Murder Case Image of murder symbol

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೋಟಿ ಗ್ರಾಮದ ರೈತರ ಜಮೀನಿನಲ್ಲಿ ಅಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧನನ್ನು ಬುಧವಾರ ಕೊಲೆ (Murder) ಮಾಡಲಾಗಿದೆ.

ಹೊಸಕೋಟೆ ಗ್ರಾಮದ ಪ್ರತಿಷ್ಠಿತ ಕುಟುಂಬದ ಹಿರಿಯ ಬಸನಗೌಡ ಪಾಟೀಲ(75)ಕೊಲೆ ಆಗಿರುವ ವೃದ್ಧ. ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ವಾಲಿಕಾರ, ಲಕ್ಷ್ಮಣ ವಾಲಿಕಾರ ಹಾಗೂ ಬಾಳಪ್ಪ ವಾಲಿಕಾರ ಎನ್ನುವ ಬಸನಗೌಡ ಪಾಟೀಲ ಮೂವರು ಸಹೋದರರನ್ನು ಕೆರೂರ ಪೊಲೀಸರು ಬಂಧಿಸಿದ್ದಾರೆ.

ಏನಿದು ಆಸ್ತಿ ವಿವಾದ?

ಮೃತ ಬಸನಗೌಡ ಪಾಟೀಲ ಅವರ ಹಿರಿಯರಿಂದ ಬಂಧಿತ ಆರೋಪಿಗಳ ಹಿರಿಯರು 1977ರಲ್ಲಿ 14 ಎಕರೆ ಜಮೀನು ಖರೀದಿ ಮಾಡಿದ್ದರಂತೆ. ಮಾಲೀಕತ್ವ ಮಾತ್ರ ಖರೀದಿ ಮಾಡಿದವರ ಹೆಸರಿಗೆ ವರ್ಗಾವಣೆ ಆಗಿರಲಿಲ್ಲ. ಆರ್‌ಟಿಸಿಯಲ್ಲಿ ಕೊಲೆಯಾಗಿರುವ ಬಸನಗೌಡ ಅವರ ಸಹೋದರಿ ಹೆಸರು ಇದೆ. ಅವರು ವಿದೇಶದಲ್ಲಿ ಇದ್ದು, ಬಹಳ ದಿನಗಳಿಂದ ಇಲ್ಲಿಗೆ ಬಂದಿಲ್ಲ ಎನ್ನಲಾಗುತ್ತಿದೆ.

ಆದರೆ, ಜಮೀನಿನಲ್ಲಿ ಕೊಲೆ ಆರೋಪಿಗಳು ಸಾಗುವಳಿ ಮಾಡುತ್ತ ಬಂದಿದ್ದರು. ಹತ್ತಿರದಲ್ಲಿ ಬಸನಗೌಡ ಪಾಟೀಲ ಅವರಿಗೆ ಸೇರಿದ ಜಮೀನು ಇದೆ. ತಮ್ಮ ಹಿರಿಯರು ಖರೀದಿ ಮಾಡಿರುವ ಜಮೀನು ಮಾಲೀಕತ್ವ ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಅವರನ್ನು ಕೇಳುತ್ತಿದ್ದರು. ಸಹೋದರಿ ವಿದೇಶದಿಂದ ಬಂದ ಮೇಲೆ ಮಾಡಿಸಿಕೊಡುವುದಾಗಿ ಹೇಳುತ್ತಲೇ ಬಂದಿದ್ದರು. ಅದು ಈವರೆಗೂ ಆಗಿರಲಿಲ್ಲ.

ಸೋಮವಾರ ಮೂವರು ಸಹೋದರರು ಹೊಲದಲ್ಲಿ ಇದ್ದಾಗ ಅವರ ಪಕ್ಕದ ಜಮೀನಿಗೆ ಬಸನಗೌಡ ಪಾಟೀಲ ಬಂದಿದ್ದಾರೆ. ಅವರನ್ನು ನೋಡಿ, ಜಮೀನು ತಮ್ಮ ಹೆಸರಿಗೆ ಯಾವಾಗ ಮಾಡಿಸಿಕೊಡುತ್ತೀರಿ. ಬರೀ ಹೇಳುವುದೇ ಆಯಿತು ಎಂದಿದ್ದಾರೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿದೆ. ಅದು ಕೊನೆಗೆ ವಿಕೋಪಕ್ಕೆ ತಿರುಗಿ ಮೂವರು ಸಹೋದರರು ಸೇರಿ ವೃದ್ಧನಿಗೆ ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ಮುಂದುವರಿದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಂಧಿತ ಆರೋಪಿಗಳು ಕಾಡರಕೊಪ್ಪ ಗ್ರಾಮದವರಾಗಿವು ಬಸನಗೌಡ ಅವರು ಹೊಸಕೋಟೆ ಗ್ರಾಮದವರು.

ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಹೊಸಕೋಟೆ ವ್ಯಾಪ್ತಿಯ ಜಮೀನಿನಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 1977ರಲ್ಲಿ ನಡೆದಿದ್ದ ಜಮೀನು ಖರೀದಿ ಬಳಿಕ ಮಾಲೀಕತ್ವ ಈ ವರೆಗೂ ಬದಲಾಗಿರಲಿಲ್ಲ. ಅದನ್ನು ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಹೇಳಿದ್ದು, ಬುಧವಾರ ಇದೇ ವಿಚಾರವಾಗಿ ಜಗಳ ನಡೆದು ಕೊಲೆ ಮಾಡಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ.

Latest News

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದರ ಜೊತೆಗೆ