ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!

ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಆಯ್ಕೆ ಬಯಸಿ ಸಲ್ಲಿಕೆಯಾಗಿದ್ದ ಎರಡು ನಾಮಪತ್ರಗಳಲ್ಲಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ಮದ್ಯಾಹ್ನ 1 ಗಂಟೆಯಿಂದ ನಾಮಪತ್ರಗಳ ಪರಿಶೀಲನೆ ಕಾರ್ಯವನ್ನು ನಾಮಪತ್ರ ಸಲ್ಲಿಸಿದ್ದ ಶಾಂತಾ ಮದರಿ ಹಾಗೂ ಕವಿತಾ ಶಿರಗುಪ್ಪಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳು ನಡೆಸಿದರು.ಈ ವೇಳೆ ಕವಿತಾ ಶಿರಗುಪ್ಪಿ ಅವರು ಸಲ್ಲಿಸಿದ್ದ ನಾಮಪತ್ರದ ಜೊತೆಗೆ ಮೀಸಲಾತಿ ಅಡಿ ಸ್ಪರ್ಧೆ ಮಾಡಿದ್ದರಿಂದ ಲಗತ್ತಿಸಬೇಕಾಗಿದ್ದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸದೇ ಇರುವುದರಿಂದ ಹಾಗೂ ಕೆಲವು ಕಡೆಗಳಲ್ಲಿ ಸಹಿ ಮಾಡದೇ ಇದ್ದುದ್ದರಿಂದ ಶಿರಗುಪ್ಪಿ ಅವರ ನಾಮಪತ್ರವನ್ನು ತಿರಸ್ಕಾರ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಎಸ್.ಕೆ.ಮಾಳಗೊಂಡ ತಿಳಿಸಿದರು.

ನಾಮಪತ್ರಗಳ ಪರಿಶೀಲನೆ ಕಾರ್ಯ ಮುಗಿದಿದ್ದು ನ.23ರವರೆಗೆ ನಾಮಪತ್ರಗಳ ಹಿಂದಕ್ಕೆ ಪಡೆಯುವುದಕ್ಕೆ ಅವಕಾಶ ಇದೆ.ನ.26ರಂದು ಫಲಿತಾಂಶ ಪ್ರಕಟಿಸಿ ಆಯ್ಕೆಯಾದವರಿಗೆ ಪ್ರಮಾಣ ಪತ್ರ ನೀಡುವುದಾಗಿ ತಿಳಿಸಿದರು.

ಕಣದಲ್ಲಿ ಶಾಂತಾ ಮದರಿ ಒಬ್ಬರೇ ಉಳಿದಿದ್ದು ಅವರ ಆಯ್ಕೆ ಆದಂತಾಗಿದೆ.ಅಧಿಕೃತವಾಗಿ ಘೋಷಣೆಯೊಂದೇ ಬಾಕಿ ಉಳಿದಿದೆ.
ಚುನಾವಣೆಗೆ ಸಹಾಯಕರಾಗಿ ಆಯ್.ಬಿ.ಹಿರೇಮಠ, ಪಿಡಿಒ ಪಿ.ಎಸ್.ನಾಯ್ಕೋಡಿ ಕಾರ್ಯನಿರ್ವಹಿಸಿದರು.ಪೊಲೀಸ್ ಇಲಾಖೆಯಿಂದ ಎಎಸ್ಐ ಎ.ಬಿ.ಟಕ್ಕಳಕಿ, ಶಾಂತಗೌಡ ಬನ್ನೆಟ್ಟಿ ಭದ್ರತೆ ಒದಗಿಸಿದ್ದರು.

ಹಿನ್ನಡೆ : ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯೊಳಗಡೆ ನಾಮಪತ್ರದೊಂದಿಗೆ ಲಗತ್ತಿಸಲು ವಿಫಲರಾಗಿದ್ದಕ್ಕೆ ಕವಿತಾ ಶಿರಗುಪ್ಪಿ ಅವರು ಚುನಾವಣಾ ಕಣದಿಂದ ಹಿನ್ನಡೆ ಅನುಭವಿಸಬೇಕಾಯಿತು.

ಹಾಲಿ,ಮಾಜಿ ಶಾಸಕರಿಂದಲೂ ಮಾಹಿತಿ :
ನಾಮಪತ್ರದೊಂದಿಗೆ ಜಾತಿ ಪ್ರಮಾಣ ಪತ್ರ ಸಲ್ಲಿಕೆ ಸಮಯದಲ್ಲಿ ಉಂಟಾದ ಗೊಂದಲದ ಬಗ್ಗೆ ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಚುನಾವಣಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ