ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಬ್ಯಾಂಕಿನ ಹೈಕಮಾಂಡ್ ನೀಡುವ ಮೂಲಕ ಜಾಣ ನಡೆ ಅನುಸರಿಸಿದ್ದು, ಅಧಿಕಾರ ಹಂಚಿಕೆ ಸೂತ್ರದಡಿ ಹೊಸ ಅಧ್ಯಕ್ಷರುಗಳನ್ನು ಈ ಐದು ವರ್ಷದ ಅವಧಿಗೆ ಆಯ್ಕೆ ಮಾಡುವ ನಿರ್ಧಾರವನ್ನು ಕೈಗೊಂಡು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ನೂತನ ಅಧ್ಯಕ್ಷರಾಗಿ ಚೆನ್ನಪ್ಪಗೌಡ ಬಿರಾದಾರ, ಉಪಾಧ್ಯಕ್ಷರಾಗಿ ಗುರುಲಿಂಗಪ್ಪಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾಧಿಕಾರಿ ವಿಜಯಕುಮಾರ ಉತ್ನಾಳ ಅವರು ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಬ್ಯಾಂಕಿನ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಸತೀಶ ಓಸ್ವಾಲ್ ಮಾತನಾಡಿ, ಬ್ಯಾಂಕು ಸದಾ ಅಭಿವೃದ್ಧಿಪಥದತ್ತ ಸಾಗಲು ಸಾಮಾಜಿಕ ನ್ಯಾಯದ ಅಡಿಯಲ್ಲಿ ಎಲ್ಲರಿಗೂ ಅಧಿಕಾರದ ಅವಕಾಶ ದೊರೆಯಬೇಕು ಎಂಬ ನಿಟ್ಟಿನಲ್ಲಿ ಊರಿನ ಹಿರಿಯರು ಕೈಗೊಂಡಿರುವ ನಿರ್ಧಾರಕ್ಕೆ ಬದ್ಧರಾಗಿ ಈ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.ಬ್ಯಾಂಕಿನ ಅಧ್ಯಕ್ಷ ಚೆನ್ನಪ್ಪಗೌಡ ಬಿರಾದಾರ ಮಾತನಾಡಿ, ಬ್ಯಾಂಕಿನ ಐದು ವರ್ಷದ ಅವಧಿಯಲ್ಲಿ ನಾಲ್ವರಿಗೆ ಅಧಿಕಾರ ಹಂಚಿಕೆ ಸೂತ್ರದಡಿ ನಿರ್ದೇಶಕರುಗಳಿಗೆ ಅವಕಾಶ ಕಲ್ಪಿಸಿದ್ದು ತಲಾ ಹದಿನೈದು ತಿಂಗಳಿನAತೆ ಬದಲಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.ಆರಂಭದಲ್ಲಿ ನನಗೆ ಅವಕಾಶ ದೊರೆತಿದ್ದು ಮುಂದಿನ ದಿನಗಳಲ್ಲಿ ಪ್ರಭುರಾಜ ಕಲ್ಬುರ್ಗಿ, ರಾಜಶೇಖರ ಕರಡ್ಡಿ, ನಿಂಗಣ್ಣ ಚಟ್ಟೇರ ಅವರಿಗೆ ಹಿರಿಯರ ಅಣತಿಯಂತೆ ಅಧ್ಯಕ್ಷ ಸ್ಥಾನ ಕಲ್ಪಿಸಲಾಗುವುದು ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕು ಬದಲಾವಣೆ ಇರಲಿದೆ ಎಂದು ಹೇಳಿದರು.ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಸನ್ಮಾನಿಸಿದರು.

ಜಾಣ ನಡೆ ಅನುಸರಿಸಿದ ಊರ ಹಿರಿಯರು: ಅಧ್ಯಕ್ಷರಾಗಲು ಮೂವರ ಮಧ್ಯೆ ನಾ ಮುಂದೆ ತಾ ಮುಂದೆ ಎಂಬAತೆ ಪೈಪೋಟಿ ಇತ್ತು.ಆದರೆ ಇದಕ್ಕೆ ಆಸ್ಪದ ನೀಡದೇ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಿದ್ದು ಅಲ್ಲದೇ ಅಧಿಕಾರ ಹಂಚಿಕೆಯ ಸೂತ್ರದಡಿ ಅಧ್ಯಕ್ಷರನ್ನು ಬದಲಾಯಿಸಲಾಗುವುದು ಎಂದು ಊರಿನ ಹಿರಿಯರು, ಬ್ಯಾಂಕಿನ ಹಿರಿಯ ನಿರ್ದೇಶಕರು ಮಾತು ಕೊಟ್ಟಿರುವುದು ಇನ್ನುಳಿದ ಆಕಾಂಕ್ಷಿಗಳ ಅಪಸ್ವರಕ್ಕೆ ಆಸ್ಪದ ಸಿಗಲಿಲ್ಲ.ಅಲ್ಲದೇ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆಗೆ ಸಹಕಾರ ನೀಡಿದರು ಎಂಬ ಮಾತುಗಳು ಬಂದವು.

ಈಗಾಗಲೇ ಅಧ್ಯಕ್ಷರಾಗಿ ಎರಡು ಅವಧಿ ಪೂರೈಸಿರುವ ಸತೀಶ ಓಸ್ವಾಲ್, ಸಂಗನಗೌಡ ಬಿರಾದಾರ ಅವರು ಸ್ವಯಂಪ್ರೇರಿತರಾಗಿ ಅಧ್ಯಕ್ಷ ಸ್ಥಾನವನ್ನು ವಿನಯಂದಿAದಲೇ ನಿರಾಕರಿಸಿದರು.ಮತ್ತೊಬ್ಬರಿಗೆ ಅವಕಾಶ ಸಿಗಲಿ, ಬ್ಯಾಂಕಿನ ಪ್ರಗತಿಗೆ ಬೇಕಾದ ಸಹಕಾರ ನೀಡುವುದಾಗಿ ಹೇಳಿದ್ದು ಮಹತ್ವ ಪಡೆದುಕೊಂಡಿದೆ. ಸತೀಶ ಓಸ್ವಾಲ್ ಅವರ ಅಧ್ಯಕ್ಷತೆಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಸಭಾಭವನ, ಬ್ಯಾಂಕಿನ ಡಿಜಟಿಲೀಕರಣಕ್ಕೆ ಒತ್ತು ನೀಡಿದ್ದು ಸೇರಿದಂತೆ ಹತ್ತು ಹಲವು ಕಾರ್ಯಗಳು ನಡೆದಿದ್ದು ಹೊಸ ಆಡಳಿತ ಮಂಡಳಿಯವರು ಯಾವ ಕೆಲಸಗಳಿಗೆ ಆದ್ಯತೆ ನೀಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ