ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಮುಧೋಳ : ಬಾಕಿ ನೀಡದೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು ಎಂದು ಉಪವಿಭಾಗಾಧಿಕಾರಿಗೆ ಮನವಿ ಮಾಡಿಕೊಂಡಿದ್ದರೂ ಅವರ ಮಾತಿಗೆ ಮನ್ನಣೆ ನೀಡದೆ ಕಾರ್ಖಾನೆಗಳನ್ನು ಆರಂಭಿಸುತ್ತಿದ್ದಾರೆ ಎಂದು ಆಕ್ರೋಶಗೊಂಡ ರೈತರು ಸೋಮವಾರ ಕಾರ್ಖಾನೆಯೊಂದರ ಆವರಣಕ್ಕೆ ನುಗ್ಗಿದ ರೈತರು ಅಲ್ಲಿ ನಿಲ್ಲಿಸಿದ್ದ ಕಬ್ಬಿನ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ‌ ಮಾಡಿ‌ ತಮ್ಮ ಆಕ್ರೋ‌ಶ ಹೊರಹಾಕಿದರು.

ಇದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದ ರೈತರು ಬಾಕಿ ನೀಡದೆ ಕಾರ್ಖಾನೆ ಆರಂಭಿಸಿದ್ದರ ಕಾರ್ಖಾನೆ ಮಾಲೀಕರ ವಿರುದ್ದ ಹರಿಹಾಯ್ದಿದ್ದರು.

ರೈತ ಸಂಘಟನೆ ಅಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಕಬ್ಬು ಬಾಕಿ ಹಣ ನೀಡದ ಹೊರತು ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ಮೊನ್ನೆ ನಡೆದ ಮಾತುಕಥೆಯಾಗಿತ್ತು. ಅಂದು ಜಿಲ್ಲಾಡಳಿತ 13-14ರ ವರೆಗೆ ಕಾಲಾವಕಾಶ ನೀಡಿತ್ತು. ಆದರೆ ಇದೀಗ ಅಂದಿನ ಮಾತುಕತೆ ಮೀರಿ ಕಾರ್ಖಾನೆಗಳು ಆರಂಭ ಮಾಡುತ್ತಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡೀತ ಮಾತ್ರ ಕೈ ಕಟ್ಟಿ ಕುಳಿತಿದೆ‌. ಬಾಕಿ ನೀಡದೆ ಕಾರ್ಖಾನೆ ಆರಂಭಿಸುವ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೋರಾಟಗಾರರ ದಿಕ್ಕುತಪ್ಪಿಸುವ ಸಲುವಾಗಿ ಸಕ್ಕರೆ ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ‌
ಚುನಾವಣೆಯಲ್ಲಿರುವ ಜನಪ್ರತಿನಿಧಿಗಳು ರೈತರ ಹೆಸರಿನಲ್ಲಿ‌ ಪ್ರಚಾರ ಮಾಡುತ್ತಾರೆ ಇಲ್ಲಿ ರೈತರ ಬೆನ್ನುಲುಬು ಮುರಿಯುತ್ತಾರೆ ಎಂದು ಹೇಳಿದರು.

ಸುಭಾಸ ಶಿರಬೂರವರು ಮಾತನಾಡಿ, ಕಾರ್ಖಾನೆಗಳ ವಿರುದ್ಧ ಹೋರಾಡಲು‌ ನಮಗೆ ದಾಖಲೆಗಳ ಅಗತ್ಯತೆ ಇದೆ‌. ನಮ್ಮ ಬಳಿಯಿರುವ ದಾಖಲೆಯೊಂದಿಗೆ ಬಾಕಿ ನೀಡದ ಕಾರ್ಖಾನೆ ಮಾಲೀಕರ ವಿರುದ್ದ ಹೋರಾಡಿದಾಗ ಮಾತ್ರ ನಮ್ಮ ಬೇಡಿಕೆ ಈಡೇರಲು ಸಾಧ್ಯ‌. ಈ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದರು.

ಉಪವಿಭಾಗಧಿಕಾರಿ ಬಂದು ಕಾರ್ಖಾನೆ ಪ್ರಾರಂಭಿಸಲು ಕಬ್ಬು ತುಂಬಿಕೊಂಡು ಬಂದಿರುವ ಟ್ರ್ಯಾಕ್ಟರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ನಾವೆ ಹೋಗಿ ಅವುಗಳನ್ನು ತೆರಳುವಗೋಳಿಸುತ್ತೆವೆ ಅಂತಾ ರೈತರು ಪಟ್ಟು ಹಿಡಿದರು.

ಬಾರದ ಎಸಿ ಕಟ್ಟೆಯೊಡೆದ ಆಕ್ರೋಶ : ರೈತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸ್ಥಳಕ್ಕೆ ಉಪವಿಭಾಧಿಕಾರಿ ಬಾರದ ಕಾರಣ ರೈತರ ಆಕ್ರೋಶ‌ದ ಕಟ್ಟೆಯೊಡೆದು ಕಾರ್ಖಾನೆಯೊಂದಕ್ಕೆ‌ ನುಗ್ಗಿದರು. ಅಲ್ಲಿನ ಟ್ರ್ಯಾಕ್ಟರ್ ಗಳನ್ನು ಪಲ್ಟಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.

ಆಕ್ರೋಶಕ್ಕೆ ಕಾರಣವಾದ ಜಿಲ್ಲಾಡಳಿತ ನಡೆ : ಮೊನ್ನೆ ತಹಸೀಲ್ದಾರ್ ಕಚೇರಿಯಲ್ಲಿ ಅಹೋರಾತ್ರಿ ನಡೆದ ಪ್ರತಿಭಟನೆ ವೇಳೆ ತಡವಾಗಿ ರೈತರನ್ನು ಭೇಟಿಯಾಗಿದ್ದ ಜಮಖಂಡಿ ಉಪವಿಭಾಗಾಧಿಕಾರಿ 13-14ರಂದು ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ರೈತರೆದುರು ವಾಗ್ದಾನ ಮಾಡಿದ್ದರು. ಆದರೆ ನಿನ್ನೆಯಿಂದ ತಾಲೂಕಿನಲ್ಲಿ ಕೆಲ ಕಾರ್ಖಾನೆಗಳು ಆರಂಭವಾಗಿರುವುದು ರೈತರನ್ನು ಕೆರಳುವಂತೆ ಮಾಡಿತ್ತು. ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾಗಳು ಜಿಲ್ಲಾಧಿಕಾರಿಯಾಗಲಿ ಅಥವಾ ಉಪವಿಭಾಗಾಧಿಕಾರಿಯಾಗಲಿ ರೈತರನ್ನು ಭೇಟಿ‌ ಮಾಡಿ ಮಾತುಕಥೆಗೆ ಮುಂದಾಗಲಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯ ನಡೆಯೇ ರೈತರನ್ನು‌ ಕೆರಳುವಂತೆ ಮಾಡಿತು ಎಂಬ ಮಾತುಗಳು ಹೋರಾಟಗಾರರ ಸ್ಥಳದಿಂದ ಕೇಳಿಬಂದವು.

ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಯಂಕಣ್ಣ ಮಳಲಿ, ಹನಮಂತ ನಬಾಬ, ಹನಮಂತಗೌಡ ಪಾಟೀಲ ಮಹೇಶಗೌಡ ಪಾಟೀಲ, ನಾಗೇಶ ಗೋಲಶೆಟ್ಟಿ ಸೇರಿದಂತೆ ಇತರರು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ