ಧಾರವಾಡ ಕೃಷಿ ವಿವಿ ನೇಮಕ: ಕೃಷಿ ಸಂಶೋಧನಾ ಪರಿಷತ್‌ಗೆ ಹೇಮರೆಡ್ಡಿ ಮೇಟಿ ನಾಮನಿರ್ದೇಶನ

ಧಾರವಾಡ ಕೃಷಿ ವಿವಿ ನೇಮಕ: ಕೃಷಿ ಸಂಶೋಧನಾ ಪರಿಷತ್‌ಗೆ ಹೇಮರೆಡ್ಡಿ ಮೇಟಿ ನಾಮನಿರ್ದೇಶನ

ಮುದ್ದೇಬಿಹಾಳ : ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಹಾಗೂ ಹೊಸ ತಳಿಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಸಂಶೋಧನಾ ಪರಿಷತ್‌ನ ನಾಮನಿರ್ದೇಶಿತ ಸದಸ್ಯರಾಗಿ ಮುದ್ದೇಬಿಹಾಳ ತಾಲ್ಲೂಕು ಬಸರಕೋಡದ ಪ್ರಗತಿಪರ ರೈತ, ಪಿ.ಕೆ.ಪಿಎಸ್ ಅಧ್ಯಕ್ಷರಾದ ಹೇಮರೆಡ್ಡಿ ಬ.ಮೇಟಿ ನೇಮಕಗೊಳಿಸಿ ಧಾರವಾಡ ಯುಎಎಸ್‌ನ ರಜಿಸ್ಟಾçರ್ ಜಯಲಕ್ಷಿö್ಮÃ ಆದೇಶಿಸಿದ್ದಾರೆ.

ಈಚೇಗೆ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ್ ಅವರು ಬಸರಕೋಡ ಭಾಗಕ್ಕೆ ಆಗಮಿಸಿದ ಸಮಯದಲ್ಲಿ ಮೇಟಿ ಅವರು ಕೈಗೊಂಡಿರುವ ಕೃಷಿ ಕ್ಷೇತ್ರದಲ್ಲಿನ ಸಾಧನೆಯ ಬಗ್ಗೆ ತಿಳಿದುಕೊಂಡಿದ್ದರು.ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಎರಡು ವರ್ಷಗಳ ಅವಧಿಗೆ ನೇಮಿಸಲಾಗಿದೆ. ಈ ಕೃಷಿ ಪರಿಷತ್‌ನಲ್ಲಿ ಬೆಂಗಳೂರು, ಧಾರವಾಡ, ವಿಜಯಪುರ ಕೃಷಿ ವಿಶ್ವವಿದ್ಯಾಲಯದ ಸುಮಾರು 45ಕ್ಕೂ ಹೆಚ್ಚು ಅಧಿಕಾರಿಗಳು,ವಿಜ್ಞಾನಿಗಳು, ಸಂಶೋಧಕರು ಇದ್ದಾರೆ.ರಾಜ್ಯದ ಇಬ್ಬರು ಪ್ರಗತಿಪರ ರೈತರಲ್ಲಿ ಮೇಟಿ ಒಬ್ಬರೂ ಇರುವುದು ವಿಶೇಷವಾಗಿದೆ.ಕೃಷಿ ಕ್ಷೇತ್ರದಲ್ಲಿ ಬೆಳೆಗಳು, ಮಣ್ಣು, ನೀರು , ಪೋಷಕಾಂಶಗಳ ಕುರಿತು ಸಲಹೆ ಸೂಚನೆ ನೀಡುವುದು ಈ ಪರಿಷತ್‌ನ ಕಾರ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಗತಿಪರ ರೈತ ಹೇಮರಡ್ಡಿ ಮೇಟಿ ಅವರು ಬಸರಕೋಡದಲ್ಲಿ 36 ಎಕರೆ ಪ್ರದೇಶದಲ್ಲಿ ದ್ರಾಕ್ಷಿ, 32 ಎಕರೆ ಪ್ರದೇಶದಲ್ಲಿ ಪೇರು, 20ಎಕರೆ ಪ್ರದೇಶದಲ್ಲಿ ಬಾಳೆ, 22 ಎಕರೆ ಪ್ರದೇಶದಲ್ಲಿ ನುಗ್ಗೆ, 10 ಎಕರೆ ಪ್ರದೇಶದಲ್ಲಿ ಮಾವು, 50-60 ಗೀರ್ ತಳಿಯ ಆಕಳುಗಳನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿದ್ದಾರೆ.

Latest News

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಬೆಂಗಳೂರು: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ‌ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ‌ ಸಂಗಾತಿ ಹಾಗೂ ಹೊಸ ಜೀವನದ ಕನಸಿನೊಂದಿಗೆ ಕಾರನ್ನೇರಿ ಪಯಣ ಬೆಳೆಸಿದ್ದಳು. ವಿಧಿಯ ಮುಂದೆ, ಅಪಘಾತದಲ್ಲಿ ಕನಸು ನುಚ್ಚು ನೂರಾಗಿದೆ. ಎರಡು ದಿನಗಳ ಹಿಂದೆ ಸಾಗರ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ