ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಮುದ್ದೇಬಿಹಾಳ : ಟ್ಯಾಲೆಂಟ್ ಸರ್ಚ್ ಎಕ್ಸಾಂ ಪರೀಕ್ಷೆಯಫಲಿತಾಂಶ ಹಲವು ವಿಶೇಷ ಪ್ರತಿಭೆಗಳನ್ನು ಹೊರತಂದಿದೆ.ಅದರಲ್ಲೂ ಕಡುಬಡತನದಲ್ಲಿದ್ದ ವಿದ್ಯಾರ್ಥಿಗೂ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡುವ ಮೂಲಕ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ.

ವಂದಾಲದ ಕಾರ್ತಿಕ ಬೆನ್ನೂರ ಎಂಬ ವಿದ್ಯಾರ್ಥಿ ಮೊದಲ ಟಾಪ್ 20ರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದ ಈತ ತಂದೆಯನ್ನು ಕಳೆದುಕೊಂಡಿದ್ದು ಮುಂದಿನ ಶಿಕ್ಷಣವನ್ನು ಓದಲು ಬಡತನ ಅಡ್ಡಿಯಾಗಿತ್ತು. ಆತನಿಗೆ ಈ ಪರೀಕ್ಷೆಯಲ್ಲಿ 21ನೇ ಸ್ಥಾನ ಬಂದಿತ್ತು.ಇದನ್ನು ಗಮನಿಸಿದ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಹಾಗೂ ಮಾರ್ಗದರ್ಶಕರಾದ ನಾಗರಾಜಗೌಡ ಬಿರಾಜದಾರ ಅವರು, ವಿದ್ಯಾರ್ಥಿ ಕಾರ್ತಿಕನ ತಾಯಿ ಹೊರಗುತ್ತಿಗೆಯಲ್ಲಿ ಅಲ್ಪವೇತನದಲ್ಲಿ ಕೆಲಸ ಮಾಡುತ್ತಿದ್ದು ಆತನಿಗೆ ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ತೀರ್ಮಾನ ಪ್ರಕಟಿಸಿದರಲ್ಲದೇ ಕಾರ್ತಿಕ್‌ನ ಎರಡು ವರ್ಷದ ಶಿಕ್ಷಣ ಉಚಿತವಾಗಿ ನೀಡುವುದಾಗಿ ಪ್ರಕಟಿಸಿದ್ದು ಸಂಸ್ಥೆಯ ಸಾಮಾಜಿಕ ಕಳಕಳಿಗೆ ಮಾದರಿಯಾಯಿತು.

ಆಯ್ಕೆಯಾದ ವಿದ್ಯಾರ್ಥಿಗಳಿಂದ ಆನಂದ ಭಾಷ್ಪ : ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ಮೊದಲ 20 ಸ್ಥಾನಗಳಲ್ಲಿ ಆಯ್ಕೆಯಾದ ಕೆಲವು ವಿದ್ಯಾರ್ಥಿಗಳು ಖುಷಿ ತಡೆಯದೇ ಆನಂದ ಭಾಷ್ಪ ಸುರಿಸಿದರು. ಲಿಂಗಸೂರಿನ ವಿದ್ಯಾರ್ಥಿನಿ ನಿಖಿತಾ ಮಾತನಾಡಿ, ಅಪ್ಪ ವಕೀಲಿ ವೃತ್ತಿ ಮಾಡುತ್ತಾರೆ.ಆದರೆ ಅವರ ಆಸೆಯಂತೆ ನಾನು ವೈದ್ಯಳಾಗುತ್ತೇನೆ.ಆಕ್ಸಫರ್ಡ್ ಸಂಸ್ಥೆಯಲ್ಲಿ ಓದುವುದಕ್ಕೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಮಾಡಿಕೊಳ್ಳುತ್ತೇನೆ ಎಂದರು.ಟಾಪರ್‌ಗಳಾದ ಶಹಾಪೂರದ ಅಮನ್, ಕಾರ್ತಿಕ್ ಬೆನ್ನೂರ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಆಯ್ಕೆಯಾದ ಹಲವು ಬಡ ವಿದ್ಯಾರ್ಥಿಗಳ ಕಣ್ಣಲ್ಲಿ ನೀರು ಜೀನುಗಿತು.ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯಿAದ ಟ್ಯಾಲೆಂಟ್ ಅವಾರ್ಡ್ ಸ್ಪರ್ಧೆಯಲ್ಲಿ ಸಾರ್ವತ್ರಿಕವಾಗಿ ಕೊಟ್ಟ ವಿದ್ಯಾರ್ಥಿವೇತನದ ಮಾತು ಸಂಸ್ಥೆಯವರು ಉಳಿಸಿಕೊಂಡು ಪಾಲಕರ ನಂಬಿಕೆಗೆ ಪಾತ್ರರಾದರು ಎಂಬ ಮಾತುಗಳು ಕೇಳಿ ಬಂದವು.

ವರದಿ ಮಾಡಿದ್ದು ನಿಮ್ಮ ಡಿಸಿಜಿ ನ್ಯೂಸ್ :
ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ನಡೆಸಿದ್ದ ಸಂಸ್ಥೆಯವರು ಅಂದು 3550 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದರೂ ಬಹುಮಾನಕ್ಕೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ.ಇದನ್ನು ನಿಮ್ಮ ಡಿಸಿಜಿ ನ್ಯೂಸ್ ವರದಿ ಮಾಡಿತ್ತು.ಅಲ್ಲದೇ ಸಾರ್ವತ್ರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ಕಿವಿಮಾತನ್ನು ಸಂಸ್ಥೆಯವರ ಗಮನಕ್ಕೆ ತಂದಿತ್ತು.ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಅವರು ಪ್ರತ್ಯೇಕ ಸಮಾರಂಭವ,ಸ್ಪರ್ಧೆ ಏರ್ಪಡಿಸಿ ಯಾರಿಗೂ ಅನ್ಯಾಯವಾಗದಂತೆ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಕೈಗೊಂಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ