ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ