ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಮುಧೋಳ : ಬಾಕಿ ನೀಡದೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು ಎಂದು ಉಪವಿಭಾಗಾಧಿಕಾರಿಗೆ ಮನವಿ ಮಾಡಿಕೊಂಡಿದ್ದರೂ ಅವರ ಮಾತಿಗೆ ಮನ್ನಣೆ ನೀಡದೆ ಕಾರ್ಖಾನೆಗಳನ್ನು ಆರಂಭಿಸುತ್ತಿದ್ದಾರೆ ಎಂದು ಆಕ್ರೋಶಗೊಂಡ ರೈತರು ಸೋಮವಾರ ಕಾರ್ಖಾನೆಯೊಂದರ ಆವರಣಕ್ಕೆ ನುಗ್ಗಿದ ರೈತರು ಅಲ್ಲಿ ನಿಲ್ಲಿಸಿದ್ದ ಕಬ್ಬಿನ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ‌ ಮಾಡಿ‌ ತಮ್ಮ ಆಕ್ರೋ‌ಶ ಹೊರಹಾಕಿದರು.

Advt
Advt

 

ಇದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದ ರೈತರು ಬಾಕಿ ನೀಡದೆ ಕಾರ್ಖಾನೆ ಆರಂಭಿಸಿದ್ದರ ಕಾರ್ಖಾನೆ ಮಾಲೀಕರ ವಿರುದ್ದ ಹರಿಹಾಯ್ದಿದ್ದರು.

ರೈತ ಸಂಘಟನೆ ಅಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಕಬ್ಬು ಬಾಕಿ ಹಣ ನೀಡದ ಹೊರತು ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ಮೊನ್ನೆ ನಡೆದ ಮಾತುಕಥೆಯಾಗಿತ್ತು. ಅಂದು ಜಿಲ್ಲಾಡಳಿತ 13-14ರ ವರೆಗೆ ಕಾಲಾವಕಾಶ ನೀಡಿತ್ತು. ಆದರೆ ಇದೀಗ ಅಂದಿನ ಮಾತುಕತೆ ಮೀರಿ ಕಾರ್ಖಾನೆಗಳು ಆರಂಭ ಮಾಡುತ್ತಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡೀತ ಮಾತ್ರ ಕೈ ಕಟ್ಟಿ ಕುಳಿತಿದೆ‌. ಬಾಕಿ ನೀಡದೆ ಕಾರ್ಖಾನೆ ಆರಂಭಿಸುವ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೋರಾಟಗಾರರ ದಿಕ್ಕುತಪ್ಪಿಸುವ ಸಲುವಾಗಿ ಸಕ್ಕರೆ ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ‌
ಚುನಾವಣೆಯಲ್ಲಿರುವ ಜನಪ್ರತಿನಿಧಿಗಳು ರೈತರ ಹೆಸರಿನಲ್ಲಿ‌ ಪ್ರಚಾರ ಮಾಡುತ್ತಾರೆ ಇಲ್ಲಿ ರೈತರ ಬೆನ್ನುಲುಬು ಮುರಿಯುತ್ತಾರೆ ಎಂದು ಹೇಳಿದರು.

ಸುಭಾಸ ಶಿರಬೂರವರು ಮಾತನಾಡಿ, ಕಾರ್ಖಾನೆಗಳ ವಿರುದ್ಧ ಹೋರಾಡಲು‌ ನಮಗೆ ದಾಖಲೆಗಳ ಅಗತ್ಯತೆ ಇದೆ‌. ನಮ್ಮ ಬಳಿಯಿರುವ ದಾಖಲೆಯೊಂದಿಗೆ ಬಾಕಿ ನೀಡದ ಕಾರ್ಖಾನೆ ಮಾಲೀಕರ ವಿರುದ್ದ ಹೋರಾಡಿದಾಗ ಮಾತ್ರ ನಮ್ಮ ಬೇಡಿಕೆ ಈಡೇರಲು ಸಾಧ್ಯ‌. ಈ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದರು.

ಉಪವಿಭಾಗಧಿಕಾರಿ ಬಂದು ಕಾರ್ಖಾನೆ ಪ್ರಾರಂಭಿಸಲು ಕಬ್ಬು ತುಂಬಿಕೊಂಡು ಬಂದಿರುವ ಟ್ರ್ಯಾಕ್ಟರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ನಾವೆ ಹೋಗಿ ಅವುಗಳನ್ನು ತೆರಳುವಗೋಳಿಸುತ್ತೆವೆ ಅಂತಾ ರೈತರು ಪಟ್ಟು ಹಿಡಿದರು.

ಬಾರದ ಎಸಿ ಕಟ್ಟೆಯೊಡೆದ ಆಕ್ರೋಶ : ರೈತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸ್ಥಳಕ್ಕೆ ಉಪವಿಭಾಧಿಕಾರಿ ಬಾರದ ಕಾರಣ ರೈತರ ಆಕ್ರೋಶ‌ದ ಕಟ್ಟೆಯೊಡೆದು ಕಾರ್ಖಾನೆಯೊಂದಕ್ಕೆ‌ ನುಗ್ಗಿದರು. ಅಲ್ಲಿನ ಟ್ರ್ಯಾಕ್ಟರ್ ಗಳನ್ನು ಪಲ್ಟಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.

ಆಕ್ರೋಶಕ್ಕೆ ಕಾರಣವಾದ ಜಿಲ್ಲಾಡಳಿತ ನಡೆ : ಮೊನ್ನೆ ತಹಸೀಲ್ದಾರ್ ಕಚೇರಿಯಲ್ಲಿ ಅಹೋರಾತ್ರಿ ನಡೆದ ಪ್ರತಿಭಟನೆ ವೇಳೆ ತಡವಾಗಿ ರೈತರನ್ನು ಭೇಟಿಯಾಗಿದ್ದ ಜಮಖಂಡಿ ಉಪವಿಭಾಗಾಧಿಕಾರಿ 13-14ರಂದು ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ರೈತರೆದುರು ವಾಗ್ದಾನ ಮಾಡಿದ್ದರು. ಆದರೆ ನಿನ್ನೆಯಿಂದ ತಾಲೂಕಿನಲ್ಲಿ ಕೆಲ ಕಾರ್ಖಾನೆಗಳು ಆರಂಭವಾಗಿರುವುದು ರೈತರನ್ನು ಕೆರಳುವಂತೆ ಮಾಡಿತ್ತು. ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾಗಳು ಜಿಲ್ಲಾಧಿಕಾರಿಯಾಗಲಿ ಅಥವಾ ಉಪವಿಭಾಗಾಧಿಕಾರಿಯಾಗಲಿ ರೈತರನ್ನು ಭೇಟಿ‌ ಮಾಡಿ ಮಾತುಕಥೆಗೆ ಮುಂದಾಗಲಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯ ನಡೆಯೇ ರೈತರನ್ನು‌ ಕೆರಳುವಂತೆ ಮಾಡಿತು ಎಂಬ ಮಾತುಗಳು ಹೋರಾಟಗಾರರ ಸ್ಥಳದಿಂದ ಕೇಳಿಬಂದವು.

ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಯಂಕಣ್ಣ ಮಳಲಿ, ಹನಮಂತ ನಬಾಬ, ಹನಮಂತಗೌಡ ಪಾಟೀಲ ಮಹೇಶಗೌಡ ಪಾಟೀಲ, ನಾಗೇಶ ಗೋಲಶೆಟ್ಟಿ ಸೇರಿದಂತೆ ಇತರರು ಇದ್ದರು.

Latest News

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಮುಧೋಳ: ಮಹಾನ್ ನಾಯಕರ ಕನಸಿನಂತೆ ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆಯಾಗಿದೆ ಎಂದು

ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಇಳಕಲ್: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್

ಅನೈತಿಕ‌ ಸಂಬಂಧಕ್ಕೆ ಆಲಮೇಲನಲ್ಲಿ ಬಿತ್ತು ಹೆಣ?

ಅನೈತಿಕ‌ ಸಂಬಂಧಕ್ಕೆ ಆಲಮೇಲನಲ್ಲಿ ಬಿತ್ತು ಹೆಣ?

ಆಲಮೇಲ: ಪಟ್ಟಣದಲ್ಲಿ ಯುವಕನನೊರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಫಾರೂಕ ಆಮದಸಾಬ ಲಾಳಸಂಗಿ (26) ಕೊಲೆಯಾದ ವ್ಯಕ್ತಿ. ಕೊಲೆಗೆ ಅನೈತಿಕ ಸಂಭದದ ಶಂಕೆ ವ್ಯಕ್ತವಾಗಿದೆ. ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಿಂದಗಿ ಸಿಪಿಐ ನಾನಾಗೌಡ ಪೋಲಿಸ್ ಪಾಟೀಲ, ಪಿಎಸ್ಐ ಅರವಿಂದ ಅಂಗಡಿ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸ್ವಾನದಳ ಸಿಬ್ಬಂದಿ ಆಗಮಿಸಿ ಶೋಧ ನಡೆಸಿದ್ದಾರೆ.

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುನಗುಂದ-ಅಖಂಡ ವಿಜಯಪುರ ಮತ್ತು ಬಾಗಲಕೋಟಿ ಜಿಲ್ಲೆಯ ಹುನಗುಂದ ತಾಲೂಕಿನ ಕೃಷ್ಣ ನದಿಯ ದಡದಲ್ಲಿರುವ ಒಂದು ಪುಟ್ಟ ಗ್ರಾಮವಾದ ಹಾವರಗಿಯಲ್ಲಿ ಜನಿಸಿದ ಲಿಂ, ಎಸ್.ಆರ್.ಕಾಶಪ್ಪನವರ ಮೊದಲು ತಾಲೂಕ ಅಭಿವೃದ್ದಿ ಮಂಡಳಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜರ್ನಿ ಆರಂಭಿಸುವ ಮೂಲಕ ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನದವರಿಗೂ ಸಾಗಿದರು. ಹಮ್ಮು ಬಿಮ್ಮಿಲ್ಲದ ಸರಳ ವ್ಯಕ್ತಿತ್ವದ ರಾಜಕಾರಣಿಯಾಗಿದ್ದರು. ಜಿಗಿಟುತನ ಹಾಗೂ ಜವಾರಿ ಭಾಷೆ ಮತ್ತು ಸ್ವಭಾವ ಅವರನ್ನು ಅಲ್ಲಿಯತನಕ ಕರೆದುಕೊಂಡು