Murder Case Image of murder symbol

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೋಟಿ ಗ್ರಾಮದ ರೈತರ ಜಮೀನಿನಲ್ಲಿ ಅಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧನನ್ನು ಬುಧವಾರ ಕೊಲೆ (Murder) ಮಾಡಲಾಗಿದೆ.

ಹೊಸಕೋಟೆ ಗ್ರಾಮದ ಪ್ರತಿಷ್ಠಿತ ಕುಟುಂಬದ ಹಿರಿಯ ಬಸನಗೌಡ ಪಾಟೀಲ(75)ಕೊಲೆ ಆಗಿರುವ ವೃದ್ಧ. ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ವಾಲಿಕಾರ, ಲಕ್ಷ್ಮಣ ವಾಲಿಕಾರ ಹಾಗೂ ಬಾಳಪ್ಪ ವಾಲಿಕಾರ ಎನ್ನುವ ಬಸನಗೌಡ ಪಾಟೀಲ ಮೂವರು ಸಹೋದರರನ್ನು ಕೆರೂರ ಪೊಲೀಸರು ಬಂಧಿಸಿದ್ದಾರೆ.

ಏನಿದು ಆಸ್ತಿ ವಿವಾದ?

ಮೃತ ಬಸನಗೌಡ ಪಾಟೀಲ ಅವರ ಹಿರಿಯರಿಂದ ಬಂಧಿತ ಆರೋಪಿಗಳ ಹಿರಿಯರು 1977ರಲ್ಲಿ 14 ಎಕರೆ ಜಮೀನು ಖರೀದಿ ಮಾಡಿದ್ದರಂತೆ. ಮಾಲೀಕತ್ವ ಮಾತ್ರ ಖರೀದಿ ಮಾಡಿದವರ ಹೆಸರಿಗೆ ವರ್ಗಾವಣೆ ಆಗಿರಲಿಲ್ಲ. ಆರ್‌ಟಿಸಿಯಲ್ಲಿ ಕೊಲೆಯಾಗಿರುವ ಬಸನಗೌಡ ಅವರ ಸಹೋದರಿ ಹೆಸರು ಇದೆ. ಅವರು ವಿದೇಶದಲ್ಲಿ ಇದ್ದು, ಬಹಳ ದಿನಗಳಿಂದ ಇಲ್ಲಿಗೆ ಬಂದಿಲ್ಲ ಎನ್ನಲಾಗುತ್ತಿದೆ.

ಆದರೆ, ಜಮೀನಿನಲ್ಲಿ ಕೊಲೆ ಆರೋಪಿಗಳು ಸಾಗುವಳಿ ಮಾಡುತ್ತ ಬಂದಿದ್ದರು. ಹತ್ತಿರದಲ್ಲಿ ಬಸನಗೌಡ ಪಾಟೀಲ ಅವರಿಗೆ ಸೇರಿದ ಜಮೀನು ಇದೆ. ತಮ್ಮ ಹಿರಿಯರು ಖರೀದಿ ಮಾಡಿರುವ ಜಮೀನು ಮಾಲೀಕತ್ವ ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಅವರನ್ನು ಕೇಳುತ್ತಿದ್ದರು. ಸಹೋದರಿ ವಿದೇಶದಿಂದ ಬಂದ ಮೇಲೆ ಮಾಡಿಸಿಕೊಡುವುದಾಗಿ ಹೇಳುತ್ತಲೇ ಬಂದಿದ್ದರು. ಅದು ಈವರೆಗೂ ಆಗಿರಲಿಲ್ಲ.

ಸೋಮವಾರ ಮೂವರು ಸಹೋದರರು ಹೊಲದಲ್ಲಿ ಇದ್ದಾಗ ಅವರ ಪಕ್ಕದ ಜಮೀನಿಗೆ ಬಸನಗೌಡ ಪಾಟೀಲ ಬಂದಿದ್ದಾರೆ. ಅವರನ್ನು ನೋಡಿ, ಜಮೀನು ತಮ್ಮ ಹೆಸರಿಗೆ ಯಾವಾಗ ಮಾಡಿಸಿಕೊಡುತ್ತೀರಿ. ಬರೀ ಹೇಳುವುದೇ ಆಯಿತು ಎಂದಿದ್ದಾರೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿದೆ. ಅದು ಕೊನೆಗೆ ವಿಕೋಪಕ್ಕೆ ತಿರುಗಿ ಮೂವರು ಸಹೋದರರು ಸೇರಿ ವೃದ್ಧನಿಗೆ ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ಮುಂದುವರಿದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಂಧಿತ ಆರೋಪಿಗಳು ಕಾಡರಕೊಪ್ಪ ಗ್ರಾಮದವರಾಗಿವು ಬಸನಗೌಡ ಅವರು ಹೊಸಕೋಟೆ ಗ್ರಾಮದವರು.

ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಹೊಸಕೋಟೆ ವ್ಯಾಪ್ತಿಯ ಜಮೀನಿನಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 1977ರಲ್ಲಿ ನಡೆದಿದ್ದ ಜಮೀನು ಖರೀದಿ ಬಳಿಕ ಮಾಲೀಕತ್ವ ಈ ವರೆಗೂ ಬದಲಾಗಿರಲಿಲ್ಲ. ಅದನ್ನು ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಹೇಳಿದ್ದು, ಬುಧವಾರ ಇದೇ ವಿಚಾರವಾಗಿ ಜಗಳ ನಡೆದು ಕೊಲೆ ಮಾಡಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ