ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್. ಬಿ. ಬಳ್ಳಾರಿ ಸರಕಾರಿ ನೌಕರರಿಗೆ ಕರೆ ನೀಡಿದರು.

ಪಟ್ಟಣದ ರುದ್ರಗೌಡ ಪಾಟೀಲ ಸರಕಾರಿ ಪಥಮ ದರ್ಜೇ ಕಾಲೇಜು ಸಭಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಯೊಬ್ಬ ನೌಕರರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕು. ನೌಕರರ ಸಂಘ 22 ಕೋಟಿ ಹಣವನ್ನು ಎಪ್.ಡಿ. ಮಾಡಿದ್ದು, ಕ್ರೀಡಾಕೂಟ ಹಾಗೂ ಮಹಿಳಾದಿನಾಚರಣೆ ಸೇರಿದಂತೆ ವಿವಿಧ ಸಾಂಸ್ಕತೀಕ ಕಾರ್ಯಕ್ರಮಗಳಿಗೆ ಸರಕಾರ ಅನುದಾನ ನೀಡುತ್ತಿದ್ದು, ನಮ್ಮ ಬಾಗಲಕೋಟೆ ಜಿಲ್ಲೆಗೆ 2 ಕೋಟಿ ಅನುದಾನ ಬಂದಿದ್ದು ಬೀಳಗಿ ಸರಕಾರಿ ನೌಕರರ ಭವನ ನವೀಕರಣಗೊಳಿಸಲು 25 ಲಕ್ಷ ರೂಪಾಯಿಗಳ ಅನುಧಾನ ನೀಡಲಾಗುವದು ಎಂದು ಎಮ್ ಬಿ ಬಳ್ಲಾರಿ ಹೇಳಿದರು.

ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಮಾತನಾಡಿ, ಯುವ ಅನ್ನದಾತ ರೈತನು ಕೃಷಿ ಮಾಡಿ ವರ್ಷಕ್ಕೆ ಲಕ್ಷಾಂತರ ರೂಗಳು ಆದಾಯ ಗಳಿಸಿದರೂ ಆತನಿಗೆ ಕನ್ಯೆ ಕೊಡುತ್ತಿಲ್ಲ, ಇಂದಿನ ದಿನಮಾನದಲ್ಲಿ ಕಡಿಮೆ ಸಂಬಳದ ನೌಕರಿ ಇದ್ದರೂ ಅವರನ್ನು ಈಗಿನ ಕನ್ಯೆಯರು ಮದುವೆಯಾಗಲು ಮಂದೆ ಬರುತ್ತಾರೆ ಎಂದ ಅವರು ಸರಕಾರಿ ನೌಕರಿ ಮಾಡುವರು ಅದೃಷ್ಟವಂತರು ಎಂದರು.

ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ನೂತನ ಪದಾಧಿಕಾಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ತಹಶೀಲ್ದಾರ್ ವಿನೋದ ಹತ್ತಳ್ಳಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಭಯಕುಮಾರ ಮೊರಭ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಸ್. ಆದಾಪೂರ, ಪಪಂ ಮುಖ್ಯಾಧಿಕಾರಿ ದೇವೆಂದ್ರ ಧನಪಾಲ, ಸಿ.ಪಿ.ಆಯ್ ಬಸವರಾಜ ಹಳಬನ್ನವರವರನ್ನು ಮುಖ್ಯ ಅತಿಥಿಗಳಾಗಿ ಅಹ್ವಾನ ನೀಡಿದರೂ ತಾವು ರಾಜ್ಯ ಸರಕಾರಿ ನೌಕರಾಗಿದ್ದರು ಕಾರ್ಯಕ್ರಮಕ್ಕೆ ಗೈರು ಹಾಜರಿಯಾಗಿದ್ದು ಎದ್ದು ಕಾಣತಿತ್ತು. ರಾಜ್ಯ ಸರಕಾರಿ ನೌಕರರ ಸಂಘದಲ್ಲಿ ಎರಡು ಬಣಗಳಾಗಿದ್ದು ಅದರ ಪರಿಣಾಮದ ಸಲುವಾಗಿ ಕಾರ್ಯಕ್ರಮದಿಂದ ದೂರ ಉಳಿದಿದ್ದರಬಹುದು ಎಂದು ನಿವೃತ್ತ ನೌಕರರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಡಿ.ವಾಯ್ ಅಂಬಿಗೇರ ಕಾರ್ಯದರ್ಶಿ ಮಹೇಶ ಜಗಲಿ, ಖಜಾಂಚಿ ದಾನಪ್ಪ ತಳವಾರ, ಪದಾಧಿಕಾರಿಗಳಾದ ಸಿದ್ದು ನಕ್ಕರಗುಂದಿ, ಎಸ್.ಎಸ್. ನಾರಾಯಣಿ, ಎಸ್.ಬಿ. ಮುಂಡರಗಿ, ಅಪ್ಪಾಸಾಹೇಬ ಮೋದಿ, ಎಲ್.ಡಿ. ಹಳ್ಳಿ, ಬಸವರಾಜ ನಿರಾಕರಿ ಜಿ.ಕೆ. ಸುಳ್ಳದ, ಅನಿಲ ಹೂಗಾರ,‌ಸುಜಾತಾ ರಜಪೂತ, ಆರ್. ಕೆ. ರಾಠೋಡ ಬಸವರಾಜ ಡಾವಣಗೇರಿ ಸೇರಿದಂತೆ ವೃಂದ ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥೀತರಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ