ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಬ್ಯಾಂಕಿನ ಹೈಕಮಾಂಡ್ ನೀಡುವ ಮೂಲಕ ಜಾಣ ನಡೆ ಅನುಸರಿಸಿದ್ದು, ಅಧಿಕಾರ ಹಂಚಿಕೆ ಸೂತ್ರದಡಿ ಹೊಸ ಅಧ್ಯಕ್ಷರುಗಳನ್ನು ಈ ಐದು ವರ್ಷದ ಅವಧಿಗೆ ಆಯ್ಕೆ ಮಾಡುವ ನಿರ್ಧಾರವನ್ನು ಕೈಗೊಂಡು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ನೂತನ ಅಧ್ಯಕ್ಷರಾಗಿ ಚೆನ್ನಪ್ಪಗೌಡ ಬಿರಾದಾರ, ಉಪಾಧ್ಯಕ್ಷರಾಗಿ ಗುರುಲಿಂಗಪ್ಪಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾಧಿಕಾರಿ ವಿಜಯಕುಮಾರ ಉತ್ನಾಳ ಅವರು ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಬ್ಯಾಂಕಿನ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಸತೀಶ ಓಸ್ವಾಲ್ ಮಾತನಾಡಿ, ಬ್ಯಾಂಕು ಸದಾ ಅಭಿವೃದ್ಧಿಪಥದತ್ತ ಸಾಗಲು ಸಾಮಾಜಿಕ ನ್ಯಾಯದ ಅಡಿಯಲ್ಲಿ ಎಲ್ಲರಿಗೂ ಅಧಿಕಾರದ ಅವಕಾಶ ದೊರೆಯಬೇಕು ಎಂಬ ನಿಟ್ಟಿನಲ್ಲಿ ಊರಿನ ಹಿರಿಯರು ಕೈಗೊಂಡಿರುವ ನಿರ್ಧಾರಕ್ಕೆ ಬದ್ಧರಾಗಿ ಈ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.ಬ್ಯಾಂಕಿನ ಅಧ್ಯಕ್ಷ ಚೆನ್ನಪ್ಪಗೌಡ ಬಿರಾದಾರ ಮಾತನಾಡಿ, ಬ್ಯಾಂಕಿನ ಐದು ವರ್ಷದ ಅವಧಿಯಲ್ಲಿ ನಾಲ್ವರಿಗೆ ಅಧಿಕಾರ ಹಂಚಿಕೆ ಸೂತ್ರದಡಿ ನಿರ್ದೇಶಕರುಗಳಿಗೆ ಅವಕಾಶ ಕಲ್ಪಿಸಿದ್ದು ತಲಾ ಹದಿನೈದು ತಿಂಗಳಿನAತೆ ಬದಲಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.ಆರಂಭದಲ್ಲಿ ನನಗೆ ಅವಕಾಶ ದೊರೆತಿದ್ದು ಮುಂದಿನ ದಿನಗಳಲ್ಲಿ ಪ್ರಭುರಾಜ ಕಲ್ಬುರ್ಗಿ, ರಾಜಶೇಖರ ಕರಡ್ಡಿ, ನಿಂಗಣ್ಣ ಚಟ್ಟೇರ ಅವರಿಗೆ ಹಿರಿಯರ ಅಣತಿಯಂತೆ ಅಧ್ಯಕ್ಷ ಸ್ಥಾನ ಕಲ್ಪಿಸಲಾಗುವುದು ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕು ಬದಲಾವಣೆ ಇರಲಿದೆ ಎಂದು ಹೇಳಿದರು.ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಸನ್ಮಾನಿಸಿದರು.

ಜಾಣ ನಡೆ ಅನುಸರಿಸಿದ ಊರ ಹಿರಿಯರು: ಅಧ್ಯಕ್ಷರಾಗಲು ಮೂವರ ಮಧ್ಯೆ ನಾ ಮುಂದೆ ತಾ ಮುಂದೆ ಎಂಬAತೆ ಪೈಪೋಟಿ ಇತ್ತು.ಆದರೆ ಇದಕ್ಕೆ ಆಸ್ಪದ ನೀಡದೇ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಿದ್ದು ಅಲ್ಲದೇ ಅಧಿಕಾರ ಹಂಚಿಕೆಯ ಸೂತ್ರದಡಿ ಅಧ್ಯಕ್ಷರನ್ನು ಬದಲಾಯಿಸಲಾಗುವುದು ಎಂದು ಊರಿನ ಹಿರಿಯರು, ಬ್ಯಾಂಕಿನ ಹಿರಿಯ ನಿರ್ದೇಶಕರು ಮಾತು ಕೊಟ್ಟಿರುವುದು ಇನ್ನುಳಿದ ಆಕಾಂಕ್ಷಿಗಳ ಅಪಸ್ವರಕ್ಕೆ ಆಸ್ಪದ ಸಿಗಲಿಲ್ಲ.ಅಲ್ಲದೇ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆಗೆ ಸಹಕಾರ ನೀಡಿದರು ಎಂಬ ಮಾತುಗಳು ಬಂದವು.

ಈಗಾಗಲೇ ಅಧ್ಯಕ್ಷರಾಗಿ ಎರಡು ಅವಧಿ ಪೂರೈಸಿರುವ ಸತೀಶ ಓಸ್ವಾಲ್, ಸಂಗನಗೌಡ ಬಿರಾದಾರ ಅವರು ಸ್ವಯಂಪ್ರೇರಿತರಾಗಿ ಅಧ್ಯಕ್ಷ ಸ್ಥಾನವನ್ನು ವಿನಯಂದಿAದಲೇ ನಿರಾಕರಿಸಿದರು.ಮತ್ತೊಬ್ಬರಿಗೆ ಅವಕಾಶ ಸಿಗಲಿ, ಬ್ಯಾಂಕಿನ ಪ್ರಗತಿಗೆ ಬೇಕಾದ ಸಹಕಾರ ನೀಡುವುದಾಗಿ ಹೇಳಿದ್ದು ಮಹತ್ವ ಪಡೆದುಕೊಂಡಿದೆ. ಸತೀಶ ಓಸ್ವಾಲ್ ಅವರ ಅಧ್ಯಕ್ಷತೆಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಸಭಾಭವನ, ಬ್ಯಾಂಕಿನ ಡಿಜಟಿಲೀಕರಣಕ್ಕೆ ಒತ್ತು ನೀಡಿದ್ದು ಸೇರಿದಂತೆ ಹತ್ತು ಹಲವು ಕಾರ್ಯಗಳು ನಡೆದಿದ್ದು ಹೊಸ ಆಡಳಿತ ಮಂಡಳಿಯವರು ಯಾವ ಕೆಲಸಗಳಿಗೆ ಆದ್ಯತೆ ನೀಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ