ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಮುದ್ದೇಬಿಹಾಳ : ಟ್ಯಾಲೆಂಟ್ ಸರ್ಚ್ ಎಕ್ಸಾಂ ಪರೀಕ್ಷೆಯಫಲಿತಾಂಶ ಹಲವು ವಿಶೇಷ ಪ್ರತಿಭೆಗಳನ್ನು ಹೊರತಂದಿದೆ.ಅದರಲ್ಲೂ ಕಡುಬಡತನದಲ್ಲಿದ್ದ ವಿದ್ಯಾರ್ಥಿಗೂ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡುವ ಮೂಲಕ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ.

ವಂದಾಲದ ಕಾರ್ತಿಕ ಬೆನ್ನೂರ ಎಂಬ ವಿದ್ಯಾರ್ಥಿ ಮೊದಲ ಟಾಪ್ 20ರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದ ಈತ ತಂದೆಯನ್ನು ಕಳೆದುಕೊಂಡಿದ್ದು ಮುಂದಿನ ಶಿಕ್ಷಣವನ್ನು ಓದಲು ಬಡತನ ಅಡ್ಡಿಯಾಗಿತ್ತು. ಆತನಿಗೆ ಈ ಪರೀಕ್ಷೆಯಲ್ಲಿ 21ನೇ ಸ್ಥಾನ ಬಂದಿತ್ತು.ಇದನ್ನು ಗಮನಿಸಿದ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಹಾಗೂ ಮಾರ್ಗದರ್ಶಕರಾದ ನಾಗರಾಜಗೌಡ ಬಿರಾಜದಾರ ಅವರು, ವಿದ್ಯಾರ್ಥಿ ಕಾರ್ತಿಕನ ತಾಯಿ ಹೊರಗುತ್ತಿಗೆಯಲ್ಲಿ ಅಲ್ಪವೇತನದಲ್ಲಿ ಕೆಲಸ ಮಾಡುತ್ತಿದ್ದು ಆತನಿಗೆ ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ತೀರ್ಮಾನ ಪ್ರಕಟಿಸಿದರಲ್ಲದೇ ಕಾರ್ತಿಕ್‌ನ ಎರಡು ವರ್ಷದ ಶಿಕ್ಷಣ ಉಚಿತವಾಗಿ ನೀಡುವುದಾಗಿ ಪ್ರಕಟಿಸಿದ್ದು ಸಂಸ್ಥೆಯ ಸಾಮಾಜಿಕ ಕಳಕಳಿಗೆ ಮಾದರಿಯಾಯಿತು.

ಆಯ್ಕೆಯಾದ ವಿದ್ಯಾರ್ಥಿಗಳಿಂದ ಆನಂದ ಭಾಷ್ಪ : ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ಮೊದಲ 20 ಸ್ಥಾನಗಳಲ್ಲಿ ಆಯ್ಕೆಯಾದ ಕೆಲವು ವಿದ್ಯಾರ್ಥಿಗಳು ಖುಷಿ ತಡೆಯದೇ ಆನಂದ ಭಾಷ್ಪ ಸುರಿಸಿದರು. ಲಿಂಗಸೂರಿನ ವಿದ್ಯಾರ್ಥಿನಿ ನಿಖಿತಾ ಮಾತನಾಡಿ, ಅಪ್ಪ ವಕೀಲಿ ವೃತ್ತಿ ಮಾಡುತ್ತಾರೆ.ಆದರೆ ಅವರ ಆಸೆಯಂತೆ ನಾನು ವೈದ್ಯಳಾಗುತ್ತೇನೆ.ಆಕ್ಸಫರ್ಡ್ ಸಂಸ್ಥೆಯಲ್ಲಿ ಓದುವುದಕ್ಕೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಮಾಡಿಕೊಳ್ಳುತ್ತೇನೆ ಎಂದರು.ಟಾಪರ್‌ಗಳಾದ ಶಹಾಪೂರದ ಅಮನ್, ಕಾರ್ತಿಕ್ ಬೆನ್ನೂರ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಆಯ್ಕೆಯಾದ ಹಲವು ಬಡ ವಿದ್ಯಾರ್ಥಿಗಳ ಕಣ್ಣಲ್ಲಿ ನೀರು ಜೀನುಗಿತು.ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯಿAದ ಟ್ಯಾಲೆಂಟ್ ಅವಾರ್ಡ್ ಸ್ಪರ್ಧೆಯಲ್ಲಿ ಸಾರ್ವತ್ರಿಕವಾಗಿ ಕೊಟ್ಟ ವಿದ್ಯಾರ್ಥಿವೇತನದ ಮಾತು ಸಂಸ್ಥೆಯವರು ಉಳಿಸಿಕೊಂಡು ಪಾಲಕರ ನಂಬಿಕೆಗೆ ಪಾತ್ರರಾದರು ಎಂಬ ಮಾತುಗಳು ಕೇಳಿ ಬಂದವು.

ವರದಿ ಮಾಡಿದ್ದು ನಿಮ್ಮ ಡಿಸಿಜಿ ನ್ಯೂಸ್ :
ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ನಡೆಸಿದ್ದ ಸಂಸ್ಥೆಯವರು ಅಂದು 3550 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದರೂ ಬಹುಮಾನಕ್ಕೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ.ಇದನ್ನು ನಿಮ್ಮ ಡಿಸಿಜಿ ನ್ಯೂಸ್ ವರದಿ ಮಾಡಿತ್ತು.ಅಲ್ಲದೇ ಸಾರ್ವತ್ರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ಕಿವಿಮಾತನ್ನು ಸಂಸ್ಥೆಯವರ ಗಮನಕ್ಕೆ ತಂದಿತ್ತು.ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಅವರು ಪ್ರತ್ಯೇಕ ಸಮಾರಂಭವ,ಸ್ಪರ್ಧೆ ಏರ್ಪಡಿಸಿ ಯಾರಿಗೂ ಅನ್ಯಾಯವಾಗದಂತೆ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಕೈಗೊಂಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ