ದ ಕಬ್ಬಿನ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ‌ ಮಾಡಿ‌ ತಮ್ಮ ಆಕ್ರೋ‌ಶ ಹೊರಹಾಕಿದರು.

ಇದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದ ರೈತರು ಬಾಕಿ ನೀಡದೆ ಕಾರ್ಖಾನೆ ಆರಂಭಿಸಿದ್ದರ ಕಾರ್ಖಾನೆ ಮಾಲೀಕರ ವಿರುದ್ದ ಹರಿಹಾಯ್ದಿದ್ದರು.

ರೈತ ಸಂಘಟನೆ ಅಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಕಬ್ಬು ಬಾಕಿ ಹಣ ನೀಡದ ಹೊರತು ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ಮೊನ್ನೆ ನಡೆದ ಮಾತುಕಥೆಯಾಗಿತ್ತು. ಅಂದು ಜಿಲ್ಲಾಡಳಿತ 13-14ರ ವರೆಗೆ ಕಾಲಾವಕಾಶ ನೀಡಿತ್ತು. ಆದರೆ ಇದೀಗ ಅಂದಿನ ಮಾತುಕತೆ ಮೀರಿ ಕಾರ್ಖಾನೆಗಳು ಆರಂಭ ಮಾಡುತ್ತಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡೀತ ಮಾತ್ರ ಕೈ ಕಟ್ಟಿ ಕುಳಿತಿದೆ‌. ಬಾಕಿ ನೀಡದೆ ಕಾರ್ಖಾನೆ ಆರಂಭಿಸುವ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೋರಾಟಗಾರರ ದಿಕ್ಕುತಪ್ಪಿಸುವ ಸಲುವಾಗಿ ಸಕ್ಕರೆ ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ‌
ಚುನಾವಣೆಯಲ್ಲಿರುವ ಜನಪ್ರತಿನಿಧಿಗಳು ರೈತರ ಹೆಸರಿನಲ್ಲಿ‌ ಪ್ರಚಾರ ಮಾಡುತ್ತಾರೆ ಇಲ್ಲಿ ರೈತರ ಬೆನ್ನುಲುಬು ಮುರಿಯುತ್ತಾರೆ ಎಂದು ಹೇಳಿದರು.

ಸುಭಾಸ ಶಿರಬೂರವರು ಮಾತನಾಡಿ, ಕಾರ್ಖಾನೆಗಳ ವಿರುದ್ಧ ಹೋರಾಡಲು‌ ನಮಗೆ ದಾಖಲೆಗಳ ಅಗತ್ಯತೆ ಇದೆ‌. ನಮ್ಮ ಬಳಿಯಿರುವ ದಾಖಲೆಯೊಂದಿಗೆ ಬಾಕಿ ನೀಡದ ಕಾರ್ಖಾನೆ ಮಾಲೀಕರ ವಿರುದ್ದ ಹೋರಾಡಿದಾಗ ಮಾತ್ರ ನಮ್ಮ ಬೇಡಿಕೆ ಈಡೇರಲು ಸಾಧ್ಯ‌. ಈ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದರು.

ಉಪವಿಭಾಗಧಿಕಾರಿ ಬಂದು ಕಾರ್ಖಾನೆ ಪ್ರಾರಂಭಿಸಲು ಕಬ್ಬು ತುಂಬಿಕೊಂಡು ಬಂದಿರುವ ಟ್ರ್ಯಾಕ್ಟರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ನಾವೆ ಹೋಗಿ ಅವುಗಳನ್ನು ತೆರಳುವಗೋಳಿಸುತ್ತೆವೆ ಅಂತಾ ರೈತರು ಪಟ್ಟು ಹಿಡಿದರು.

ಬಾರದ ಎಸಿ ಕಟ್ಟೆಯೊಡೆದ ಆಕ್ರೋಶ : ರೈತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸ್ಥಳಕ್ಕೆ ಉಪವಿಭಾಧಿಕಾರಿ ಬಾರದ ಕಾರಣ ರೈತರ ಆಕ್ರೋಶ‌ದ ಕಟ್ಟೆಯೊಡೆದು ಕಾರ್ಖಾನೆಯೊಂದಕ್ಕೆ‌ ನುಗ್ಗಿದರು. ಅಲ್ಲಿನ ಟ್ರ್ಯಾಕ್ಟರ್ ಗಳನ್ನು ಪಲ್ಟಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.

ಆಕ್ರೋಶಕ್ಕೆ ಕಾರಣವಾದ ಜಿಲ್ಲಾಡಳಿತ ನಡೆ : ಮೊನ್ನೆ ತಹಸೀಲ್ದಾರ್ ಕಚೇರಿಯಲ್ಲಿ ಅಹೋರಾತ್ರಿ ನಡೆದ ಪ್ರತಿಭಟನೆ ವೇಳೆ ತಡವಾಗಿ ರೈತರನ್ನು ಭೇಟಿಯಾಗಿದ್ದ ಜಮಖಂಡಿ ಉಪವಿಭಾಗಾಧಿಕಾರಿ 13-14ರಂದು ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ರೈತರೆದುರು ವಾಗ್ದಾನ ಮಾಡಿದ್ದರು. ಆದರೆ ನಿನ್ನೆಯಿಂದ ತಾಲೂಕಿನಲ್ಲಿ ಕೆಲ ಕಾರ್ಖಾನೆಗಳು ಆರಂಭವಾಗಿರುವುದು ರೈತರನ್ನು ಕೆರಳುವಂತೆ ಮಾಡಿತ್ತು. ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾಗಳು ಜಿಲ್ಲಾಧಿಕಾರಿಯಾಗಲಿ ಅಥವಾ ಉಪವಿಭಾಗಾಧಿಕಾರಿಯಾಗಲಿ ರೈತರನ್ನು ಭೇಟಿ‌ ಮಾಡಿ ಮಾತುಕಥೆಗೆ ಮುಂದಾಗಲಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯ ನಡೆಯೇ ರೈತರನ್ನು‌ ಕೆರಳುವಂತೆ ಮಾಡಿತು ಎಂಬ ಮಾತುಗಳು ಹೋರಾಟಗಾರರ ಸ್ಥಳದಿಂದ ಕೇಳಿಬಂದವು.

ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಯಂಕಣ್ಣ ಮಳಲಿ, ಹನಮಂತ ನಬಾಬ, ಹನಮಂತಗೌಡ ಪಾಟೀಲ ಮಹೇಶಗೌಡ ಪಾಟೀಲ, ನಾಗೇಶ ಗೋಲಶೆಟ್ಟಿ ಸೇರಿದಂತೆ ಇತರರು ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ