33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

ಮುದ್ದೇಬಿಹಾಳ : ಈ ಭಾಗದಲ್ಲಿ ಪ್ರಗತಿಯಲ್ಲಿರುವ ಬೂದಿಹಾಳ-ಪೀರಾಪೂರ ಹಾಗೂ ನಾಗರಬೆಟ್ಟ ಏತ ನೀರಾವರಿ ಯೋಜನೆಗಳನ್ನು ಶೀಘ್ರವೇ ದಿನಾಂಕ ನಿಗದಿ ಮಾಡಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೆಎಸ್‌ಡಿ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ತಾಲ್ಲೂಕಿನ ನಾಲತವಾಡದ ಸಮೀಪದಲ್ಲಿರುವ ಅಮರೇಶ್ವರ ದೇವಸ್ಥಾನದ ಬಳಿ ಸ್ಥಗಿತಗೊಂಡಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಬಾಕಿ ಕಾಮಗಾರಿಗೆ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಗುರುವಾರ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸುಮಾರು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಕಿಮೀ 19.600 ರ ರಸ್ತೆಗೆ ಅಡ್ಡಲಾಗಿ ನಿರ್ಮಿಸುವ ಕಾಲುವೆ 33.57 ಲಕ್ಷ ಮೊತ್ತದ ಸೇತುವೆಗೆ ಚಾಲನೆ ನೀಡಲಾಗಿದೆ. ಸದ್ಯ ಚಾಲನೆ ನೀಡಲಾದ ಸೇತುವೆ ಕಾಮಗಾರಿಗೆ ಪ್ಯಾಕೇಜ್ ಕಾಮಗಾರಿಯಲ್ಲಿ ಸೇರಿಸಲಾಗಿತ್ತು. ಮನಬಂದAತೆ ಯಾರಿಗೂ ಗುತ್ತಿಗೆ ಕೊಡಬಾರದು ಎನ್ನುವ ಉದ್ದೇಶದಿಂದ ವಿಳಂಬವಾಯಿತು. ಸಿಂಗಲ್ ಗುತ್ತಿಗೆ ಅವೈಜ್ಞಾನಿಕವಾಗಿತ್ತು. ಪ್ಯಾಕೇಜ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕಾಮಗಾರಿ ವಿಳಂಬವಾಯಿತು ಎಂದರು.

ರೈತರ ಅಡೆತಡೆ ಮತ್ತು ಗುತ್ತಿಗೆಯ ತಾಂತ್ರಿಕ ದೋಷದ ಪರಿಣಾಮ ಹಲವು ಬಾರಿ ಕಾಮಗಾರಿ ವಿಳಂಬವಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಈಗ ಕೆಲಸ ಶುರು ಮಾಡಲಾಗುತ್ತದೆ ಎಂದರು.ನಮ್ಮ ಭಾಗದ ನಾಗರಬೆಟ್ಟ ಹಾಗೂ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯೂ ಸಹ ಬಹುತೇಕ ಪೂರ್ಣಗೊಂಡಿದ್ದು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.

—-

ಆಮರಣ ಉಪವಾಸ ಸತ್ಯಾಗ್ರಹ ಹಿಂದಕ್ಕೆ : ಹಲವಾರು ವರ್ಷ ನನೆಗುದಿಗೆ ಬಿದ್ದಿದ್ದ ಕಾಲುವೆ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ ಯುವ ಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ನೇತೃತ್ವದಲ್ಲಿ ನ.18 ರಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದರು.ಈ ಹಿಂದೆಯೂ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಅಧಿಕಾರಿಗಳು, ಸರ್ಕಾರದ ಗಮನಕ್ಕೆ ತಂದಿದ್ದರು.ಇದಕ್ಕೆ ಸ್ಪಂದಿಸಿರುವ ಶಾಸಕ ಅಪ್ಪಾಜಿ ನಾಡಗೌಡ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳೊಂದಿಗೆ ಮಾತನಾಡಿ ಕಾಮಗಾರಿ ಆರಂಭಕ್ಕೆ ಭೂಮಿ ಪೂಜೆ ನಡೆಸುವ ಮೂಲಕ ಹೋರಾಟಗಾರರಿಗೆ ಸ್ಪಂದಿಸಿದ್ದಾರೆ.ಹೋರಾಟಕ್ಕೆ ಅಧಿಕಾರಿಗಳು, ಸರ್ಕಾರ, ಶಾಸಕರು ಸ್ಪಂದಿಸಿರುವ ಹಿನ್ನೆಲೆಯಲ್ಲಿ ಉದ್ದೇಶಿತ ಹೋರಾಟವನ್ನು ಹಿಂದಕ್ಕೆ ಪಡೆದುಕೊಂಡಿರುವುದಾಗಿ ಹೋರಾಟಗಾರ ಶಿವಾನಂದ ವಾಲಿ ತಿಳಿಸಿದ್ದು ಆದಷ್ಟು ಬೇಗ ರೈತ ಜಮೀನುಗಳಿಗೆ ನೀರು ಹರಿಯಬೇಕು.ಜಮೀನು ಕಳೆದುಕೊಂಡವರಿಗೆ ಪರಿಹಾರ ದೊರೆಯಬೇಕು ಎಂದು DCG NEWSಗೆ ತಿಳಿಸಿದ್ದಾರೆ.

ಪ್ರಮುಖರಾದ ಮುರುಗಯ್ಯ ಕಂಠಿಮಠ, ಪ.ಪಂ ಸದಸ್ಯರಾದ ಪ್ರಥ್ವಿರಾಜ ನಾಡಗೌಡ, ಮುಖಂಡ ಗುರು ದೇಶಮುಖ, ಗುತ್ತಿಗೆದಾರ ರಾಯನಗೌಡ ತಾತರಡ್ಡಿ, ಪ.ಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಇಲಕಲ್, ಉಪಾಧ್ಯಕ್ಷ ಬಸವರಾಜ ಗಂಗನಗೌಡ್ರ, ಸಿಒ ಈರಣ್ಣ ಕೊಣ್ಣೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವಾಯ್.ಎಚ್.ವಿಜಯಕರ್, ಲಲಿತಾ ಗೋರಬಾಳ, ರಾಜಬಿ ನಾಡದಾಳ, ಯಮನಪ್ಪ ಬಂಡಿವಡ್ಡರ, ಕೆಬಿಜೆಎನ್‌ಎಲ್ ಎಇ ಅಮರೇಗೌಡ, ಮುತ್ತು ಗೋರಬಾಳ,ಎಇ ಅಬೂಬಕರ್ ಬಾಗವಾನ, ಸುನಿಲಕುಮಾರ , ಮಹಾಂತೇಶ ಗಂಗನಗೌಡ್ರ , ಉಮರ್ ಮೂಲಿಮನಿ, ಬಾಬು ಕ್ಷತ್ರಿ, ಅಮರಪ್ಪ ಸೀರಿ, ಅಲ್ಲಾಭಕ್ಷ ಮೂಲಿಮನಿ ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ