33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

Ad
Ad

ಮುದ್ದೇಬಿಹಾಳ : ಈ ಭಾಗದಲ್ಲಿ ಪ್ರಗತಿಯಲ್ಲಿರುವ ಬೂದಿಹಾಳ-ಪೀರಾಪೂರ ಹಾಗೂ ನಾಗರಬೆಟ್ಟ ಏತ ನೀರಾವರಿ ಯೋಜನೆಗಳನ್ನು ಶೀಘ್ರವೇ ದಿನಾಂಕ ನಿಗದಿ ಮಾಡಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೆಎಸ್‌ಡಿ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

Ad
Ad

ತಾಲ್ಲೂಕಿನ ನಾಲತವಾಡದ ಸಮೀಪದಲ್ಲಿರುವ ಅಮರೇಶ್ವರ ದೇವಸ್ಥಾನದ ಬಳಿ ಸ್ಥಗಿತಗೊಂಡಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಬಾಕಿ ಕಾಮಗಾರಿಗೆ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಗುರುವಾರ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸುಮಾರು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಕಿಮೀ 19.600 ರ ರಸ್ತೆಗೆ ಅಡ್ಡಲಾಗಿ ನಿರ್ಮಿಸುವ ಕಾಲುವೆ 33.57 ಲಕ್ಷ ಮೊತ್ತದ ಸೇತುವೆಗೆ ಚಾಲನೆ ನೀಡಲಾಗಿದೆ. ಸದ್ಯ ಚಾಲನೆ ನೀಡಲಾದ ಸೇತುವೆ ಕಾಮಗಾರಿಗೆ ಪ್ಯಾಕೇಜ್ ಕಾಮಗಾರಿಯಲ್ಲಿ ಸೇರಿಸಲಾಗಿತ್ತು. ಮನಬಂದAತೆ ಯಾರಿಗೂ ಗುತ್ತಿಗೆ ಕೊಡಬಾರದು ಎನ್ನುವ ಉದ್ದೇಶದಿಂದ ವಿಳಂಬವಾಯಿತು. ಸಿಂಗಲ್ ಗುತ್ತಿಗೆ ಅವೈಜ್ಞಾನಿಕವಾಗಿತ್ತು. ಪ್ಯಾಕೇಜ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕಾಮಗಾರಿ ವಿಳಂಬವಾಯಿತು ಎಂದರು.

ರೈತರ ಅಡೆತಡೆ ಮತ್ತು ಗುತ್ತಿಗೆಯ ತಾಂತ್ರಿಕ ದೋಷದ ಪರಿಣಾಮ ಹಲವು ಬಾರಿ ಕಾಮಗಾರಿ ವಿಳಂಬವಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಈಗ ಕೆಲಸ ಶುರು ಮಾಡಲಾಗುತ್ತದೆ ಎಂದರು.ನಮ್ಮ ಭಾಗದ ನಾಗರಬೆಟ್ಟ ಹಾಗೂ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯೂ ಸಹ ಬಹುತೇಕ ಪೂರ್ಣಗೊಂಡಿದ್ದು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.

—-

ಆಮರಣ ಉಪವಾಸ ಸತ್ಯಾಗ್ರಹ ಹಿಂದಕ್ಕೆ : ಹಲವಾರು ವರ್ಷ ನನೆಗುದಿಗೆ ಬಿದ್ದಿದ್ದ ಕಾಲುವೆ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ ಯುವ ಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ನೇತೃತ್ವದಲ್ಲಿ ನ.18 ರಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದರು.ಈ ಹಿಂದೆಯೂ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಅಧಿಕಾರಿಗಳು, ಸರ್ಕಾರದ ಗಮನಕ್ಕೆ ತಂದಿದ್ದರು.ಇದಕ್ಕೆ ಸ್ಪಂದಿಸಿರುವ ಶಾಸಕ ಅಪ್ಪಾಜಿ ನಾಡಗೌಡ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳೊಂದಿಗೆ ಮಾತನಾಡಿ ಕಾಮಗಾರಿ ಆರಂಭಕ್ಕೆ ಭೂಮಿ ಪೂಜೆ ನಡೆಸುವ ಮೂಲಕ ಹೋರಾಟಗಾರರಿಗೆ ಸ್ಪಂದಿಸಿದ್ದಾರೆ.ಹೋರಾಟಕ್ಕೆ ಅಧಿಕಾರಿಗಳು, ಸರ್ಕಾರ, ಶಾಸಕರು ಸ್ಪಂದಿಸಿರುವ ಹಿನ್ನೆಲೆಯಲ್ಲಿ ಉದ್ದೇಶಿತ ಹೋರಾಟವನ್ನು ಹಿಂದಕ್ಕೆ ಪಡೆದುಕೊಂಡಿರುವುದಾಗಿ ಹೋರಾಟಗಾರ ಶಿವಾನಂದ ವಾಲಿ ತಿಳಿಸಿದ್ದು ಆದಷ್ಟು ಬೇಗ ರೈತ ಜಮೀನುಗಳಿಗೆ ನೀರು ಹರಿಯಬೇಕು.ಜಮೀನು ಕಳೆದುಕೊಂಡವರಿಗೆ ಪರಿಹಾರ ದೊರೆಯಬೇಕು ಎಂದು DCG NEWSಗೆ ತಿಳಿಸಿದ್ದಾರೆ.

ಪ್ರಮುಖರಾದ ಮುರುಗಯ್ಯ ಕಂಠಿಮಠ, ಪ.ಪಂ ಸದಸ್ಯರಾದ ಪ್ರಥ್ವಿರಾಜ ನಾಡಗೌಡ, ಮುಖಂಡ ಗುರು ದೇಶಮುಖ, ಗುತ್ತಿಗೆದಾರ ರಾಯನಗೌಡ ತಾತರಡ್ಡಿ, ಪ.ಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಇಲಕಲ್, ಉಪಾಧ್ಯಕ್ಷ ಬಸವರಾಜ ಗಂಗನಗೌಡ್ರ, ಸಿಒ ಈರಣ್ಣ ಕೊಣ್ಣೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವಾಯ್.ಎಚ್.ವಿಜಯಕರ್, ಲಲಿತಾ ಗೋರಬಾಳ, ರಾಜಬಿ ನಾಡದಾಳ, ಯಮನಪ್ಪ ಬಂಡಿವಡ್ಡರ, ಕೆಬಿಜೆಎನ್‌ಎಲ್ ಎಇ ಅಮರೇಗೌಡ, ಮುತ್ತು ಗೋರಬಾಳ,ಎಇ ಅಬೂಬಕರ್ ಬಾಗವಾನ, ಸುನಿಲಕುಮಾರ , ಮಹಾಂತೇಶ ಗಂಗನಗೌಡ್ರ , ಉಮರ್ ಮೂಲಿಮನಿ, ಬಾಬು ಕ್ಷತ್ರಿ, ಅಮರಪ್ಪ ಸೀರಿ, ಅಲ್ಲಾಭಕ್ಷ ಮೂಲಿಮನಿ ಇದ್ದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500