ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

Ad
Ad

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

Ad
Ad

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.‌ ಜನಿವಾರ ವಿಪ್ರ ಸಮಾಜವೂ ಸೇರಿ ಹಲವು ಸಮಾಜದವರ ಪ್ರಾತಿನಿಧಿಕ ಸಂಕೇತವಾಗಿದ್ದು ಅದಕ್ಕೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ. ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.