ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಮುದ್ದೇಬಿಹಾಳ : ನವಜಾತ ಶಿಶುಗಳ ನಿಯಮಿತ ಆರೈಕೆಯಿಂದ ಆರೋಗ್ಯಪೂರ್ಣವಾದ ಮಗು ಸಮಾಜದಲ್ಲಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳ ಲಾಲನೆ, ಪೋಷಣೆಗೆ ಮೂಢನಂಬಿಕೆಗಳ ಮೊರೆ ಹೋಗದೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಸೂಕ್ತ ಎಂದು ಚಿಕ್ಕಮಕ್ಕಳ ತಜ್ಞವೈದ್ಯ ಡಾ.ಪರಶುರಾಮ ವಡ್ಡರ(ಮದರಿ) ಹೇಳಿದರು.
ಪಟ್ಟಣದ ಬೆಂಗಳೂರು ಬೇಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನಿರ್ದೇಶಕ ಕುಮಾರ ವಡ್ಡರ ಹೇಳಿದರು.
ಪಟ್ಟಣದ ಖಾಸಗಿ ಬೇಕರಿ ಸಭಾಭವನದಲ್ಲಿ ತಾಲ್ಲೂಕಿನ ಮದರಿ ಗ್ರಾಮದ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಮತ್ತು ಅರ್ಜುನ ಆಸ್ಪತ್ರೆ ಇವರ ಸಹಯೋಗದಲ್ಲಿ ಭಾನುವಾರ ಆಶಾ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ನವಜಾತ ಶಿಶುಗಳ ಆರೈಕೆ, ಉಚಿತ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯರು ಹೇಳುವ ಮಾತುಗಳಿಗಿಂತ ಗ್ರಾಮೀಣ ಪ್ರದೇಶದಲ್ಲಿ, ನಗರ ಪ್ರದೇಶದಲ್ಲಾಗಲೀ ಆಶಾ, ಅಂಗನವಾಡಿ ಕಾರ್ಯಕರ್ತರು ಹೇಳುವ ಸಲಹೆಗಳಿಗೆ ತಾಯಂದಿರು ಹೆಚ್ಚು ಮಹತ್ವ ನೀಡುತ್ತಾರೆ.ಅವರು ನವಜಾತ ಶಿಶುಗಳ ಆರೈಕೆಯ ಕುರಿತು ಅರಿತುಕೊಳ್ಳಬೇಕು. ಹುಟ್ಟಿದ ಕೂಡಲೇ ಮಗು ಮೃತಪಟ್ಟರೆ ಅದನ್ನು ಕಳೆದುಕೊಂಡ ಹೆತ್ತವರ ದುಃಖ ಎಂಥವರಲ್ಲೂ ಸಂಕಟಪಡುವAತಾಗುತ್ತದೆ ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ ಮಾತನಾಡಿ, ಕಳೆದ ಎರಡ್ಮೂರು ವರ್ಷಗಳ ಮುಂಚೆ ಮಕ್ಕಳಿಗೆ ಕಾಯಿಲೆ ಗಂಭೀರ ಸ್ವರೂಪದ್ದೆಂದು ಕಂಡು ಬಂದರೆ ತಾಳಿಕೋಟಿಗೋ, ಬಾಗಲಕೋಟೆಗೋ ಹೋಗುತ್ತಿದ್ದೇವು.ಆದರೆ ಚಿಕ್ಕಮಕ್ಕಳ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಪರಶುರಾಮ ವಡ್ಡರ ಅವರು ಬಡವರು, ಬಲ್ಲಿದವರೆನ್ನದೇ ಎಲ್ಲರಿಗೂ ಮೃದುಸ್ವಭಾವದಿಂದ ಸೇವೆ ನೀಡುತ್ತಿರುವುದು ನಮ್ಮ ತಾಲ್ಲೂಕಿನ ಹೆಮ್ಮೆಯಾಗಿದೆ ಎಂದರು.

ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ನಿಸರ್ಗ, ಎಂ.ಜಿ.ಎA.ಕೆ ಪಪೂ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ, ಟ್ರಸ್ಟ್ ಉಪಾಧ್ಯಕ್ಷ ಶರಣಪ್ಪ ವಡ್ಡರ, ಮುಖಂಡ ಪುಂಡಲೀಕ ಮುರಾಳ ಮಾತನಾಡಿದರು. ಚೈತ್ರಾ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಅಧ್ಯಕ್ಷ ಯಮನಪ್ಪ ವಡ್ಡರ, ಬಸವರಾಜ ಬಡಿಗೇರ, ಪತ್ರಕರ್ತ ಪರಶುರಾಮ ಕೊಣ್ಣೂರ, ಆಶಾ ಕಾರ್ಯಕರ್ತೆ ರೇಣುಕಾ ಚಲವಾದಿ ಮತ್ತಿತರರು ಇದ್ದರು. ಕುಮಾರ ವಡ್ಡರ,ಬಿ.ಆರ್.ಬೆಳ್ಳಿಕಟ್ಟಿ, ಶಂಕರ ದೊಡಮನಿ ಕಾರ್ಯಕ್ರಮ ನಿರ್ವಹಿಸಿದರು.ತಾಲ್ಲೂಕಿನ ಗರಸಂಗಿ ಹಾಗೂ ತಂಗಡಗಿ ಪಿ.ಎಚ್.ಸಿ ವ್ಯಾಪ್ತಿಯಲ್ಲಿ ಬರುವ ಆಶಾ ಕಾರ್ಯಕರ್ತೆಯರಿಗೆ ಉಚಿತವಾಗಿ ನವಜಾತ ಶಿಶುಗಳ ತರಬೇತಿಯನ್ನು ನೀಡಲಾಯಿತು.ಪತ್ರಕರ್ತರನ್ನು ಸನ್ಮಾನಿಸಲಾಯಿತು.

Latest News

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು. ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್