ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಮುದ್ದೇಬಿಹಾಳ : ನವಜಾತ ಶಿಶುಗಳ ನಿಯಮಿತ ಆರೈಕೆಯಿಂದ ಆರೋಗ್ಯಪೂರ್ಣವಾದ ಮಗು ಸಮಾಜದಲ್ಲಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳ ಲಾಲನೆ, ಪೋಷಣೆಗೆ ಮೂಢನಂಬಿಕೆಗಳ ಮೊರೆ ಹೋಗದೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಸೂಕ್ತ ಎಂದು ಚಿಕ್ಕಮಕ್ಕಳ ತಜ್ಞವೈದ್ಯ ಡಾ.ಪರಶುರಾಮ ವಡ್ಡರ(ಮದರಿ) ಹೇಳಿದರು.
ಪಟ್ಟಣದ ಬೆಂಗಳೂರು ಬೇಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನಿರ್ದೇಶಕ ಕುಮಾರ ವಡ್ಡರ ಹೇಳಿದರು.
ಪಟ್ಟಣದ ಖಾಸಗಿ ಬೇಕರಿ ಸಭಾಭವನದಲ್ಲಿ ತಾಲ್ಲೂಕಿನ ಮದರಿ ಗ್ರಾಮದ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಮತ್ತು ಅರ್ಜುನ ಆಸ್ಪತ್ರೆ ಇವರ ಸಹಯೋಗದಲ್ಲಿ ಭಾನುವಾರ ಆಶಾ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ನವಜಾತ ಶಿಶುಗಳ ಆರೈಕೆ, ಉಚಿತ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯರು ಹೇಳುವ ಮಾತುಗಳಿಗಿಂತ ಗ್ರಾಮೀಣ ಪ್ರದೇಶದಲ್ಲಿ, ನಗರ ಪ್ರದೇಶದಲ್ಲಾಗಲೀ ಆಶಾ, ಅಂಗನವಾಡಿ ಕಾರ್ಯಕರ್ತರು ಹೇಳುವ ಸಲಹೆಗಳಿಗೆ ತಾಯಂದಿರು ಹೆಚ್ಚು ಮಹತ್ವ ನೀಡುತ್ತಾರೆ.ಅವರು ನವಜಾತ ಶಿಶುಗಳ ಆರೈಕೆಯ ಕುರಿತು ಅರಿತುಕೊಳ್ಳಬೇಕು. ಹುಟ್ಟಿದ ಕೂಡಲೇ ಮಗು ಮೃತಪಟ್ಟರೆ ಅದನ್ನು ಕಳೆದುಕೊಂಡ ಹೆತ್ತವರ ದುಃಖ ಎಂಥವರಲ್ಲೂ ಸಂಕಟಪಡುವAತಾಗುತ್ತದೆ ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ ಮಾತನಾಡಿ, ಕಳೆದ ಎರಡ್ಮೂರು ವರ್ಷಗಳ ಮುಂಚೆ ಮಕ್ಕಳಿಗೆ ಕಾಯಿಲೆ ಗಂಭೀರ ಸ್ವರೂಪದ್ದೆಂದು ಕಂಡು ಬಂದರೆ ತಾಳಿಕೋಟಿಗೋ, ಬಾಗಲಕೋಟೆಗೋ ಹೋಗುತ್ತಿದ್ದೇವು.ಆದರೆ ಚಿಕ್ಕಮಕ್ಕಳ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಪರಶುರಾಮ ವಡ್ಡರ ಅವರು ಬಡವರು, ಬಲ್ಲಿದವರೆನ್ನದೇ ಎಲ್ಲರಿಗೂ ಮೃದುಸ್ವಭಾವದಿಂದ ಸೇವೆ ನೀಡುತ್ತಿರುವುದು ನಮ್ಮ ತಾಲ್ಲೂಕಿನ ಹೆಮ್ಮೆಯಾಗಿದೆ ಎಂದರು.

ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ನಿಸರ್ಗ, ಎಂ.ಜಿ.ಎA.ಕೆ ಪಪೂ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ, ಟ್ರಸ್ಟ್ ಉಪಾಧ್ಯಕ್ಷ ಶರಣಪ್ಪ ವಡ್ಡರ, ಮುಖಂಡ ಪುಂಡಲೀಕ ಮುರಾಳ ಮಾತನಾಡಿದರು. ಚೈತ್ರಾ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಅಧ್ಯಕ್ಷ ಯಮನಪ್ಪ ವಡ್ಡರ, ಬಸವರಾಜ ಬಡಿಗೇರ, ಪತ್ರಕರ್ತ ಪರಶುರಾಮ ಕೊಣ್ಣೂರ, ಆಶಾ ಕಾರ್ಯಕರ್ತೆ ರೇಣುಕಾ ಚಲವಾದಿ ಮತ್ತಿತರರು ಇದ್ದರು. ಕುಮಾರ ವಡ್ಡರ,ಬಿ.ಆರ್.ಬೆಳ್ಳಿಕಟ್ಟಿ, ಶಂಕರ ದೊಡಮನಿ ಕಾರ್ಯಕ್ರಮ ನಿರ್ವಹಿಸಿದರು.ತಾಲ್ಲೂಕಿನ ಗರಸಂಗಿ ಹಾಗೂ ತಂಗಡಗಿ ಪಿ.ಎಚ್.ಸಿ ವ್ಯಾಪ್ತಿಯಲ್ಲಿ ಬರುವ ಆಶಾ ಕಾರ್ಯಕರ್ತೆಯರಿಗೆ ಉಚಿತವಾಗಿ ನವಜಾತ ಶಿಶುಗಳ ತರಬೇತಿಯನ್ನು ನೀಡಲಾಯಿತು.ಪತ್ರಕರ್ತರನ್ನು ಸನ್ಮಾನಿಸಲಾಯಿತು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ