ಡಿಸಿಜಿ ನ್ಯೂಸ್ ವರದಿ ಪರಿಣಾಮ : OXFORD PATIL’S TALENT SEARCH EXAM; 21 ವಿದ್ಯಾರ್ಥಿಗಳಿಗೆ ಸಂಪೂರ್ಣ ವಸತಿ ಸಮೇತ ಉಚಿತ ಶಿಕ್ಷಣ

ಡಿಸಿಜಿ ನ್ಯೂಸ್ ವರದಿ ಪರಿಣಾಮ : OXFORD PATIL’S TALENT SEARCH EXAM; 21 ವಿದ್ಯಾರ್ಥಿಗಳಿಗೆ ಸಂಪೂರ್ಣ ವಸತಿ ಸಮೇತ ಉಚಿತ ಶಿಕ್ಷಣ

ಮುದ್ದೇಬಿಹಾಳ : ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಿAದ 21 ವಿದ್ಯಾರ್ಥಿಗಳಿಗೆ ಎರಡು ವರ್ಷದ ಸಂಪೂರ್ಣ ಉಚಿತ ಶಿಕ್ಷಣ, 20 ವಿದ್ಯಾರ್ಥಿಗಳಿಗೆ ಎರಡು ವರ್ಷದ ಉಚಿತ ಶಿಕ್ಷಣ,ಇನ್ನುಳಿದ 40 ವಿದ್ಯಾರ್ಥಿಗಳಿಗೆ ಶಿಕ್ಷಣದ ಶುಲ್ಕದಲ್ಲಿ ರಿಯಾಯತಿ ನೀಡಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಹೇಳಿದರು.
ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ರವಿವಾರ ನಡೆದ ಟ್ಯಾಲೆಂಟ್ ಸರ್ಚ್ ಅವಾರ್ಡ್-2025ರ ಅಂತಿಮ ಸುತ್ತಿನ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಲೇಜಿನಲ್ಲಿ ಈಚೇಗೆ ಆಯೋಜಿಸಿದ್ದ ಟ್ಯಾಲೆಂಟ್ ಅವಾರ್ಡ್-2025ರ ಪರೀಕ್ಷೆಯಲ್ಲಿ 3555 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಆದರೆ ಸಂಸ್ಥೆಯಿAದ ಮುಂಚಿತವಾಗಿ ನಿಗದಿ ಪಡಿಸಿದ್ದ ಅಂಕಗಳನ್ನು ಯಾರೊಬ್ಬರೂ ಗಳಿಸದ ಕಾರಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲರ ಸೂಚನೆಯಂತೆ ಅದರಲ್ಲಿಯೇ ಅತೀ ಹೆಚ್ಚು ಅಂಕ ಪಡೆದ 220 ವಿದ್ಯಾರ್ಥಿಗಳನ್ನು ಅಂತಿಮ ಆಯ್ಕೆ ಸುತ್ತಿಗೆ ಪರಿಗಣಿಸಲಾಗಿದ್ದು ಅಂತಿಮವಾಗಿ ಮತ್ತೊಂದು ಪರೀಕ್ಷೆ ನಡೆಸಿದ್ದು ಅದರಲ್ಲಿ ಮೊದಲ 80 ಸ್ಥಾನ ಪಡೆದವರ ಫಲಿತಾಂಶ ಪ್ರಕಟಿಸಿದ್ದೇವೆ ಎಂದು ತಿಳಿಸಿದರು.

ತಾಳಿಕೋಟಿ ಶಿಕ್ಷಕ ಎಸ್.ಎಸ್.ಸಜ್ಜನ,ಪ್ರಮುಖರಾದ ರಾಮನಗೌಡ ಬಿರಾದಾರ,ಕೆ.ಎಸ್.ಕರೇಕಲ್ಲ, ಆಂಗ್ಲಮಾಧ್ಯಮ ಶಾಲೆಯ ಇಸ್ಮಾಯಿಲ್ ಮನಿಯಾರ್, ಮಂಜು ಮಂಕಣಿ, ರಾಜಶೇಖರ ಹಿರೇಮಠ, ರವಿ ನಾಯಕ, ಸಂಗಮೇಶ ಬಡಿಗೇರ, ರೇವಣಸಿದ್ದ ಮುರಾಳ ಮೊದಲಾದವರು ಇದ್ದರು.

ಎರಡು ವರ್ಷದ ಪೂರ್ಣ ವಸತಿ ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು :
ಶಹಾಪೂರ ಆರ್.ಎಂ.ಎಸ್.ಎ ಶಾಲೆಯ ಅಮನ್, ಶಹಾಪೂರದ ದುದುಪುಡಿ ಶಾಲೆ ನಿಸರ್ಗ ಪೊಲೀಸಪಾಟೀಲ್,ಹುಮನಾಬಾದ ಚೆನ್ನಬಸವೇಶ್ವರ ಶಾಲೆಯ ವೈಷ್ಣವಿ ರೆಡ್ಡಿ, ಮುದ್ದೇಬಿಹಾಳ ಬಿ.ಎಸ್ ಸೆಂಟ್ರಲ್ ಶಾಲೆಯ ಮೊಹ್ಮದ ಜಿಹಾಮ್,ಮೈಲೇಶ್ವರ ಬ್ರಿಲಿಯಂಟ್ ಶಾಲೆಯ ಕಾರ್ತಿಕ ಕನಕರೆಡ್ಡಿ,ಹುಮನಾಬಾದ ಚನ್ನಬಸವೇಶ್ವರ ಶಾಲೆಯ ತ್ರಿಷಾ ಕೃಷ್ಣರೆಡ್ಡಿ, ಲಿಂಗಸುಗೂರು ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ನಿಖಿತಾ ವಸ್ತçದ,ಸಿಂದಗಿ ಆರ್.ಎಂ.ಎಸ್.ಎ ಶಾಲೆಯ ಶರಧಿ ಹಿರೇಮಠ, ಬೀಸಲದಿನ್ನಿ ಎಸ್.ಎಸ್.ಪಿ.ಎಸ್ ಶಾಲೆಯ ನವೀನಕುಮಾರ ಗೌಡರ, ಜಮಖಂಡಿ ತುಂಗಳ ಶಾಲೆಯ ಸೌಮ್ಯಾ ಉತ್ನಾಳ, ಕೊರ್ಲಹಳ್ಳಿ ಆರ್,ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ , ವಿಜಯಪುರ ಶ್ರೀರಾಮಕೃಷ್ಣ ಶಾಲೆಯ ಪ್ರೀತಮ ಪತ್ತಾರ, ಯಾದಗಿರ ಜೆಎನ್‌ವಿ ಶಾಲೆಯ ಸಿದ್ದೇಶ್ವರ ಎ.ಟಿ., ಬೀಳಗಿ ವಿವೇಕಾನಂದ ಇಂಟರ್‌ನ್ಯಾಶನಲ್ ಶಾಲೆಯ ಅನನ್ಯಾ ಕೊಕಟನೂರ,ರಕಬವಿ ಪದ್ಮಾವತಿ ಇಂಟರ್‌ನ್ಯಾಶನಲ್ ಸ್ಕೂಲ್‌ನ ಸುಕೃತ ಸಜ್ಜನ, ಆದವೈಭವಿ ಕೆ.ಆರ್.ಸಿ.ಆರ್ ಶಾಲೆ ಶ್ರೇಯಾ ಸೊಮ್ಲೆಪ್ಪ, ಶಹಾಪೂರ ಆರ್.ಎಂ.ಎಸ್.ಎ ಶಾಲೆಯ ಪ್ರವೀಣಕುಮಾರ ದಂಡಪ್ಪ, ಯಾದಗಿರಿಯ ಜೆಎನ್‌ವಿ ಶಾಲೆ ರೇವಣಸಿದ್ದ ಆಲ್ಯಾಳ, ಕೊಲ್ಹಾರ ಜೆಎನ್‌ವಿ ಶಾಲೆಯ ತರುಣ ಕೊಲ್ಹಾರ,ರಾಜಲಬಂಡಾ ಎಂಡಿಆರ್‌ಎಸ್ ಶಾಲೆ ನಾಗರಾಜ ಅವರು ಮೊದಲ 20 ಸ್ಥಾನಗಳಲ್ಲಿ ಆಯ್ಕೆಯಾಗಿದ್ದು ಅವರಿಗೆ ವಸತಿ ಸಮೇತ ಉಚಿತ ಶಿಕ್ಷಣ,ಇನ್ನುಳಿದಂತೆ 20-40 ವಿದ್ಯಾರ್ಥಿಗಳಿಗೆ ಎರಡು ವರ್ಷದ ಶಿಕ್ಷಣ ಉಚಿತ, 40-60 ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 90 ಸಾವಿರ ರೂ. ಶುಲ್ಕ ರಿಯಾಯಿತಿ,60-80 ನೇ ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 25 ಸಾವಿರ ರೂ.ರಿಯಾಯಿತಿ ಘೋಷಣೆ ಮಾಡಲಾಯಿತು.


ವರದಿ ಮಾಡಿದ್ದು ನಿಮ್ಮ ಡಿಸಿಜಿ ನ್ಯೂಸ್ :
ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ನಡೆಸಿದ್ದ ಸಂಸ್ಥೆಯವರು ಅಂದು 3550 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದರೂ ಬಹುಮಾನಕ್ಕೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ.ಇದನ್ನು ನಿಮ್ಮ ಡಿಸಿಜಿ ನ್ಯೂಸ್ ವರದಿ ಮಾಡಿತ್ತು.ಅಲ್ಲದೇ ಸಾರ್ವತ್ರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ಕಿವಿಮಾತನ್ನು ಸಂಸ್ಥೆಯವರ ಗಮನಕ್ಕೆ ತಂದಿತ್ತು.ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಅವರು ಪ್ರತ್ಯೇಕ ಸಮಾರಂಭವ,ಸ್ಪರ್ಧೆ ಏರ್ಪಡಿಸಿ ಯಾರಿಗೂ ಅನ್ಯಾಯವಾಗದಂತೆ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಕೈಗೊಂಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ