ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಬೀಳಗಿ: ಗ್ರಾಮ ಆಡಳಿತಾಧಿಕಾರಿಗಳು ಮೂರು ದಿನಗಳಿಂದ ರಾಜ್ಯಾದಂತ ತಮ್ಮ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಸಿರುವುದರಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ ತೀವ್ರ ತೊಂದರೆಯಾಗಿದ್ದು, ಅವರ ಬೇಡಿಕೆಗಳು ನ್ಯಾಯೋಚಿತವಾಗಿದ್ದು ತಕ್ಷಣ ಸರಕಾರ ಸ್ಪಂದಿಸಬೇಕೆಂದು ಅವರ ಹೋರಾಟ ಬೆಂಬಲಿಸಿ ಆಗ್ರಹಿಸಿ ಭಾರತೀಯ ಕಿಸಾನ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ತಹಶೀಲ್ದಾರ ಕಚೇರಿ ಮುಂದೆ ಬೆಂಬಲಿಸಿ ಪ್ರತಿಭಟನೆ ನಡೆಸಿದರು.

ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಯೊಬ್ಬರ ಜನನದಿಂದ ಮರಣದವರಿಗೆ ಹಾಗೂ ಯಾವುದೇ ಕೃಷಿ ಚಟುವಟಿಕೆ ಕಾಗದ ಪತ್ರಗಳು ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸುವಲ್ಲಿ ಸದಾ ಶ್ರಮಿಸುತ್ತಿದ್ದು ಕೇಂದ್ರ ಸ್ಥಾನದಲ್ಲಿ ಅವರಿಗೆ ಕಚೇರಿ ನಿರ್ಮಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ವಂಶ ವೃಕ್ಷ ಜಾತಿ ಪ್ರಮಾಣ ಪತ್ರಗಳ ವಿತರಣೆ ವಿಚಾರವಾಗಿ ತಪಿಸ್ಥರಲ್ಲದ ಕಂದಾಯ ನೌಕರರ ಮೇಲೆ ಎಪ್ ಐ ಆರ್ ದಾಖಲಿಸಿದೇ ತಪಿಸ್ಥ ಅರ್ಜಿದಾರರನ್ಮು ಹೊಣೆಗಾರರನ್ನಾಗಿಸಬೇಕು ಎಂದರು.

ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವನಗೌಡ ಪಾಟೀಲ ಮಾತನಾಡಿ, ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ ತೋಟಗಾರಿಕೆ ಆಯಾ ಇಲಾಖೆಗಳಿಗೆ ವಹಿಸಬೇಕು ಹಾಗೂ ಬಾಗಲಕೋಟೆ ತೋಟಗಾರಿಕಾ ವಿಶ್ವ ವಿದ್ಯಾಲಯವನ್ನು ಮುಂದವರಿಸಬೇಕು ಎಂದರು.

ವಿಕಲಚೇತನರ ಮುಖಂಡ ಶೇಖರ ಕಾಖಂಡಕಿ ಮಾತನಾಡಿ, ಮ್ಯುಟೇಶನ್ ಅವಧಿ ಹೆಚ್ಚಿಸಿ ಪ್ರೋಟೊಕಾಲದಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈ ಬೀಡಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಜಾಬ್ ಚಾರ್ಟ ನಿಗದಿವಪಡಿಸಬೇಕು ಎಂದರು.

ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆ ನೌಕರರ ವರ್ಗಾವಣೆ ನಿಯಮಾವಳಿ ಅವೈಜ್ಞಾನಿಕವಾಗಿದ್ದು ಎಲ್ಲ ಇಲಾಖೆ ನೌಕರರ ನಿಯಮಾವಳಿಯಂತೆ ಅವರ ಕೇಳಿದ ಯಾವುದೇ ಅಂತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ಮಾರ್ಗಸೂಚಿಸಿ ಹೊರಡಿಸಿ ಮಾನವಿಯತೇಯ ಮೆರೆಗೆ ವಯೋವೃದ್ದ ತಂದೆ ತಾಯಿ ಸೇವೆ ಮಾಡಲು ಅನೂಕೂಲ ಒದಗಿಸಬೇಕು ಮಾಜಿ ಸೈನಿಕರ ಹಾಗೂ ಕಾಯಿಲೆ ಪೀಡತ ನೌಕರರ ವರ್ಗಾವಣೆಯನ್ನು ಯಾವದೇ ಅವಧಿ ಪರಿಗಣಿಸದೇ ನೇರವಾಗಿ ವರ್ಗಾವಣೆ ಮಾಡಬೇಕು ಎಂದು ಭಾರತೀಯ ಕಿಸಾನ್ ಸಂಘ ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ವಿರುಪಾಕ್ಷಯ್ಯ ಪಂ. ಹಿರೇಮಠ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಬ್ಬರಾಯಗೌಡ ಪಾಟೀಲ, ಡೊಂಗ್ರೀ ನಧಾಪ, ಎಂ. ವಾಯ್. ವಡವಾಣಿ, ಸಂಗಪ್ಪ ಅಗಸರ ಅಶೋಕ ದೇವಿನವರ, ಗುರು ಅನಗವಾಡಿ, ಶ್ರೀಶೈಲ ಮೇಟಿ, ಮಂಜು ಭಾವಿ ಯಲ್ಲಾಲಿಂಗ ಕುರಿ, ಗಿರೀಶ ಮಂಟೂರ, ವಿಠ್ಠಲ ಹನುಮರ, ಈರಪ್ಪ ಗಾಣಿಗೇರ, ಅಶೋಕ ಮುಳವಾಡ ಸೇರಿದಂತೆ ಅನೇಕ ಮುಖಂಡರು ಇದ್ದರು.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ