Budget Breaking: Great news for farmers Central Govt

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.

ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್?

ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಸಾಲ ಒದಗಿಸಲು ಪ್ರಾರಂಭಿಸಿದ ಒಂದು ಯೋಜನೆಯಾಗಿದೆ. ಇದನ್ನು 1998 ರಲ್ಲಿ ಪರಿಚಯಿಸಲಾಯಿತು.

ಕಿಸಾನ್ ಕ್ರೆಡಿಟ್ ಕಾರ್ಡ್‌ನ ಉದ್ದೇಶಗಳು:

  • ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವುದು.
  • ಕೃಷಿ ಉತ್ಪಾದನೆಯನ್ನು ಹೆಚ್ಚಿಸುವುದು.
  • ರೈತರ ಆದಾಯವನ್ನು ಹೆಚ್ಚಿಸುವುದು.
  • ರೈತರನ್ನು ಸಾಲದ ಸುಳಿಯಿಂದ ಪಾರು ಮಾಡುವುದು.

ಕಿಸಾನ್ ಕ್ರೆಡಿಟ್ ಕಾರ್ಡ್‌ನ ಪ್ರಯೋಜನಗಳು:

  • ಕಡಿಮೆ ಬಡ್ಡಿದರದಲ್ಲಿ ಸಾಲ ಲಭ್ಯವಿರುತ್ತದೆ.
  • ಯಾವುದೇ ರೀತಿಯ ಭದ್ರತೆ ನೀಡುವ ಅಗತ್ಯವಿಲ್ಲ.
  • ಸಾಲವನ್ನು ಮರುಪಾವತಿಸಲು ರೈತರಿಗೆ ಸಾಕಷ್ಟು ಸಮಯಾವಕಾಶವಿರುತ್ತದೆ.
  • ಈ ಕಾರ್ಡ್ ಬಳಸಿ ಬಿತ್ತನೆ ಬೀಜಗಳು, ಗೊಬ್ಬರ ಮತ್ತು ಕೀಟನಾಶಕಗಳನ್ನು ಖರೀದಿಸಬಹುದು.

ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಅರ್ಹತೆಗಳು:

  • ನೀವು ರೈತರಾಗಿರಬೇಕು.
  • ನಿಮಗೆ ಸ್ವಂತ ಜಮೀನು ಇರಬೇಕು ಅಥವಾ ನೀವು ಗೇಣಿದಾರರಾಗಿರಬೇಕು.
  • ನಿಮ್ಮ ವಯಸ್ಸು 18 ರಿಂದ 75 ವರ್ಷಗಳ ನಡುವೆ ಇರಬೇಕು.

ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

  • ನೀವು ಹತ್ತಿರದ ಬ್ಯಾಂಕ್ ಅಥವಾ ಕೃಷಿ ಕಚೇರಿಗೆ ಹೋಗಿ ಅರ್ಜಿ ಸಲ್ಲಿಸಬಹುದು.
  • ಅರ್ಜಿಯೊಂದಿಗೆ ನಿಮ್ಮ ಜಮೀನಿನ ದಾಖಲೆಗಳು, ಗುರುತಿನ ಚೀಟಿ ಮತ್ತು ವಿಳಾಸ ಪುರಾವೆಗಳನ್ನು ಸಲ್ಲಿಸಬೇಕು.
    ಕಿಸಾನ್ ಕ್ರೆಡಿಟ್ ಕಾರ್ಡ್ ರೈತರಿಗೆ ಬಹಳ ಉಪಯುಕ್ತವಾದ ಯೋಜನೆ. ಈ ಯೋಜನೆಯಡಿ ಸಾಲ ಪಡೆದು ತಮ್ಮ ಕೃಷಿಯನ್ನು ಅಭಿವೃದ್ಧಿಪಡಿಸಬಹುದು.

ದಾಖಲೆ: ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸುತ್ತಿದ್ದಾರೆ. 2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600