33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

ಮುದ್ದೇಬಿಹಾಳ : ಈ ಭಾಗದಲ್ಲಿ ಪ್ರಗತಿಯಲ್ಲಿರುವ ಬೂದಿಹಾಳ-ಪೀರಾಪೂರ ಹಾಗೂ ನಾಗರಬೆಟ್ಟ ಏತ ನೀರಾವರಿ ಯೋಜನೆಗಳನ್ನು ಶೀಘ್ರವೇ ದಿನಾಂಕ ನಿಗದಿ ಮಾಡಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೆಎಸ್‌ಡಿ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ತಾಲ್ಲೂಕಿನ ನಾಲತವಾಡದ ಸಮೀಪದಲ್ಲಿರುವ ಅಮರೇಶ್ವರ ದೇವಸ್ಥಾನದ ಬಳಿ ಸ್ಥಗಿತಗೊಂಡಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಬಾಕಿ ಕಾಮಗಾರಿಗೆ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಗುರುವಾರ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸುಮಾರು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಕಿಮೀ 19.600 ರ ರಸ್ತೆಗೆ ಅಡ್ಡಲಾಗಿ ನಿರ್ಮಿಸುವ ಕಾಲುವೆ 33.57 ಲಕ್ಷ ಮೊತ್ತದ ಸೇತುವೆಗೆ ಚಾಲನೆ ನೀಡಲಾಗಿದೆ. ಸದ್ಯ ಚಾಲನೆ ನೀಡಲಾದ ಸೇತುವೆ ಕಾಮಗಾರಿಗೆ ಪ್ಯಾಕೇಜ್ ಕಾಮಗಾರಿಯಲ್ಲಿ ಸೇರಿಸಲಾಗಿತ್ತು. ಮನಬಂದAತೆ ಯಾರಿಗೂ ಗುತ್ತಿಗೆ ಕೊಡಬಾರದು ಎನ್ನುವ ಉದ್ದೇಶದಿಂದ ವಿಳಂಬವಾಯಿತು. ಸಿಂಗಲ್ ಗುತ್ತಿಗೆ ಅವೈಜ್ಞಾನಿಕವಾಗಿತ್ತು. ಪ್ಯಾಕೇಜ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕಾಮಗಾರಿ ವಿಳಂಬವಾಯಿತು ಎಂದರು.

ರೈತರ ಅಡೆತಡೆ ಮತ್ತು ಗುತ್ತಿಗೆಯ ತಾಂತ್ರಿಕ ದೋಷದ ಪರಿಣಾಮ ಹಲವು ಬಾರಿ ಕಾಮಗಾರಿ ವಿಳಂಬವಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಈಗ ಕೆಲಸ ಶುರು ಮಾಡಲಾಗುತ್ತದೆ ಎಂದರು.ನಮ್ಮ ಭಾಗದ ನಾಗರಬೆಟ್ಟ ಹಾಗೂ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯೂ ಸಹ ಬಹುತೇಕ ಪೂರ್ಣಗೊಂಡಿದ್ದು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.

—-

ಆಮರಣ ಉಪವಾಸ ಸತ್ಯಾಗ್ರಹ ಹಿಂದಕ್ಕೆ : ಹಲವಾರು ವರ್ಷ ನನೆಗುದಿಗೆ ಬಿದ್ದಿದ್ದ ಕಾಲುವೆ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ ಯುವ ಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ನೇತೃತ್ವದಲ್ಲಿ ನ.18 ರಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದರು.ಈ ಹಿಂದೆಯೂ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಅಧಿಕಾರಿಗಳು, ಸರ್ಕಾರದ ಗಮನಕ್ಕೆ ತಂದಿದ್ದರು.ಇದಕ್ಕೆ ಸ್ಪಂದಿಸಿರುವ ಶಾಸಕ ಅಪ್ಪಾಜಿ ನಾಡಗೌಡ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳೊಂದಿಗೆ ಮಾತನಾಡಿ ಕಾಮಗಾರಿ ಆರಂಭಕ್ಕೆ ಭೂಮಿ ಪೂಜೆ ನಡೆಸುವ ಮೂಲಕ ಹೋರಾಟಗಾರರಿಗೆ ಸ್ಪಂದಿಸಿದ್ದಾರೆ.ಹೋರಾಟಕ್ಕೆ ಅಧಿಕಾರಿಗಳು, ಸರ್ಕಾರ, ಶಾಸಕರು ಸ್ಪಂದಿಸಿರುವ ಹಿನ್ನೆಲೆಯಲ್ಲಿ ಉದ್ದೇಶಿತ ಹೋರಾಟವನ್ನು ಹಿಂದಕ್ಕೆ ಪಡೆದುಕೊಂಡಿರುವುದಾಗಿ ಹೋರಾಟಗಾರ ಶಿವಾನಂದ ವಾಲಿ ತಿಳಿಸಿದ್ದು ಆದಷ್ಟು ಬೇಗ ರೈತ ಜಮೀನುಗಳಿಗೆ ನೀರು ಹರಿಯಬೇಕು.ಜಮೀನು ಕಳೆದುಕೊಂಡವರಿಗೆ ಪರಿಹಾರ ದೊರೆಯಬೇಕು ಎಂದು DCG NEWSಗೆ ತಿಳಿಸಿದ್ದಾರೆ.

ಪ್ರಮುಖರಾದ ಮುರುಗಯ್ಯ ಕಂಠಿಮಠ, ಪ.ಪಂ ಸದಸ್ಯರಾದ ಪ್ರಥ್ವಿರಾಜ ನಾಡಗೌಡ, ಮುಖಂಡ ಗುರು ದೇಶಮುಖ, ಗುತ್ತಿಗೆದಾರ ರಾಯನಗೌಡ ತಾತರಡ್ಡಿ, ಪ.ಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಇಲಕಲ್, ಉಪಾಧ್ಯಕ್ಷ ಬಸವರಾಜ ಗಂಗನಗೌಡ್ರ, ಸಿಒ ಈರಣ್ಣ ಕೊಣ್ಣೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವಾಯ್.ಎಚ್.ವಿಜಯಕರ್, ಲಲಿತಾ ಗೋರಬಾಳ, ರಾಜಬಿ ನಾಡದಾಳ, ಯಮನಪ್ಪ ಬಂಡಿವಡ್ಡರ, ಕೆಬಿಜೆಎನ್‌ಎಲ್ ಎಇ ಅಮರೇಗೌಡ, ಮುತ್ತು ಗೋರಬಾಳ,ಎಇ ಅಬೂಬಕರ್ ಬಾಗವಾನ, ಸುನಿಲಕುಮಾರ , ಮಹಾಂತೇಶ ಗಂಗನಗೌಡ್ರ , ಉಮರ್ ಮೂಲಿಮನಿ, ಬಾಬು ಕ್ಷತ್ರಿ, ಅಮರಪ್ಪ ಸೀರಿ, ಅಲ್ಲಾಭಕ್ಷ ಮೂಲಿಮನಿ ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ