ಶಿಸ್ತು ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ: ಸಿಡಿಪಿಒ ಅನುಚಿತ ನಡೆಗೆ ಮಹಿಳೆಯರ ಆಕ್ರೋಶ

ಶಿಸ್ತು ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ: ಸಿಡಿಪಿಒ ಅನುಚಿತ ನಡೆಗೆ ಮಹಿಳೆಯರ ಆಕ್ರೋಶ

ಮುದ್ದೇಬಿಹಾಳ : ಸಾರ್ವಜನಿಕವಾಗಿ ಮಾಹಿತಿ ಕೇಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಹೋದರೆ ಅಲ್ಲಿರುವ ಅಧಿಕಾರಿ ಶಿವಮೂರ್ತಿ ಕುಂಬಾರ ಮಹಿಳೆಯರೊಂದಿಗೆ ಅನುಚಿತವಾಗಿ ನಡೆದುಕೊಳ್ಳುತ್ತಿದ್ದು ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಗುರುವಾರ ಪಟ್ಟಣದಲ್ಲಿ ಉತ್ತರ ಕರ್ನಾಟಕ ರೈತ ಹಾಗೂ ಕಬ್ಬು ಬೆಳೆಗಾರರ ಸಂಘ ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊAಡ ಪ್ರತಿಭಟನೆ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿಗೆ ಆಗಮಿಸಿತು.ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟಗಾರ್ತಿ ಮುನ್ನಿ ಮುಲ್ಲಾ, ಉತ್ತರ ಕರ್ನಾಟಕ ರೈತ ಹಾಗೂ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷೆ ರಜಿಯಾ ನದಾಫ , ಅವರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗರ್ಭಿಣಿಯರಿಗೆ, ಬಾಣಂತಿಯರಿಗೆ ಮಕ್ಕಳಿಗೆ ಕೊಡುವ ಸೌಲಭ್ಯಗಳ ಮಾಹಿತಿ ಕೇಳಲು ಹೋದರೆ ಕಚೇರಿಯಿಂದ ಹೊರಗೆ ಹಾಕುವಂತೆ ತಮ್ಮ ಕೆಲಸಗಾರರಿಗೆ ಹೇಳುತ್ತಾರೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ ಸರಿಯಾಗಿ ಮೊಟ್ಟೆ ಕೊಡುತ್ತಿಲ್ಲ ಎಂದು ವಿಚಾರಿಸಲು ಹೋದರೆ ಅವಾಚ್ಯ ಶಬ್ದಗಳಿಂದ ನಿಂದಿಸುವುದಲ್ಲದೇ ನಮ್ಮ ಇಲಾಖೆಯಲ್ಲಿ ನಾನು ಮಾಡಿದ್ದೇ ಕಾನೂನು ಎಂದು ಸರ್ವಾಧಿಕಾರದಿಂದ ಮಾತನಾಡುತ್ತಾರೆ.ಇಂತಹ ಅಧಿಕಾರಿಯನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೇ ಮಹಿಳಾ ಪತ್ರಕರ್ತೆಯೊಂದಿಗೂ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ದೂರಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮನವಿ ಪತ್ರ ಸ್ವೀಕರಿಸಿದರು.ವಾಲ್ಮೀಕಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಭೀಮಬಾಯಿ ಹತ್ತೂರ, ದಲಿತ ಮುಖಂಡ ಸಂಗಪ್ಪ ಚಲವಾದಿ,ರೇಣುಕಾ ಚಲವಾದಿ, ಸುಮಿತ್ರಾ ತಳವಾರ,ಶಾಮಲಾ ಚಲವಾದಿ,ಸುಧಾ ಮುರಾಳ,ಕಮಲವ್ವ ತಳವಾರ,ರೇಣುಕಾ ಕುಂಟೋಜಿ,ಬಸವ್ವ ಮಾದರ,ಅರುಣ ದಾಸರ,ಕೃಷ್ಣ ದಾಸರ, ಪ್ರಕಾಶ ಛಲವಾದಿ ಮೊದಲಾದವರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ