Recruitment of 32,000 Posts in Railway Department

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು.

Join Our Telegram: https://t.me/dcgkannada

ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ.

2024 ನೇ ಸಾಲಿನ, 8ನೇ ನೀರ ನೇಮಕಾತಿ ಅದಿ ಸೂಚನೆಯನ್ನು ಭಾರತೀಯ ರೈಲ್ವೆ ಇಲಾಖೆಯು ಬಿಡುಗಡೆ ಮಾಡಿದೆ. ಈಗ ಕೇವಲ ಶಾರ್ಟ್ ನೋಟಿಫಿಕೇಶನ್ ಮಾತ್ರ ಬಿಡುಗಡೆ ಮಾಡಿದೆ. 2025 ಜನವರಿಯಲ್ಲಿ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿ ಅರ್ಜಿ ಸ್ವೀಕೃತಿಯನ್ನು ಆರಂಭಿಸಲಿದೆ. ಒಟ್ಟು 32,000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಕೇವಲ SSLC ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನೀವು ಕೇಂದ್ರ ಸರ್ಕಾರ ಉದ್ಯೋಗವನ್ನು ಬಯಸಿ, ಸುಲಭ ಪರೀಕ್ಷೆ ವಿಧಾನ ಹಾಗೂ ಆಕರ್ಷಕ ಸಂಬಳದ ಉದ್ಯೋಗವನ್ನು ನೋಡುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಲಿದೆ. ಜನವರಿ 2025 ತಿಂಗಳಿನಿಂದ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು

ಇಲಾಖೆಯ ಹೆಸರು: ಭಾರತೀಯ ರೈಲ್ವೆ ಇಲಾಖೆ (Indian Railway)

ಹುದ್ದೆಯ ಹೆಸರು: ವಿವಿಧ ಗ್ರೂಪ್ ಡಿ ಹುದ್ದೆಗಳು

ಖಾಲಿ ಇರುವ ಹುದ್ದೆಗಳು: 32,000

ಉದ್ಯೋಗ ಸ್ಥಳ : All India

ವೇತನ ಶ್ರೇಣಿ: ನಿಯಮದ ಪ್ರಕಾರ

ಅರ್ಜಿ ಸಲ್ಲಿಸುವ ಬಗೆ: Online

ಶೈಕ್ಷಣಿಕ ಅರ್ಹತೆ: ಭಾರತೀಯ ರೈಲ್ವೆ ಇಲಾಖೆಯು ಹೊರಡಿಸಿದ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ SSLC ಅಥವಾ ITI ಪದವಿಯನ್ನು ಪಡೆದಿರಬೇಕು.

ವಯಸ್ಸಿನ ಮಿತಿ: ನಿಯಮದ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 36 ವರ್ಷ ವಯೋಮಿತಿಯನ್ನು ಮೀರಿರಬಾರದು.

ಖಾಲಿ ಇರುವ ಹುದ್ದೆಗಳು: ರೈಲ್ವೆ ಇಲಾಖೆಯು ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 32 ಸಾವಿರ ಗ್ರೂಪ್ ಡಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಖಾಲಿ ಇರುವ ಹುದ್ದೆಗಳ ವಿವರಗಳು(Railway Group D Posts List)

ಟ್ರ್ಯಾಕ್ ಮೇಂಟೆನರ್ ಗ್ರೇಡ್‌ IV
ತಾಂತ್ರಿಕ ವಿಭಾಗದ ಸಹಾಯಕ
ಅಸಿಸ್ಟಂಟ್‌ ಪಾಯಿಂಟ್ಸ್‌ಮನ್
ಟ್ರ್ಯಾಕ್ ಮ್ಯಾನ್
ಅಸಿಸ್ಟೆಂಟ್ ಬ್ರಿಡ್ಜ್
ಇತರೆ ಹಲವು ವಿಭಾಗಗಳ level 1 ಹುದ್ದೆಗಳು
ಕೋವಿಡ್ ಹಿನ್ನೆಲೆಯಲ್ಲಿ ಪ್ರವರ್ಗಗಳ ವಯಸ್ಸಿನ ಮಿತಿಯನ್ನು ಸಡಿಲಿಕ್ಕೆ ಮಾಡಲಾಗಿದೆ ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯನ್ನು ಓದಿ.

ಪ್ರಮುಖ ದಿನಾಂಕಗಳು:

ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ದಿನಾಂಕ 24/12/2024
ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ 23/01/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22/02/2025
ನೇಮಕ ಪರೀಕ್ಷೆ ದಿನಾಂಕ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗಗಳ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು,

ಸಾಮಾನ್ಯ ಅರ್ಹತೆ, OBC, ಆರ್ಥಿಕವಾಗಿ ಹಿಂದುಳಿದ ಕೆಟಗರಿಯವರಿಗೆ ರೂ.500. (Rs.400 ರೀಫಂಡ್‌ ಮಾಡಲಾಗುತ್ತದೆ).
ವಿಶೇಷ ಚೇತನರು, ಮಹಿಳಾ, ತೃತೀಯ ಲಿಂಗಿಗಳು, ಮಾಜಿ ಸೈನಿಕರು, SC, ST ಅಭ್ಯರ್ಥಿಗಳಿಗೆ ಶುಲ್ಕ ರೂ.250. ಬ್ಯಾಂಕ್‌ ಚಾರ್ಜ್‌ ಹೊರತುಪಡಿಸಿ, ಉಳಿದ ಹಣ ರೀಫಂಡ್‌ ಮಾಡಲಾಗುತ್ತದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

www.rrbbnc.gov.in

ಮೊದಲು ಮೇಲೆ ಕಾಣಿಸಿದ RRB ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ, ನಂತರ ಅರ್ಜಿ ಸಲ್ಲಿಸುವ ಮುಖಪುಟ ತೆರೆದುಕೊಳ್ಳುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 22 ಫೆಬ್ರುವರಿ 2025ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣನೆ ಮಾಡಲಾಗುವುದಿಲ್ಲ.
ನಂತರ ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ, ಭರ್ತಿ ಮಾಡಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
ಜೊತೆಗೆ ಅಭ್ಯರ್ಥಿಯ ಸಹಿ ಮತ್ತು ಹೆಬ್ಬೆರಳಿನ ಥಮ್ ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು (ಅಗತ್ಯವಿದ್ದರೆ ಮಾತ್ರ)
ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಒಮ್ಮೆ ಪರಿಶೀಲನೆ ಮಾಡಿ ಏನಾದರೂ ತಪ್ಪಿದಲ್ಲಿ ಪುನಃ ಸರಿಪಡಿಕೆ ಮಾಡಿ
ಸರಿಪಡಿಸಿದ್ದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ
ಅಭ್ಯರ್ಥಿಯು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಒಳ್ಳೆಯದು. ಅರ್ಜಿ ಸಲ್ಲಿಸಿದ ನಂತರ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
ಕೊನೆಯಲ್ಲಿ ಅರ್ಜಿ ಸಲ್ಲಿಸಿದ ದಾಖಲಾತಿಗಳನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.

ಪರೀಕ್ಷೆಯ ಸಮಯದಲ್ಲಿ ನಿಮಗೆ ಇದು ಸಹಕಾರಿಯಾಗಬಹುದು.
ಅಭ್ಯರ್ಥಿಯು ಮೇಲೆ ನೀಡಲಾದ ಎಲ್ಲಾ ವಿಧಾನಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ, ರೈಲ್ವೆ ಇಲಾಖೆಯ ಗ್ರೂಪ್ ಡಿ ಹುದ್ದೆಗಳಿಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಆಯ್ಕೆಯ ವಿಧಾನ:
ರೈಲ್ವೆ ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು, ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳು ನಡೆಸುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಕೇವಲ ಒಂದು ಹಂತ ಅಥವಾ ಎರಡು ಹಂತಗಳಲ್ಲಿ ನಡೆಸುವ ಹಕ್ಕನ್ನು ಒಂದಿದೆ, ಗ್ರೂಪ್ ಡಿ ಅಬ್ಯರ್ಥಿಗಳು ಸ್ವಚ್ಛತೆ, ಟ್ರ್ಯಾಕ್ ನಿರ್ವಹಣೆ, ರೈಲ್ವೆ ಮೆಂಟೇನೆನ್ಸ್, ನಿರ್ವಹಣೆ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ.

ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂಪಾಯಿ 18,000 ವೆತನವನ್ನು ನೀಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ರೈಲ್ವೆ ಗ್ರೂಪ್ ಡಿ ಗಳಿಗೆ ಅರ್ಜಿ ಸಲ್ಲಿಸಲು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ನೇಮಕ ಪರೀಕ್ಷೆ ದಿನಾಂಕ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ.

ಇದನ್ನೂ ಓದಿ: https://t.me/dcgkannada

Latest News

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ಬಾಲಕನೊಬ್ಬ ಕಾಲು ಜಾರಿ ಹೊಂಡದಲ್ಲಿ ಬಿದ್ದು

ಶಿವಯೋಗಿಮಠ ಕುಟುಂಬದಿoದ ಆಯೋಜನೆ:                  ಮಾ.2 ರಂದು ಆರೋಗ್ಯ ಉಚಿತ  ತಪಾಸಣಾ ಶಿಬಿರ

ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಿಂಚನಾ ಶಿವಪುತ್ರಪ್ಪ ಸಜ್ಜನ ಸನ್ 2026-27ನೇ ಸಾಲಿನ ಬೆಳಗಾವಿ ಜಿಲ್ಲೆ ಕಿತ್ತೂರ ರಾಣಿ ಚೆನ್ನಮ್ಮ ಸೈನಿಕ ವಸತಿ ಶಾಲೆಗೆ ಆಯ್ಕೆಯಾಗಿದ್ದಾಳೆ. ಸಿಂಚನಾ , ಬಿದರಕುಂದಿ ಗ್ರಾಮದ ಶಿಕ್ಷಕ ದಂಪತಿಯಾದ ಶಿವಪುತ್ರಪ್ಪ ಸಜ್ಜನ ಹಾಗೂ ಸುಮಲತಾ ಗಡಿಯಪ್ಪನವರ ಅವರ  ಪುತ್ರಿ.ವಿದ್ಯಾರ್ಥಿನಿ ಸಿಂಚನಾ ಸಾಧನೆಗೆ ಬಿದರಕುಂದಿ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು ಎಂದು ವಿಬಿಸಿ ಹೈಸ್ಕೂಲ್‌ನ ಮುಖ್ಯಗುರು ವಿ.ಜಿ.ರಾಮಚಂದ್ರಯ್ಯ ಹೇಳಿದರು. ಪಟ್ಟಣದ ಕೆಬಿಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ದೈನಂದಿನ ಬದುಕಿನಲ್ಲಿ ಸೇವಿಸುವ ಆಹಾರದಲ್ಲೂ ವಿಜ್ಞಾನ ಅಡಗಿದೆ.ಪ್ರತಿ ವಸ್ತುಗಳಲ್ಲೂ ವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು ಯಾವ ಪದಾರ್ಥ ನಮ್ಮ ದೇಹಕ್ಕೆ ಅತ್ಯಂತ ಸೂಕ್ತ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.