ಧಾರವಾಡ ಕೃಷಿ ವಿವಿ ನೇಮಕ: ಕೃಷಿ ಸಂಶೋಧನಾ ಪರಿಷತ್‌ಗೆ ಹೇಮರೆಡ್ಡಿ ಮೇಟಿ ನಾಮನಿರ್ದೇಶನ

ಧಾರವಾಡ ಕೃಷಿ ವಿವಿ ನೇಮಕ: ಕೃಷಿ ಸಂಶೋಧನಾ ಪರಿಷತ್‌ಗೆ ಹೇಮರೆಡ್ಡಿ ಮೇಟಿ ನಾಮನಿರ್ದೇಶನ

ಮುದ್ದೇಬಿಹಾಳ : ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಹಾಗೂ ಹೊಸ ತಳಿಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಸಂಶೋಧನಾ ಪರಿಷತ್‌ನ ನಾಮನಿರ್ದೇಶಿತ ಸದಸ್ಯರಾಗಿ ಮುದ್ದೇಬಿಹಾಳ ತಾಲ್ಲೂಕು ಬಸರಕೋಡದ ಪ್ರಗತಿಪರ ರೈತ, ಪಿ.ಕೆ.ಪಿಎಸ್ ಅಧ್ಯಕ್ಷರಾದ ಹೇಮರೆಡ್ಡಿ ಬ.ಮೇಟಿ ನೇಮಕಗೊಳಿಸಿ ಧಾರವಾಡ ಯುಎಎಸ್‌ನ ರಜಿಸ್ಟಾçರ್ ಜಯಲಕ್ಷಿö್ಮÃ ಆದೇಶಿಸಿದ್ದಾರೆ.

ಈಚೇಗೆ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ್ ಅವರು ಬಸರಕೋಡ ಭಾಗಕ್ಕೆ ಆಗಮಿಸಿದ ಸಮಯದಲ್ಲಿ ಮೇಟಿ ಅವರು ಕೈಗೊಂಡಿರುವ ಕೃಷಿ ಕ್ಷೇತ್ರದಲ್ಲಿನ ಸಾಧನೆಯ ಬಗ್ಗೆ ತಿಳಿದುಕೊಂಡಿದ್ದರು.ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಎರಡು ವರ್ಷಗಳ ಅವಧಿಗೆ ನೇಮಿಸಲಾಗಿದೆ. ಈ ಕೃಷಿ ಪರಿಷತ್‌ನಲ್ಲಿ ಬೆಂಗಳೂರು, ಧಾರವಾಡ, ವಿಜಯಪುರ ಕೃಷಿ ವಿಶ್ವವಿದ್ಯಾಲಯದ ಸುಮಾರು 45ಕ್ಕೂ ಹೆಚ್ಚು ಅಧಿಕಾರಿಗಳು,ವಿಜ್ಞಾನಿಗಳು, ಸಂಶೋಧಕರು ಇದ್ದಾರೆ.ರಾಜ್ಯದ ಇಬ್ಬರು ಪ್ರಗತಿಪರ ರೈತರಲ್ಲಿ ಮೇಟಿ ಒಬ್ಬರೂ ಇರುವುದು ವಿಶೇಷವಾಗಿದೆ.ಕೃಷಿ ಕ್ಷೇತ್ರದಲ್ಲಿ ಬೆಳೆಗಳು, ಮಣ್ಣು, ನೀರು , ಪೋಷಕಾಂಶಗಳ ಕುರಿತು ಸಲಹೆ ಸೂಚನೆ ನೀಡುವುದು ಈ ಪರಿಷತ್‌ನ ಕಾರ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಗತಿಪರ ರೈತ ಹೇಮರಡ್ಡಿ ಮೇಟಿ ಅವರು ಬಸರಕೋಡದಲ್ಲಿ 36 ಎಕರೆ ಪ್ರದೇಶದಲ್ಲಿ ದ್ರಾಕ್ಷಿ, 32 ಎಕರೆ ಪ್ರದೇಶದಲ್ಲಿ ಪೇರು, 20ಎಕರೆ ಪ್ರದೇಶದಲ್ಲಿ ಬಾಳೆ, 22 ಎಕರೆ ಪ್ರದೇಶದಲ್ಲಿ ನುಗ್ಗೆ, 10 ಎಕರೆ ಪ್ರದೇಶದಲ್ಲಿ ಮಾವು, 50-60 ಗೀರ್ ತಳಿಯ ಆಕಳುಗಳನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ