ಡಿಸಿಜಿ ನ್ಯೂಸ್ ವರದಿ ಪರಿಣಾಮ : OXFORD PATIL’S TALENT SEARCH EXAM; 21 ವಿದ್ಯಾರ್ಥಿಗಳಿಗೆ ಸಂಪೂರ್ಣ ವಸತಿ ಸಮೇತ ಉಚಿತ ಶಿಕ್ಷಣ

ಡಿಸಿಜಿ ನ್ಯೂಸ್ ವರದಿ ಪರಿಣಾಮ : OXFORD PATIL’S TALENT SEARCH EXAM; 21 ವಿದ್ಯಾರ್ಥಿಗಳಿಗೆ ಸಂಪೂರ್ಣ ವಸತಿ ಸಮೇತ ಉಚಿತ ಶಿಕ್ಷಣ

ಮುದ್ದೇಬಿಹಾಳ : ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಿAದ 21 ವಿದ್ಯಾರ್ಥಿಗಳಿಗೆ ಎರಡು ವರ್ಷದ ಸಂಪೂರ್ಣ ಉಚಿತ ಶಿಕ್ಷಣ, 20 ವಿದ್ಯಾರ್ಥಿಗಳಿಗೆ ಎರಡು ವರ್ಷದ ಉಚಿತ ಶಿಕ್ಷಣ,ಇನ್ನುಳಿದ 40 ವಿದ್ಯಾರ್ಥಿಗಳಿಗೆ ಶಿಕ್ಷಣದ ಶುಲ್ಕದಲ್ಲಿ ರಿಯಾಯತಿ ನೀಡಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಹೇಳಿದರು.
ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ರವಿವಾರ ನಡೆದ ಟ್ಯಾಲೆಂಟ್ ಸರ್ಚ್ ಅವಾರ್ಡ್-2025ರ ಅಂತಿಮ ಸುತ್ತಿನ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಲೇಜಿನಲ್ಲಿ ಈಚೇಗೆ ಆಯೋಜಿಸಿದ್ದ ಟ್ಯಾಲೆಂಟ್ ಅವಾರ್ಡ್-2025ರ ಪರೀಕ್ಷೆಯಲ್ಲಿ 3555 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಆದರೆ ಸಂಸ್ಥೆಯಿAದ ಮುಂಚಿತವಾಗಿ ನಿಗದಿ ಪಡಿಸಿದ್ದ ಅಂಕಗಳನ್ನು ಯಾರೊಬ್ಬರೂ ಗಳಿಸದ ಕಾರಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲರ ಸೂಚನೆಯಂತೆ ಅದರಲ್ಲಿಯೇ ಅತೀ ಹೆಚ್ಚು ಅಂಕ ಪಡೆದ 220 ವಿದ್ಯಾರ್ಥಿಗಳನ್ನು ಅಂತಿಮ ಆಯ್ಕೆ ಸುತ್ತಿಗೆ ಪರಿಗಣಿಸಲಾಗಿದ್ದು ಅಂತಿಮವಾಗಿ ಮತ್ತೊಂದು ಪರೀಕ್ಷೆ ನಡೆಸಿದ್ದು ಅದರಲ್ಲಿ ಮೊದಲ 80 ಸ್ಥಾನ ಪಡೆದವರ ಫಲಿತಾಂಶ ಪ್ರಕಟಿಸಿದ್ದೇವೆ ಎಂದು ತಿಳಿಸಿದರು.

ತಾಳಿಕೋಟಿ ಶಿಕ್ಷಕ ಎಸ್.ಎಸ್.ಸಜ್ಜನ,ಪ್ರಮುಖರಾದ ರಾಮನಗೌಡ ಬಿರಾದಾರ,ಕೆ.ಎಸ್.ಕರೇಕಲ್ಲ, ಆಂಗ್ಲಮಾಧ್ಯಮ ಶಾಲೆಯ ಇಸ್ಮಾಯಿಲ್ ಮನಿಯಾರ್, ಮಂಜು ಮಂಕಣಿ, ರಾಜಶೇಖರ ಹಿರೇಮಠ, ರವಿ ನಾಯಕ, ಸಂಗಮೇಶ ಬಡಿಗೇರ, ರೇವಣಸಿದ್ದ ಮುರಾಳ ಮೊದಲಾದವರು ಇದ್ದರು.

ಎರಡು ವರ್ಷದ ಪೂರ್ಣ ವಸತಿ ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು :
ಶಹಾಪೂರ ಆರ್.ಎಂ.ಎಸ್.ಎ ಶಾಲೆಯ ಅಮನ್, ಶಹಾಪೂರದ ದುದುಪುಡಿ ಶಾಲೆ ನಿಸರ್ಗ ಪೊಲೀಸಪಾಟೀಲ್,ಹುಮನಾಬಾದ ಚೆನ್ನಬಸವೇಶ್ವರ ಶಾಲೆಯ ವೈಷ್ಣವಿ ರೆಡ್ಡಿ, ಮುದ್ದೇಬಿಹಾಳ ಬಿ.ಎಸ್ ಸೆಂಟ್ರಲ್ ಶಾಲೆಯ ಮೊಹ್ಮದ ಜಿಹಾಮ್,ಮೈಲೇಶ್ವರ ಬ್ರಿಲಿಯಂಟ್ ಶಾಲೆಯ ಕಾರ್ತಿಕ ಕನಕರೆಡ್ಡಿ,ಹುಮನಾಬಾದ ಚನ್ನಬಸವೇಶ್ವರ ಶಾಲೆಯ ತ್ರಿಷಾ ಕೃಷ್ಣರೆಡ್ಡಿ, ಲಿಂಗಸುಗೂರು ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ನಿಖಿತಾ ವಸ್ತçದ,ಸಿಂದಗಿ ಆರ್.ಎಂ.ಎಸ್.ಎ ಶಾಲೆಯ ಶರಧಿ ಹಿರೇಮಠ, ಬೀಸಲದಿನ್ನಿ ಎಸ್.ಎಸ್.ಪಿ.ಎಸ್ ಶಾಲೆಯ ನವೀನಕುಮಾರ ಗೌಡರ, ಜಮಖಂಡಿ ತುಂಗಳ ಶಾಲೆಯ ಸೌಮ್ಯಾ ಉತ್ನಾಳ, ಕೊರ್ಲಹಳ್ಳಿ ಆರ್,ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ , ವಿಜಯಪುರ ಶ್ರೀರಾಮಕೃಷ್ಣ ಶಾಲೆಯ ಪ್ರೀತಮ ಪತ್ತಾರ, ಯಾದಗಿರ ಜೆಎನ್‌ವಿ ಶಾಲೆಯ ಸಿದ್ದೇಶ್ವರ ಎ.ಟಿ., ಬೀಳಗಿ ವಿವೇಕಾನಂದ ಇಂಟರ್‌ನ್ಯಾಶನಲ್ ಶಾಲೆಯ ಅನನ್ಯಾ ಕೊಕಟನೂರ,ರಕಬವಿ ಪದ್ಮಾವತಿ ಇಂಟರ್‌ನ್ಯಾಶನಲ್ ಸ್ಕೂಲ್‌ನ ಸುಕೃತ ಸಜ್ಜನ, ಆದವೈಭವಿ ಕೆ.ಆರ್.ಸಿ.ಆರ್ ಶಾಲೆ ಶ್ರೇಯಾ ಸೊಮ್ಲೆಪ್ಪ, ಶಹಾಪೂರ ಆರ್.ಎಂ.ಎಸ್.ಎ ಶಾಲೆಯ ಪ್ರವೀಣಕುಮಾರ ದಂಡಪ್ಪ, ಯಾದಗಿರಿಯ ಜೆಎನ್‌ವಿ ಶಾಲೆ ರೇವಣಸಿದ್ದ ಆಲ್ಯಾಳ, ಕೊಲ್ಹಾರ ಜೆಎನ್‌ವಿ ಶಾಲೆಯ ತರುಣ ಕೊಲ್ಹಾರ,ರಾಜಲಬಂಡಾ ಎಂಡಿಆರ್‌ಎಸ್ ಶಾಲೆ ನಾಗರಾಜ ಅವರು ಮೊದಲ 20 ಸ್ಥಾನಗಳಲ್ಲಿ ಆಯ್ಕೆಯಾಗಿದ್ದು ಅವರಿಗೆ ವಸತಿ ಸಮೇತ ಉಚಿತ ಶಿಕ್ಷಣ,ಇನ್ನುಳಿದಂತೆ 20-40 ವಿದ್ಯಾರ್ಥಿಗಳಿಗೆ ಎರಡು ವರ್ಷದ ಶಿಕ್ಷಣ ಉಚಿತ, 40-60 ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 90 ಸಾವಿರ ರೂ. ಶುಲ್ಕ ರಿಯಾಯಿತಿ,60-80 ನೇ ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 25 ಸಾವಿರ ರೂ.ರಿಯಾಯಿತಿ ಘೋಷಣೆ ಮಾಡಲಾಯಿತು.


ವರದಿ ಮಾಡಿದ್ದು ನಿಮ್ಮ ಡಿಸಿಜಿ ನ್ಯೂಸ್ :
ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ನಡೆಸಿದ್ದ ಸಂಸ್ಥೆಯವರು ಅಂದು 3550 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದರೂ ಬಹುಮಾನಕ್ಕೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ.ಇದನ್ನು ನಿಮ್ಮ ಡಿಸಿಜಿ ನ್ಯೂಸ್ ವರದಿ ಮಾಡಿತ್ತು.ಅಲ್ಲದೇ ಸಾರ್ವತ್ರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ಕಿವಿಮಾತನ್ನು ಸಂಸ್ಥೆಯವರ ಗಮನಕ್ಕೆ ತಂದಿತ್ತು.ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಅವರು ಪ್ರತ್ಯೇಕ ಸಮಾರಂಭವ,ಸ್ಪರ್ಧೆ ಏರ್ಪಡಿಸಿ ಯಾರಿಗೂ ಅನ್ಯಾಯವಾಗದಂತೆ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಕೈಗೊಂಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ