ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಮುದ್ದೇಬಿಹಾಳ : ನವಜಾತ ಶಿಶುಗಳ ನಿಯಮಿತ ಆರೈಕೆಯಿಂದ ಆರೋಗ್ಯಪೂರ್ಣವಾದ ಮಗು ಸಮಾಜದಲ್ಲಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳ ಲಾಲನೆ, ಪೋಷಣೆಗೆ ಮೂಢನಂಬಿಕೆಗಳ ಮೊರೆ ಹೋಗದೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಸೂಕ್ತ ಎಂದು ಚಿಕ್ಕಮಕ್ಕಳ ತಜ್ಞವೈದ್ಯ ಡಾ.ಪರಶುರಾಮ ವಡ್ಡರ(ಮದರಿ) ಹೇಳಿದರು.
ಪಟ್ಟಣದ ಬೆಂಗಳೂರು ಬೇಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನಿರ್ದೇಶಕ ಕುಮಾರ ವಡ್ಡರ ಹೇಳಿದರು.
ಪಟ್ಟಣದ ಖಾಸಗಿ ಬೇಕರಿ ಸಭಾಭವನದಲ್ಲಿ ತಾಲ್ಲೂಕಿನ ಮದರಿ ಗ್ರಾಮದ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಮತ್ತು ಅರ್ಜುನ ಆಸ್ಪತ್ರೆ ಇವರ ಸಹಯೋಗದಲ್ಲಿ ಭಾನುವಾರ ಆಶಾ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ನವಜಾತ ಶಿಶುಗಳ ಆರೈಕೆ, ಉಚಿತ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯರು ಹೇಳುವ ಮಾತುಗಳಿಗಿಂತ ಗ್ರಾಮೀಣ ಪ್ರದೇಶದಲ್ಲಿ, ನಗರ ಪ್ರದೇಶದಲ್ಲಾಗಲೀ ಆಶಾ, ಅಂಗನವಾಡಿ ಕಾರ್ಯಕರ್ತರು ಹೇಳುವ ಸಲಹೆಗಳಿಗೆ ತಾಯಂದಿರು ಹೆಚ್ಚು ಮಹತ್ವ ನೀಡುತ್ತಾರೆ.ಅವರು ನವಜಾತ ಶಿಶುಗಳ ಆರೈಕೆಯ ಕುರಿತು ಅರಿತುಕೊಳ್ಳಬೇಕು. ಹುಟ್ಟಿದ ಕೂಡಲೇ ಮಗು ಮೃತಪಟ್ಟರೆ ಅದನ್ನು ಕಳೆದುಕೊಂಡ ಹೆತ್ತವರ ದುಃಖ ಎಂಥವರಲ್ಲೂ ಸಂಕಟಪಡುವAತಾಗುತ್ತದೆ ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ ಮಾತನಾಡಿ, ಕಳೆದ ಎರಡ್ಮೂರು ವರ್ಷಗಳ ಮುಂಚೆ ಮಕ್ಕಳಿಗೆ ಕಾಯಿಲೆ ಗಂಭೀರ ಸ್ವರೂಪದ್ದೆಂದು ಕಂಡು ಬಂದರೆ ತಾಳಿಕೋಟಿಗೋ, ಬಾಗಲಕೋಟೆಗೋ ಹೋಗುತ್ತಿದ್ದೇವು.ಆದರೆ ಚಿಕ್ಕಮಕ್ಕಳ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಪರಶುರಾಮ ವಡ್ಡರ ಅವರು ಬಡವರು, ಬಲ್ಲಿದವರೆನ್ನದೇ ಎಲ್ಲರಿಗೂ ಮೃದುಸ್ವಭಾವದಿಂದ ಸೇವೆ ನೀಡುತ್ತಿರುವುದು ನಮ್ಮ ತಾಲ್ಲೂಕಿನ ಹೆಮ್ಮೆಯಾಗಿದೆ ಎಂದರು.

ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ನಿಸರ್ಗ, ಎಂ.ಜಿ.ಎA.ಕೆ ಪಪೂ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ, ಟ್ರಸ್ಟ್ ಉಪಾಧ್ಯಕ್ಷ ಶರಣಪ್ಪ ವಡ್ಡರ, ಮುಖಂಡ ಪುಂಡಲೀಕ ಮುರಾಳ ಮಾತನಾಡಿದರು. ಚೈತ್ರಾ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಅಧ್ಯಕ್ಷ ಯಮನಪ್ಪ ವಡ್ಡರ, ಬಸವರಾಜ ಬಡಿಗೇರ, ಪತ್ರಕರ್ತ ಪರಶುರಾಮ ಕೊಣ್ಣೂರ, ಆಶಾ ಕಾರ್ಯಕರ್ತೆ ರೇಣುಕಾ ಚಲವಾದಿ ಮತ್ತಿತರರು ಇದ್ದರು. ಕುಮಾರ ವಡ್ಡರ,ಬಿ.ಆರ್.ಬೆಳ್ಳಿಕಟ್ಟಿ, ಶಂಕರ ದೊಡಮನಿ ಕಾರ್ಯಕ್ರಮ ನಿರ್ವಹಿಸಿದರು.ತಾಲ್ಲೂಕಿನ ಗರಸಂಗಿ ಹಾಗೂ ತಂಗಡಗಿ ಪಿ.ಎಚ್.ಸಿ ವ್ಯಾಪ್ತಿಯಲ್ಲಿ ಬರುವ ಆಶಾ ಕಾರ್ಯಕರ್ತೆಯರಿಗೆ ಉಚಿತವಾಗಿ ನವಜಾತ ಶಿಶುಗಳ ತರಬೇತಿಯನ್ನು ನೀಡಲಾಯಿತು.ಪತ್ರಕರ್ತರನ್ನು ಸನ್ಮಾನಿಸಲಾಯಿತು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ