ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!

ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಆಯ್ಕೆ ಬಯಸಿ ಸಲ್ಲಿಕೆಯಾಗಿದ್ದ ಎರಡು ನಾಮಪತ್ರಗಳಲ್ಲಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ಮದ್ಯಾಹ್ನ 1 ಗಂಟೆಯಿಂದ ನಾಮಪತ್ರಗಳ ಪರಿಶೀಲನೆ ಕಾರ್ಯವನ್ನು ನಾಮಪತ್ರ ಸಲ್ಲಿಸಿದ್ದ ಶಾಂತಾ ಮದರಿ ಹಾಗೂ ಕವಿತಾ ಶಿರಗುಪ್ಪಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳು ನಡೆಸಿದರು.ಈ ವೇಳೆ ಕವಿತಾ ಶಿರಗುಪ್ಪಿ ಅವರು ಸಲ್ಲಿಸಿದ್ದ ನಾಮಪತ್ರದ ಜೊತೆಗೆ ಮೀಸಲಾತಿ ಅಡಿ ಸ್ಪರ್ಧೆ ಮಾಡಿದ್ದರಿಂದ ಲಗತ್ತಿಸಬೇಕಾಗಿದ್ದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸದೇ ಇರುವುದರಿಂದ ಹಾಗೂ ಕೆಲವು ಕಡೆಗಳಲ್ಲಿ ಸಹಿ ಮಾಡದೇ ಇದ್ದುದ್ದರಿಂದ ಶಿರಗುಪ್ಪಿ ಅವರ ನಾಮಪತ್ರವನ್ನು ತಿರಸ್ಕಾರ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಎಸ್.ಕೆ.ಮಾಳಗೊಂಡ ತಿಳಿಸಿದರು.

ನಾಮಪತ್ರಗಳ ಪರಿಶೀಲನೆ ಕಾರ್ಯ ಮುಗಿದಿದ್ದು ನ.23ರವರೆಗೆ ನಾಮಪತ್ರಗಳ ಹಿಂದಕ್ಕೆ ಪಡೆಯುವುದಕ್ಕೆ ಅವಕಾಶ ಇದೆ.ನ.26ರಂದು ಫಲಿತಾಂಶ ಪ್ರಕಟಿಸಿ ಆಯ್ಕೆಯಾದವರಿಗೆ ಪ್ರಮಾಣ ಪತ್ರ ನೀಡುವುದಾಗಿ ತಿಳಿಸಿದರು.

ಕಣದಲ್ಲಿ ಶಾಂತಾ ಮದರಿ ಒಬ್ಬರೇ ಉಳಿದಿದ್ದು ಅವರ ಆಯ್ಕೆ ಆದಂತಾಗಿದೆ.ಅಧಿಕೃತವಾಗಿ ಘೋಷಣೆಯೊಂದೇ ಬಾಕಿ ಉಳಿದಿದೆ.
ಚುನಾವಣೆಗೆ ಸಹಾಯಕರಾಗಿ ಆಯ್.ಬಿ.ಹಿರೇಮಠ, ಪಿಡಿಒ ಪಿ.ಎಸ್.ನಾಯ್ಕೋಡಿ ಕಾರ್ಯನಿರ್ವಹಿಸಿದರು.ಪೊಲೀಸ್ ಇಲಾಖೆಯಿಂದ ಎಎಸ್ಐ ಎ.ಬಿ.ಟಕ್ಕಳಕಿ, ಶಾಂತಗೌಡ ಬನ್ನೆಟ್ಟಿ ಭದ್ರತೆ ಒದಗಿಸಿದ್ದರು.

ಹಿನ್ನಡೆ : ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯೊಳಗಡೆ ನಾಮಪತ್ರದೊಂದಿಗೆ ಲಗತ್ತಿಸಲು ವಿಫಲರಾಗಿದ್ದಕ್ಕೆ ಕವಿತಾ ಶಿರಗುಪ್ಪಿ ಅವರು ಚುನಾವಣಾ ಕಣದಿಂದ ಹಿನ್ನಡೆ ಅನುಭವಿಸಬೇಕಾಯಿತು.

ಹಾಲಿ,ಮಾಜಿ ಶಾಸಕರಿಂದಲೂ ಮಾಹಿತಿ :
ನಾಮಪತ್ರದೊಂದಿಗೆ ಜಾತಿ ಪ್ರಮಾಣ ಪತ್ರ ಸಲ್ಲಿಕೆ ಸಮಯದಲ್ಲಿ ಉಂಟಾದ ಗೊಂದಲದ ಬಗ್ಗೆ ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಚುನಾವಣಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ