ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಜ.೮ ರಂದು ನಡೆಯಲಿದೆ.
ಅಧ್ಯಕ್ಷ, ಉಪಾಧ್ಯಕ್ಷರು ಯಾರಾಗಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.ಹಿಂದಿನ ಅಧ್ಯಕ್ಷ ಸತೀಶ ಓಸ್ವಾಲ ಈಗಾಗಲೇ ಎರಡು ಬಾರಿ ಅಧ್ಯಕ್ಷ ಹುದ್ದೆ ಅಲಂಕರಿಸಿದ್ದು ಸಾಮಾನ್ಯ ನಿರ್ದೇಶಕರಾಗಿ ಮುಂದುವರೆಯುವ ಸಾಧ್ಯತೆ ಇದೆ.

ಡಿಸಿಜಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಅಧ್ಯಕ್ಷನಾಗಬೇಕು ಎಂಬ ಆಸೆ ಇಲ್ಲ.ಊರಿನ ಹಿರಿಯರು ಈಗಾಗಲೇ ನನ್ನನ್ನು ಬ್ಯಾಂಕಿನ ಎರಡು ಅವಧಿಗೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ.ಮುಂಬರುವ ದಿನಗಳಲ್ಲಿ ಹಿರಿಯರ ಮಾತಿಗೆ ತಲೆಬಾಗಿ ಮುನ್ನಡೆಯುತ್ತೇನೆ ಎಂದು ಉತ್ತರಿಸಿದರು.

ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ಸಂಗನಗೌಡ ಬಿರಾದಾರ(ಜಿಟಿಸಿ), ರಾಜಶೇಖರ ಕರಡ್ಡಿ ಹಾಗೂ ಪ್ರಭುರಾಜ ಕಲ್ಬುರ್ಗಿ ಇದ್ದಾರೆ.ಈ ಮೂವರಲ್ಲಿ ಒಬ್ಬರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವುದು ಪಕ್ಕಾ ಎನ್ನಲಾಗುತ್ತಿದೆ.ಆದರೆ ಆಯ್ಕೆಯ ಜವಾಬ್ದಾರಿ ಹೊತ್ತಿರುವ ಹಿರಿಯರೊಬ್ಬರು, ಸದ್ಯಕ್ಕೆ ಏನನ್ನೂ ಹೇಳುವುದಿಲ್ಲ.ಚುನಾವಣೆಯ ದಿನದಂದು ಬೆಳಗ್ಗೆ ಎಲ್ಲರ ಅಭಿಪ್ರಾಯ ಪಡೆದುಕೊಂಡು ಸರ್ವರ ಸಮ್ಮತಿಯೊಂದಿಗೆ ಸೂಕ್ತ ವ್ಯಕ್ತಿಗೆ ಅಧ್ಯಕ್ಷರಾಗಲು ಸೂಚಿಸುವ ಬಯಕೆ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.

ಮೂವರಲ್ಲಿ ಇಬ್ಬರಿಗೆ ಅಧ್ಯಕ್ಷ ಹುದ್ದೆಯ ಅವಧಿಯನ್ನು ಎರಡು ಅವಧಿಗೆ ವಿಭಜಿಸಿ ನೀಡುವ ಮೂಲಕ ಅಧಿಕಾರ ಹಂಚಿಕೆ ಸೂತ್ರ ಅನುಸರಿಸಲಿದ್ದಾರೆಯೇ ಎಂಬ ಮಾತುಗಳು ಕೇಳಿ ಬಂದಿವೆ.ಸಹಕಾರಿ ಕ್ಷೇತ್ರದಲ್ಲಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ,ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕರೂ ಆಗಿರುವ ಸತೀಶ ಓಸ್ವಾಲ್ ಅವರು ಬ್ಯಾಂಕಿಗೆ ಮಾರ್ಗದರ್ಶಕರಾಗಿರಲಿದ್ದು ಹೊಸಬರನ್ನು ಆಯ್ಕೆ ಮಾಡುವಲ್ಲಿ ಅವರ ಮಾತಿಗೂ ಪ್ರಾಶಸ್ತö್ಯ ಇರಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ಒಟ್ಟಾರೆ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಒಂದು ತಿಂಗಳು ನಡೆದ ಚುನಾವಣೆಯ ಕೊನೆಯ ಘಟ್ಟ ತಲುಪಿದ್ದು ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಆಯ್ಕೆ ಮೂಲಕ ನಾಳೆ ತೆರೆ ಬೀಳಲಿದೆ.

ಮಹಿಳೆಯರ ಆಯ್ಕೆಯಾಗಿಲ್ಲ :
ಬ್ಯಾಂಕಿನ ಇತಿಹಾಸದಲ್ಲಿ ಈವರೆಗೂ ಮಹಿಳೆಯರು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿಲ್ಲ.ಅಧ್ಯಕ್ಷ ಹುದ್ದೆ ಇರಲಿ, ಕೊನೆಯ ಪಕ್ಷ ಉಪಾಧ್ಯಕ್ಷ ಸ್ಥಾನಕ್ಕಾದರೂ ಮಹಿಳೆಯರಿಗೆ ಆದ್ಯತೆ ನೀಡಬೇಕು ಎಂಬ ಮಾತುಗಳು ಕೇಳಿ ಬಂದಿವೆ.ಒಟ್ಟಾರೆ ಹಿರಿಯರು ಕೈಗೊಳ್ಳುವ, ಆಯ್ಕೆಯಾದ ನಿರ್ದೇಶಕರ ಸಮ್ಮತಿಯಂತೆ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ