ಸಿದ್ದೇಶ್ವರ ಸ್ವಾಮೀಜಿ ಸ್ಮರಣೆ : ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಬಳಗದ ದಿನದರ್ಶಿಕೆ ಲೋಕಾರ್ಪಣೆ ; ಮಾಧ್ಯಮಗಳು ಉಳ್ಳವರ ಸ್ವತ್ತಾಗದಿರಲಿ-ಕುಂಟೋಜಿ ಶ್ರೀ

ಸಿದ್ದೇಶ್ವರ ಸ್ವಾಮೀಜಿ ಸ್ಮರಣೆ : ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಬಳಗದ ದಿನದರ್ಶಿಕೆ ಲೋಕಾರ್ಪಣೆ ; ಮಾಧ್ಯಮಗಳು ಉಳ್ಳವರ ಸ್ವತ್ತಾಗದಿರಲಿ-ಕುಂಟೋಜಿ ಶ್ರೀ

ಮುದ್ದೇಬಿಹಾಳ : ಮಾಧ್ಯಮಗಳು ಇಂದು ಜಾಹೀರಾತು ಕೊಟ್ಟವರನ್ನು ಓಲೈಸುವ ಸ್ಥಿತಿಯಲ್ಲಿವೆ.ನಿಜವಾಗಿಯೂ ನೊಂದವರ,ಶೋಷಿತರ ಪರವಾಗಿ ಧ್ವನಿಯಾಗಿ ನಿಲ್ಲುವ ಕಾರ್ಯ ಮಾಧ್ಯಮಗಳು ಮಾಡಬೇಕು ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು ಹೇಳಿದರು.

ತಾಲ್ಲೂಕು ಕುಂಟೋಜಿಯ ಶ್ರೀ ಬಸವೇಶ್ವರ ದೇವಸ್ಥಾನದ ಯಾತ್ರಿ ನಿವಾಸದ ಸಭಾಂಗಣದಲ್ಲಿ ಯಶಸ್ವಿನಿ ಮಹಿಳಾ ಸ್ವ ಸಹಾಯ ಸಂಘ, ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಬಳಗದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಿದ್ಧೇಶ್ವರ ಸ್ವಾಮೀಜಿಯವರ ಸ್ಮರಣೆ,ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪತ್ರಿಕೆಗಳು ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ಉಳಿಸಿಕೊಂಡಿವೆ.ಆದರೆ ಜಾಹೀರಾತು ಒಂದು ಭಾಗವಾಗಿರಲಿ,ಅದೇ ಪ್ರಧಾನವಾದರೆ ಸಮಾಜದ ವ್ಯವಸ್ಥೆಯಲ್ಲಿ ಮಾಧ್ಯಮ ರಂಗದ ಅಸ್ತಿತ್ವದ ಬಗ್ಗೆಯೂ ಆತಂಕಪಡುವAತಾಗುತ್ತದೆ ಎಂದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಸಿದ್ದೇಶ್ವರ ಸ್ವಾಮೀಜಿಯವರು ಈ ಶತಮಾನದ ಸಂತರಾಗಿದ್ದು ಅವರ ಬಗ್ಗೆ ಮಾತನಾಡುವುದಕ್ಕೆ ಒಂದು ದಿನ ಸಾಕಾಗುವುದಿಲ್ಲ.ಅವರು ನುಡಿದಂತೆ ನಡೆದ ದಾರ್ಶನಿಕರು.ಅವರ ಆದರ್ಶಗಳನ್ನು ನಾವು ಪಾಲಿಸಬೇಕು ಎಂದರು.

ಜಿಪಂ ನಿವೃತ್ತದ ಅಧಿಕಾರಿ ಬಿ.ಎಚ್.ಹೂಗಾರ, ಬಿಇಒ ಕಚೇರಿ ಲಿಪಿಕ ನೌಕರರ ಸಂಘದ ಅಧ್ಯಕ್ಷ ಶರಣು ಹಿರೇಮಠ, ಪತ್ರಕರ್ತ ಶಂಕರ ಹೆಬ್ಬಾಳ ಮಾತನಾಡಿದರು.ಯಶಸ್ವಿನಿ ಮಹಿಳಾ ಸ್ವ ಸಹಾಯ ಸಂಘದ ಅಧ್ಯಕ್ಷೆ ಪಾರ್ವತಿ ಕೋಳೂರು, ಬಸವೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಹೆಸ್ಕಾಂ ಅಧಿಕಾರಿ ಶಿವಪ್ಪ ಆರೇಶಂಕರ, ಪತ್ರಕರ್ತ ಗುಲಾಮಮೊಹ್ಮದ ದಫೇದಾರ, ವಕೀಲರಾದ ಸಿ.ವಿ.ಊರಾನ ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ