Murder Case Image of murder symbol

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೋಟಿ ಗ್ರಾಮದ ರೈತರ ಜಮೀನಿನಲ್ಲಿ ಅಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧನನ್ನು ಬುಧವಾರ ಕೊಲೆ (Murder) ಮಾಡಲಾಗಿದೆ.

ಹೊಸಕೋಟೆ ಗ್ರಾಮದ ಪ್ರತಿಷ್ಠಿತ ಕುಟುಂಬದ ಹಿರಿಯ ಬಸನಗೌಡ ಪಾಟೀಲ(75)ಕೊಲೆ ಆಗಿರುವ ವೃದ್ಧ. ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ವಾಲಿಕಾರ, ಲಕ್ಷ್ಮಣ ವಾಲಿಕಾರ ಹಾಗೂ ಬಾಳಪ್ಪ ವಾಲಿಕಾರ ಎನ್ನುವ ಬಸನಗೌಡ ಪಾಟೀಲ ಮೂವರು ಸಹೋದರರನ್ನು ಕೆರೂರ ಪೊಲೀಸರು ಬಂಧಿಸಿದ್ದಾರೆ.

ಏನಿದು ಆಸ್ತಿ ವಿವಾದ?

ಮೃತ ಬಸನಗೌಡ ಪಾಟೀಲ ಅವರ ಹಿರಿಯರಿಂದ ಬಂಧಿತ ಆರೋಪಿಗಳ ಹಿರಿಯರು 1977ರಲ್ಲಿ 14 ಎಕರೆ ಜಮೀನು ಖರೀದಿ ಮಾಡಿದ್ದರಂತೆ. ಮಾಲೀಕತ್ವ ಮಾತ್ರ ಖರೀದಿ ಮಾಡಿದವರ ಹೆಸರಿಗೆ ವರ್ಗಾವಣೆ ಆಗಿರಲಿಲ್ಲ. ಆರ್‌ಟಿಸಿಯಲ್ಲಿ ಕೊಲೆಯಾಗಿರುವ ಬಸನಗೌಡ ಅವರ ಸಹೋದರಿ ಹೆಸರು ಇದೆ. ಅವರು ವಿದೇಶದಲ್ಲಿ ಇದ್ದು, ಬಹಳ ದಿನಗಳಿಂದ ಇಲ್ಲಿಗೆ ಬಂದಿಲ್ಲ ಎನ್ನಲಾಗುತ್ತಿದೆ.

ಆದರೆ, ಜಮೀನಿನಲ್ಲಿ ಕೊಲೆ ಆರೋಪಿಗಳು ಸಾಗುವಳಿ ಮಾಡುತ್ತ ಬಂದಿದ್ದರು. ಹತ್ತಿರದಲ್ಲಿ ಬಸನಗೌಡ ಪಾಟೀಲ ಅವರಿಗೆ ಸೇರಿದ ಜಮೀನು ಇದೆ. ತಮ್ಮ ಹಿರಿಯರು ಖರೀದಿ ಮಾಡಿರುವ ಜಮೀನು ಮಾಲೀಕತ್ವ ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಅವರನ್ನು ಕೇಳುತ್ತಿದ್ದರು. ಸಹೋದರಿ ವಿದೇಶದಿಂದ ಬಂದ ಮೇಲೆ ಮಾಡಿಸಿಕೊಡುವುದಾಗಿ ಹೇಳುತ್ತಲೇ ಬಂದಿದ್ದರು. ಅದು ಈವರೆಗೂ ಆಗಿರಲಿಲ್ಲ.

ಸೋಮವಾರ ಮೂವರು ಸಹೋದರರು ಹೊಲದಲ್ಲಿ ಇದ್ದಾಗ ಅವರ ಪಕ್ಕದ ಜಮೀನಿಗೆ ಬಸನಗೌಡ ಪಾಟೀಲ ಬಂದಿದ್ದಾರೆ. ಅವರನ್ನು ನೋಡಿ, ಜಮೀನು ತಮ್ಮ ಹೆಸರಿಗೆ ಯಾವಾಗ ಮಾಡಿಸಿಕೊಡುತ್ತೀರಿ. ಬರೀ ಹೇಳುವುದೇ ಆಯಿತು ಎಂದಿದ್ದಾರೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿದೆ. ಅದು ಕೊನೆಗೆ ವಿಕೋಪಕ್ಕೆ ತಿರುಗಿ ಮೂವರು ಸಹೋದರರು ಸೇರಿ ವೃದ್ಧನಿಗೆ ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ಮುಂದುವರಿದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಂಧಿತ ಆರೋಪಿಗಳು ಕಾಡರಕೊಪ್ಪ ಗ್ರಾಮದವರಾಗಿವು ಬಸನಗೌಡ ಅವರು ಹೊಸಕೋಟೆ ಗ್ರಾಮದವರು.

ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಹೊಸಕೋಟೆ ವ್ಯಾಪ್ತಿಯ ಜಮೀನಿನಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 1977ರಲ್ಲಿ ನಡೆದಿದ್ದ ಜಮೀನು ಖರೀದಿ ಬಳಿಕ ಮಾಲೀಕತ್ವ ಈ ವರೆಗೂ ಬದಲಾಗಿರಲಿಲ್ಲ. ಅದನ್ನು ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಹೇಳಿದ್ದು, ಬುಧವಾರ ಇದೇ ವಿಚಾರವಾಗಿ ಜಗಳ ನಡೆದು ಕೊಲೆ ಮಾಡಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ