ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!

ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!

Ad
Ad

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಆಯ್ಕೆ ಬಯಸಿ ಸಲ್ಲಿಕೆಯಾಗಿದ್ದ ಎರಡು ನಾಮಪತ್ರಗಳಲ್ಲಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ಮದ್ಯಾಹ್ನ 1 ಗಂಟೆಯಿಂದ ನಾಮಪತ್ರಗಳ ಪರಿಶೀಲನೆ ಕಾರ್ಯವನ್ನು ನಾಮಪತ್ರ ಸಲ್ಲಿಸಿದ್ದ ಶಾಂತಾ ಮದರಿ ಹಾಗೂ ಕವಿತಾ ಶಿರಗುಪ್ಪಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳು ನಡೆಸಿದರು.ಈ ವೇಳೆ ಕವಿತಾ ಶಿರಗುಪ್ಪಿ ಅವರು ಸಲ್ಲಿಸಿದ್ದ ನಾಮಪತ್ರದ ಜೊತೆಗೆ ಮೀಸಲಾತಿ ಅಡಿ ಸ್ಪರ್ಧೆ ಮಾಡಿದ್ದರಿಂದ ಲಗತ್ತಿಸಬೇಕಾಗಿದ್ದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸದೇ ಇರುವುದರಿಂದ ಹಾಗೂ ಕೆಲವು ಕಡೆಗಳಲ್ಲಿ ಸಹಿ ಮಾಡದೇ ಇದ್ದುದ್ದರಿಂದ ಶಿರಗುಪ್ಪಿ ಅವರ ನಾಮಪತ್ರವನ್ನು ತಿರಸ್ಕಾರ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಎಸ್.ಕೆ.ಮಾಳಗೊಂಡ ತಿಳಿಸಿದರು.

ನಾಮಪತ್ರಗಳ ಪರಿಶೀಲನೆ ಕಾರ್ಯ ಮುಗಿದಿದ್ದು ನ.23ರವರೆಗೆ ನಾಮಪತ್ರಗಳ ಹಿಂದಕ್ಕೆ ಪಡೆಯುವುದಕ್ಕೆ ಅವಕಾಶ ಇದೆ.ನ.26ರಂದು ಫಲಿತಾಂಶ ಪ್ರಕಟಿಸಿ ಆಯ್ಕೆಯಾದವರಿಗೆ ಪ್ರಮಾಣ ಪತ್ರ ನೀಡುವುದಾಗಿ ತಿಳಿಸಿದರು.

ಕಣದಲ್ಲಿ ಶಾಂತಾ ಮದರಿ ಒಬ್ಬರೇ ಉಳಿದಿದ್ದು ಅವರ ಆಯ್ಕೆ ಆದಂತಾಗಿದೆ.ಅಧಿಕೃತವಾಗಿ ಘೋಷಣೆಯೊಂದೇ ಬಾಕಿ ಉಳಿದಿದೆ.
ಚುನಾವಣೆಗೆ ಸಹಾಯಕರಾಗಿ ಆಯ್.ಬಿ.ಹಿರೇಮಠ, ಪಿಡಿಒ ಪಿ.ಎಸ್.ನಾಯ್ಕೋಡಿ ಕಾರ್ಯನಿರ್ವಹಿಸಿದರು.ಪೊಲೀಸ್ ಇಲಾಖೆಯಿಂದ ಎಎಸ್ಐ ಎ.ಬಿ.ಟಕ್ಕಳಕಿ, ಶಾಂತಗೌಡ ಬನ್ನೆಟ್ಟಿ ಭದ್ರತೆ ಒದಗಿಸಿದ್ದರು.

ಹಿನ್ನಡೆ : ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯೊಳಗಡೆ ನಾಮಪತ್ರದೊಂದಿಗೆ ಲಗತ್ತಿಸಲು ವಿಫಲರಾಗಿದ್ದಕ್ಕೆ ಕವಿತಾ ಶಿರಗುಪ್ಪಿ ಅವರು ಚುನಾವಣಾ ಕಣದಿಂದ ಹಿನ್ನಡೆ ಅನುಭವಿಸಬೇಕಾಯಿತು.

ಹಾಲಿ,ಮಾಜಿ ಶಾಸಕರಿಂದಲೂ ಮಾಹಿತಿ :
ನಾಮಪತ್ರದೊಂದಿಗೆ ಜಾತಿ ಪ್ರಮಾಣ ಪತ್ರ ಸಲ್ಲಿಕೆ ಸಮಯದಲ್ಲಿ ಉಂಟಾದ ಗೊಂದಲದ ಬಗ್ಗೆ ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಚುನಾವಣಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

Ad
Ad

Latest News

ಎನ್.ಎಸ್.ಎಸ್ ಶಿಬಿರ ಸಮಾರೋಪ:ಯೋಜನೆಗಳ ಯಶಸ್ವಿಗೆ ಸಮಾಜದ ಸಹಭಾಗಿತ್ವ ಅಗತ್ಯ-ಪಾಟೀಲ್

ಎನ್.ಎಸ್.ಎಸ್ ಶಿಬಿರ ಸಮಾರೋಪ:ಯೋಜನೆಗಳ ಯಶಸ್ವಿಗೆ ಸಮಾಜದ ಸಹಭಾಗಿತ್ವ ಅಗತ್ಯ-ಪಾಟೀಲ್

ಮುದ್ದೇಬಿಹಾಳ : ಸರ್ಕಾರಗಳು ಜಾರಿಗೊಳಿಸುವ ಜನಪರ ಯೋಜನೆಗಳ ಯಶಸ್ವಿಗೆ ಸಮಾಜದ ಸಹಕಾರ ಅತ್ಯಗತ್ಯ ಎಂದು

ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ

ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ

ಹುಣಸಗಿ: ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಜೋಗಂಡಬಾವಿ ಗ್ರಾಮಸ್ಥರು ಪ್ರತಿಭಟನೆ

ಮಳೆಯಿಂದ ಪಂದ್ಯ ರದ್ದು: ಕೋಲ್ಕತ್ತಾ ಪ್ಲೇ ಆಫ್ ಹಾದಿ ಕಠಿಣ

ಮಳೆಯಿಂದ ಪಂದ್ಯ ರದ್ದು: ಕೋಲ್ಕತ್ತಾ ಪ್ಲೇ ಆಫ್ ಹಾದಿ ಕಠಿಣ

ಕೋಲ್ಕತ್ತಾ: ಮಳೆಯಿಂದ ಪಂಜಾಬ್ ಹಾಗೂ ಕೋಲ್ಕತ್ತಾ ನಡುವಿನ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಉಭಯ ತಂಡಗಳಿಗೂ

ಯುಪಿಎಸ್‌ಸಿ ಟಾಪರ್‌ಗೆ ಸನ್ಮಾನ

ಯುಪಿಎಸ್‌ಸಿ ಟಾಪರ್‌ಗೆ ಸನ್ಮಾನ

ಮುದ್ದೇಬಿಹಾಳ : ಯುಪಿಎಸ್ಸಿ ಪರೀಕ್ಷೆಯಲ್ಲಿ ಪಟ್ಟಣದ ಯುವಕ ರಾಹುಲ್ ಯರಂತೇಲಿ 462ನೇ ರ‍್ಯಾಂಕ್ ಪಡೆದುಕೊಂಡ

ಗ್ರಾಮ ಪಂಚಾಯತ್ ಉಪ ಚುನಾವಣೆ : ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಗ್ರಾಮ ಪಂಚಾಯತ್ ಉಪ ಚುನಾವಣೆ : ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದ 265 ಗ್ರಾಮ ಪಂಚಾಯತ್ ಸ್ಥಾನಗಳ ಉಪ‌ ಚುನಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದೆ. ಮೇ 25 ರಂದು ಮತದಾನ ನಡೆಯಲಿದ್ದು, 28 ರಂದು ಮತ ಎಣಿಕೆ ನಡೆಯಲಿದೆ. ಮೇ 11 ರಂದು ನಡಯಬೇಕಿದ್ದ ಮತದಾನವನ್ನು ರಾಜ್ಯ ಸರ್ಕಾರದ ಮನವಿಯ ಮೇರೆಗೆ ಚುನಾವಣಾ ಆಯೋಗ ಮೂಂದುಡಿದೆ. ಈಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದೆ. ಮೇ 8 ರಂದು ಉಪಚುನಾವಣೆಯ ಅಧಿಸೂಚನೆ ಪ್ರಕಟಿಸಲಿದ್ದು, ಮೇ 14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಎಸ್.ಆರ್.ಎಚ್ ವಿರುದ್ಧ ಸೋತ ಚೆನ್ನೈ ಟೂರ್ನಿಯಿಂದ ಔಟ್..!

ಎಸ್.ಆರ್.ಎಚ್ ವಿರುದ್ಧ ಸೋತ ಚೆನ್ನೈ ಟೂರ್ನಿಯಿಂದ ಔಟ್..!

ಚೆನ್ನೈ: ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಸಿ.ಎಸ್.ಕೆ ಹಾಗೂ ಎಸ್.ಆರ್.ಎಚ್ ತಂಡಗಳ ನಡುವಿನ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ 5 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ 19.5 ಓವರ್‌ಗಳಲ್ಲಿ 154 ರನ್‌ಗಳಿಗೆ ಸರ್ವಪತನ ಕಂಡಿತ್ತು. ಹೈದರಾಬಾದ್‌ ತಂಡಕ್ಕೆ ಗೆಲ್ಲಲು 155 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಹೈದರಾಬಾದ್‌ 18.4 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 155 ರನ್‌ ಕಲೆಹಾಕಿತು.