ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್. ಬಿ. ಬಳ್ಳಾರಿ ಸರಕಾರಿ ನೌಕರರಿಗೆ ಕರೆ ನೀಡಿದರು.

ಪಟ್ಟಣದ ರುದ್ರಗೌಡ ಪಾಟೀಲ ಸರಕಾರಿ ಪಥಮ ದರ್ಜೇ ಕಾಲೇಜು ಸಭಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಯೊಬ್ಬ ನೌಕರರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕು. ನೌಕರರ ಸಂಘ 22 ಕೋಟಿ ಹಣವನ್ನು ಎಪ್.ಡಿ. ಮಾಡಿದ್ದು, ಕ್ರೀಡಾಕೂಟ ಹಾಗೂ ಮಹಿಳಾದಿನಾಚರಣೆ ಸೇರಿದಂತೆ ವಿವಿಧ ಸಾಂಸ್ಕತೀಕ ಕಾರ್ಯಕ್ರಮಗಳಿಗೆ ಸರಕಾರ ಅನುದಾನ ನೀಡುತ್ತಿದ್ದು, ನಮ್ಮ ಬಾಗಲಕೋಟೆ ಜಿಲ್ಲೆಗೆ 2 ಕೋಟಿ ಅನುದಾನ ಬಂದಿದ್ದು ಬೀಳಗಿ ಸರಕಾರಿ ನೌಕರರ ಭವನ ನವೀಕರಣಗೊಳಿಸಲು 25 ಲಕ್ಷ ರೂಪಾಯಿಗಳ ಅನುಧಾನ ನೀಡಲಾಗುವದು ಎಂದು ಎಮ್ ಬಿ ಬಳ್ಲಾರಿ ಹೇಳಿದರು.

ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಮಾತನಾಡಿ, ಯುವ ಅನ್ನದಾತ ರೈತನು ಕೃಷಿ ಮಾಡಿ ವರ್ಷಕ್ಕೆ ಲಕ್ಷಾಂತರ ರೂಗಳು ಆದಾಯ ಗಳಿಸಿದರೂ ಆತನಿಗೆ ಕನ್ಯೆ ಕೊಡುತ್ತಿಲ್ಲ, ಇಂದಿನ ದಿನಮಾನದಲ್ಲಿ ಕಡಿಮೆ ಸಂಬಳದ ನೌಕರಿ ಇದ್ದರೂ ಅವರನ್ನು ಈಗಿನ ಕನ್ಯೆಯರು ಮದುವೆಯಾಗಲು ಮಂದೆ ಬರುತ್ತಾರೆ ಎಂದ ಅವರು ಸರಕಾರಿ ನೌಕರಿ ಮಾಡುವರು ಅದೃಷ್ಟವಂತರು ಎಂದರು.

ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ನೂತನ ಪದಾಧಿಕಾಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ತಹಶೀಲ್ದಾರ್ ವಿನೋದ ಹತ್ತಳ್ಳಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಭಯಕುಮಾರ ಮೊರಭ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಸ್. ಆದಾಪೂರ, ಪಪಂ ಮುಖ್ಯಾಧಿಕಾರಿ ದೇವೆಂದ್ರ ಧನಪಾಲ, ಸಿ.ಪಿ.ಆಯ್ ಬಸವರಾಜ ಹಳಬನ್ನವರವರನ್ನು ಮುಖ್ಯ ಅತಿಥಿಗಳಾಗಿ ಅಹ್ವಾನ ನೀಡಿದರೂ ತಾವು ರಾಜ್ಯ ಸರಕಾರಿ ನೌಕರಾಗಿದ್ದರು ಕಾರ್ಯಕ್ರಮಕ್ಕೆ ಗೈರು ಹಾಜರಿಯಾಗಿದ್ದು ಎದ್ದು ಕಾಣತಿತ್ತು. ರಾಜ್ಯ ಸರಕಾರಿ ನೌಕರರ ಸಂಘದಲ್ಲಿ ಎರಡು ಬಣಗಳಾಗಿದ್ದು ಅದರ ಪರಿಣಾಮದ ಸಲುವಾಗಿ ಕಾರ್ಯಕ್ರಮದಿಂದ ದೂರ ಉಳಿದಿದ್ದರಬಹುದು ಎಂದು ನಿವೃತ್ತ ನೌಕರರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಡಿ.ವಾಯ್ ಅಂಬಿಗೇರ ಕಾರ್ಯದರ್ಶಿ ಮಹೇಶ ಜಗಲಿ, ಖಜಾಂಚಿ ದಾನಪ್ಪ ತಳವಾರ, ಪದಾಧಿಕಾರಿಗಳಾದ ಸಿದ್ದು ನಕ್ಕರಗುಂದಿ, ಎಸ್.ಎಸ್. ನಾರಾಯಣಿ, ಎಸ್.ಬಿ. ಮುಂಡರಗಿ, ಅಪ್ಪಾಸಾಹೇಬ ಮೋದಿ, ಎಲ್.ಡಿ. ಹಳ್ಳಿ, ಬಸವರಾಜ ನಿರಾಕರಿ ಜಿ.ಕೆ. ಸುಳ್ಳದ, ಅನಿಲ ಹೂಗಾರ,‌ಸುಜಾತಾ ರಜಪೂತ, ಆರ್. ಕೆ. ರಾಠೋಡ ಬಸವರಾಜ ಡಾವಣಗೇರಿ ಸೇರಿದಂತೆ ವೃಂದ ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥೀತರಿದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು