ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಮುದ್ದೇಬಿಹಾಳ : ಟ್ಯಾಲೆಂಟ್ ಸರ್ಚ್ ಎಕ್ಸಾಂ ಪರೀಕ್ಷೆಯಫಲಿತಾಂಶ ಹಲವು ವಿಶೇಷ ಪ್ರತಿಭೆಗಳನ್ನು ಹೊರತಂದಿದೆ.ಅದರಲ್ಲೂ ಕಡುಬಡತನದಲ್ಲಿದ್ದ ವಿದ್ಯಾರ್ಥಿಗೂ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡುವ ಮೂಲಕ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ.

ವಂದಾಲದ ಕಾರ್ತಿಕ ಬೆನ್ನೂರ ಎಂಬ ವಿದ್ಯಾರ್ಥಿ ಮೊದಲ ಟಾಪ್ 20ರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದ ಈತ ತಂದೆಯನ್ನು ಕಳೆದುಕೊಂಡಿದ್ದು ಮುಂದಿನ ಶಿಕ್ಷಣವನ್ನು ಓದಲು ಬಡತನ ಅಡ್ಡಿಯಾಗಿತ್ತು. ಆತನಿಗೆ ಈ ಪರೀಕ್ಷೆಯಲ್ಲಿ 21ನೇ ಸ್ಥಾನ ಬಂದಿತ್ತು.ಇದನ್ನು ಗಮನಿಸಿದ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಹಾಗೂ ಮಾರ್ಗದರ್ಶಕರಾದ ನಾಗರಾಜಗೌಡ ಬಿರಾಜದಾರ ಅವರು, ವಿದ್ಯಾರ್ಥಿ ಕಾರ್ತಿಕನ ತಾಯಿ ಹೊರಗುತ್ತಿಗೆಯಲ್ಲಿ ಅಲ್ಪವೇತನದಲ್ಲಿ ಕೆಲಸ ಮಾಡುತ್ತಿದ್ದು ಆತನಿಗೆ ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ತೀರ್ಮಾನ ಪ್ರಕಟಿಸಿದರಲ್ಲದೇ ಕಾರ್ತಿಕ್‌ನ ಎರಡು ವರ್ಷದ ಶಿಕ್ಷಣ ಉಚಿತವಾಗಿ ನೀಡುವುದಾಗಿ ಪ್ರಕಟಿಸಿದ್ದು ಸಂಸ್ಥೆಯ ಸಾಮಾಜಿಕ ಕಳಕಳಿಗೆ ಮಾದರಿಯಾಯಿತು.

ಆಯ್ಕೆಯಾದ ವಿದ್ಯಾರ್ಥಿಗಳಿಂದ ಆನಂದ ಭಾಷ್ಪ : ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ಮೊದಲ 20 ಸ್ಥಾನಗಳಲ್ಲಿ ಆಯ್ಕೆಯಾದ ಕೆಲವು ವಿದ್ಯಾರ್ಥಿಗಳು ಖುಷಿ ತಡೆಯದೇ ಆನಂದ ಭಾಷ್ಪ ಸುರಿಸಿದರು. ಲಿಂಗಸೂರಿನ ವಿದ್ಯಾರ್ಥಿನಿ ನಿಖಿತಾ ಮಾತನಾಡಿ, ಅಪ್ಪ ವಕೀಲಿ ವೃತ್ತಿ ಮಾಡುತ್ತಾರೆ.ಆದರೆ ಅವರ ಆಸೆಯಂತೆ ನಾನು ವೈದ್ಯಳಾಗುತ್ತೇನೆ.ಆಕ್ಸಫರ್ಡ್ ಸಂಸ್ಥೆಯಲ್ಲಿ ಓದುವುದಕ್ಕೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಮಾಡಿಕೊಳ್ಳುತ್ತೇನೆ ಎಂದರು.ಟಾಪರ್‌ಗಳಾದ ಶಹಾಪೂರದ ಅಮನ್, ಕಾರ್ತಿಕ್ ಬೆನ್ನೂರ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಆಯ್ಕೆಯಾದ ಹಲವು ಬಡ ವಿದ್ಯಾರ್ಥಿಗಳ ಕಣ್ಣಲ್ಲಿ ನೀರು ಜೀನುಗಿತು.ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯಿAದ ಟ್ಯಾಲೆಂಟ್ ಅವಾರ್ಡ್ ಸ್ಪರ್ಧೆಯಲ್ಲಿ ಸಾರ್ವತ್ರಿಕವಾಗಿ ಕೊಟ್ಟ ವಿದ್ಯಾರ್ಥಿವೇತನದ ಮಾತು ಸಂಸ್ಥೆಯವರು ಉಳಿಸಿಕೊಂಡು ಪಾಲಕರ ನಂಬಿಕೆಗೆ ಪಾತ್ರರಾದರು ಎಂಬ ಮಾತುಗಳು ಕೇಳಿ ಬಂದವು.

ವರದಿ ಮಾಡಿದ್ದು ನಿಮ್ಮ ಡಿಸಿಜಿ ನ್ಯೂಸ್ :
ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ನಡೆಸಿದ್ದ ಸಂಸ್ಥೆಯವರು ಅಂದು 3550 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದರೂ ಬಹುಮಾನಕ್ಕೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ.ಇದನ್ನು ನಿಮ್ಮ ಡಿಸಿಜಿ ನ್ಯೂಸ್ ವರದಿ ಮಾಡಿತ್ತು.ಅಲ್ಲದೇ ಸಾರ್ವತ್ರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ಕಿವಿಮಾತನ್ನು ಸಂಸ್ಥೆಯವರ ಗಮನಕ್ಕೆ ತಂದಿತ್ತು.ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಅವರು ಪ್ರತ್ಯೇಕ ಸಮಾರಂಭವ,ಸ್ಪರ್ಧೆ ಏರ್ಪಡಿಸಿ ಯಾರಿಗೂ ಅನ್ಯಾಯವಾಗದಂತೆ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಕೈಗೊಂಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ