ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಜ.೮ ರಂದು ನಡೆಯಲಿದೆ.
ಅಧ್ಯಕ್ಷ, ಉಪಾಧ್ಯಕ್ಷರು ಯಾರಾಗಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.ಹಿಂದಿನ ಅಧ್ಯಕ್ಷ ಸತೀಶ ಓಸ್ವಾಲ ಈಗಾಗಲೇ ಎರಡು ಬಾರಿ ಅಧ್ಯಕ್ಷ ಹುದ್ದೆ ಅಲಂಕರಿಸಿದ್ದು ಸಾಮಾನ್ಯ ನಿರ್ದೇಶಕರಾಗಿ ಮುಂದುವರೆಯುವ ಸಾಧ್ಯತೆ ಇದೆ.

ಡಿಸಿಜಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಅಧ್ಯಕ್ಷನಾಗಬೇಕು ಎಂಬ ಆಸೆ ಇಲ್ಲ.ಊರಿನ ಹಿರಿಯರು ಈಗಾಗಲೇ ನನ್ನನ್ನು ಬ್ಯಾಂಕಿನ ಎರಡು ಅವಧಿಗೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ.ಮುಂಬರುವ ದಿನಗಳಲ್ಲಿ ಹಿರಿಯರ ಮಾತಿಗೆ ತಲೆಬಾಗಿ ಮುನ್ನಡೆಯುತ್ತೇನೆ ಎಂದು ಉತ್ತರಿಸಿದರು.

ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ಸಂಗನಗೌಡ ಬಿರಾದಾರ(ಜಿಟಿಸಿ), ರಾಜಶೇಖರ ಕರಡ್ಡಿ ಹಾಗೂ ಪ್ರಭುರಾಜ ಕಲ್ಬುರ್ಗಿ ಇದ್ದಾರೆ.ಈ ಮೂವರಲ್ಲಿ ಒಬ್ಬರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವುದು ಪಕ್ಕಾ ಎನ್ನಲಾಗುತ್ತಿದೆ.ಆದರೆ ಆಯ್ಕೆಯ ಜವಾಬ್ದಾರಿ ಹೊತ್ತಿರುವ ಹಿರಿಯರೊಬ್ಬರು, ಸದ್ಯಕ್ಕೆ ಏನನ್ನೂ ಹೇಳುವುದಿಲ್ಲ.ಚುನಾವಣೆಯ ದಿನದಂದು ಬೆಳಗ್ಗೆ ಎಲ್ಲರ ಅಭಿಪ್ರಾಯ ಪಡೆದುಕೊಂಡು ಸರ್ವರ ಸಮ್ಮತಿಯೊಂದಿಗೆ ಸೂಕ್ತ ವ್ಯಕ್ತಿಗೆ ಅಧ್ಯಕ್ಷರಾಗಲು ಸೂಚಿಸುವ ಬಯಕೆ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.

ಮೂವರಲ್ಲಿ ಇಬ್ಬರಿಗೆ ಅಧ್ಯಕ್ಷ ಹುದ್ದೆಯ ಅವಧಿಯನ್ನು ಎರಡು ಅವಧಿಗೆ ವಿಭಜಿಸಿ ನೀಡುವ ಮೂಲಕ ಅಧಿಕಾರ ಹಂಚಿಕೆ ಸೂತ್ರ ಅನುಸರಿಸಲಿದ್ದಾರೆಯೇ ಎಂಬ ಮಾತುಗಳು ಕೇಳಿ ಬಂದಿವೆ.ಸಹಕಾರಿ ಕ್ಷೇತ್ರದಲ್ಲಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ,ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕರೂ ಆಗಿರುವ ಸತೀಶ ಓಸ್ವಾಲ್ ಅವರು ಬ್ಯಾಂಕಿಗೆ ಮಾರ್ಗದರ್ಶಕರಾಗಿರಲಿದ್ದು ಹೊಸಬರನ್ನು ಆಯ್ಕೆ ಮಾಡುವಲ್ಲಿ ಅವರ ಮಾತಿಗೂ ಪ್ರಾಶಸ್ತö್ಯ ಇರಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ಒಟ್ಟಾರೆ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಒಂದು ತಿಂಗಳು ನಡೆದ ಚುನಾವಣೆಯ ಕೊನೆಯ ಘಟ್ಟ ತಲುಪಿದ್ದು ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಆಯ್ಕೆ ಮೂಲಕ ನಾಳೆ ತೆರೆ ಬೀಳಲಿದೆ.

ಮಹಿಳೆಯರ ಆಯ್ಕೆಯಾಗಿಲ್ಲ :
ಬ್ಯಾಂಕಿನ ಇತಿಹಾಸದಲ್ಲಿ ಈವರೆಗೂ ಮಹಿಳೆಯರು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿಲ್ಲ.ಅಧ್ಯಕ್ಷ ಹುದ್ದೆ ಇರಲಿ, ಕೊನೆಯ ಪಕ್ಷ ಉಪಾಧ್ಯಕ್ಷ ಸ್ಥಾನಕ್ಕಾದರೂ ಮಹಿಳೆಯರಿಗೆ ಆದ್ಯತೆ ನೀಡಬೇಕು ಎಂಬ ಮಾತುಗಳು ಕೇಳಿ ಬಂದಿವೆ.ಒಟ್ಟಾರೆ ಹಿರಿಯರು ಕೈಗೊಳ್ಳುವ, ಆಯ್ಕೆಯಾದ ನಿರ್ದೇಶಕರ ಸಮ್ಮತಿಯಂತೆ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ