ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಬೀಳಗಿ: ಗ್ರಾಮ ಆಡಳಿತಾಧಿಕಾರಿಗಳು ಮೂರು ದಿನಗಳಿಂದ ರಾಜ್ಯಾದಂತ ತಮ್ಮ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಸಿರುವುದರಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ ತೀವ್ರ ತೊಂದರೆಯಾಗಿದ್ದು, ಅವರ ಬೇಡಿಕೆಗಳು ನ್ಯಾಯೋಚಿತವಾಗಿದ್ದು ತಕ್ಷಣ ಸರಕಾರ ಸ್ಪಂದಿಸಬೇಕೆಂದು ಅವರ ಹೋರಾಟ ಬೆಂಬಲಿಸಿ ಆಗ್ರಹಿಸಿ ಭಾರತೀಯ ಕಿಸಾನ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ತಹಶೀಲ್ದಾರ ಕಚೇರಿ ಮುಂದೆ ಬೆಂಬಲಿಸಿ ಪ್ರತಿಭಟನೆ ನಡೆಸಿದರು.

ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಯೊಬ್ಬರ ಜನನದಿಂದ ಮರಣದವರಿಗೆ ಹಾಗೂ ಯಾವುದೇ ಕೃಷಿ ಚಟುವಟಿಕೆ ಕಾಗದ ಪತ್ರಗಳು ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸುವಲ್ಲಿ ಸದಾ ಶ್ರಮಿಸುತ್ತಿದ್ದು ಕೇಂದ್ರ ಸ್ಥಾನದಲ್ಲಿ ಅವರಿಗೆ ಕಚೇರಿ ನಿರ್ಮಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ವಂಶ ವೃಕ್ಷ ಜಾತಿ ಪ್ರಮಾಣ ಪತ್ರಗಳ ವಿತರಣೆ ವಿಚಾರವಾಗಿ ತಪಿಸ್ಥರಲ್ಲದ ಕಂದಾಯ ನೌಕರರ ಮೇಲೆ ಎಪ್ ಐ ಆರ್ ದಾಖಲಿಸಿದೇ ತಪಿಸ್ಥ ಅರ್ಜಿದಾರರನ್ಮು ಹೊಣೆಗಾರರನ್ನಾಗಿಸಬೇಕು ಎಂದರು.

ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವನಗೌಡ ಪಾಟೀಲ ಮಾತನಾಡಿ, ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ ತೋಟಗಾರಿಕೆ ಆಯಾ ಇಲಾಖೆಗಳಿಗೆ ವಹಿಸಬೇಕು ಹಾಗೂ ಬಾಗಲಕೋಟೆ ತೋಟಗಾರಿಕಾ ವಿಶ್ವ ವಿದ್ಯಾಲಯವನ್ನು ಮುಂದವರಿಸಬೇಕು ಎಂದರು.

ವಿಕಲಚೇತನರ ಮುಖಂಡ ಶೇಖರ ಕಾಖಂಡಕಿ ಮಾತನಾಡಿ, ಮ್ಯುಟೇಶನ್ ಅವಧಿ ಹೆಚ್ಚಿಸಿ ಪ್ರೋಟೊಕಾಲದಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈ ಬೀಡಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಜಾಬ್ ಚಾರ್ಟ ನಿಗದಿವಪಡಿಸಬೇಕು ಎಂದರು.

ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆ ನೌಕರರ ವರ್ಗಾವಣೆ ನಿಯಮಾವಳಿ ಅವೈಜ್ಞಾನಿಕವಾಗಿದ್ದು ಎಲ್ಲ ಇಲಾಖೆ ನೌಕರರ ನಿಯಮಾವಳಿಯಂತೆ ಅವರ ಕೇಳಿದ ಯಾವುದೇ ಅಂತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ಮಾರ್ಗಸೂಚಿಸಿ ಹೊರಡಿಸಿ ಮಾನವಿಯತೇಯ ಮೆರೆಗೆ ವಯೋವೃದ್ದ ತಂದೆ ತಾಯಿ ಸೇವೆ ಮಾಡಲು ಅನೂಕೂಲ ಒದಗಿಸಬೇಕು ಮಾಜಿ ಸೈನಿಕರ ಹಾಗೂ ಕಾಯಿಲೆ ಪೀಡತ ನೌಕರರ ವರ್ಗಾವಣೆಯನ್ನು ಯಾವದೇ ಅವಧಿ ಪರಿಗಣಿಸದೇ ನೇರವಾಗಿ ವರ್ಗಾವಣೆ ಮಾಡಬೇಕು ಎಂದು ಭಾರತೀಯ ಕಿಸಾನ್ ಸಂಘ ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ವಿರುಪಾಕ್ಷಯ್ಯ ಪಂ. ಹಿರೇಮಠ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಬ್ಬರಾಯಗೌಡ ಪಾಟೀಲ, ಡೊಂಗ್ರೀ ನಧಾಪ, ಎಂ. ವಾಯ್. ವಡವಾಣಿ, ಸಂಗಪ್ಪ ಅಗಸರ ಅಶೋಕ ದೇವಿನವರ, ಗುರು ಅನಗವಾಡಿ, ಶ್ರೀಶೈಲ ಮೇಟಿ, ಮಂಜು ಭಾವಿ ಯಲ್ಲಾಲಿಂಗ ಕುರಿ, ಗಿರೀಶ ಮಂಟೂರ, ವಿಠ್ಠಲ ಹನುಮರ, ಈರಪ್ಪ ಗಾಣಿಗೇರ, ಅಶೋಕ ಮುಳವಾಡ ಸೇರಿದಂತೆ ಅನೇಕ ಮುಖಂಡರು ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ