Let us, as Kannadigas, cultivate Kannada pride: Go.Ru.Cha

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು ಹಿರಿಯ ಸಾಹಿತಿ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರು ಹೇಳಿದರು.

ಮಾ.6ರ ಗುರುವಾರ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ರಾಯಚೂರು ತಾಲ್ಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಿಗರಾದ ನಾವು ಆತ್ಮ ವಿಮರ್ಶೆ ಮಾಡಿಕೊಂಡು ಕಳೆದು ಹೋಗುತ್ತಿರುವ ನಮ್ಮನ್ನು ನಾವು ಹುಡಕಿಕೊಳ್ಳಲು ಸಮ್ಮೇಳನಗಳು ಸಹಕಾರಿಯಾಗಲಿವೆ. ಕನ್ನಡ ಸಾಹಿತ್ಯ ಸಮ್ಮೇಳನಗಳು ಸಾಂಸ್ಕೃತಿಕ ಜಾತ್ರೆಗಳಾಗಿದ್ದು, ಪರಸ್ಪರ ಮಾನವ ಸಂಬಂಧ ಬೆಸೆಯುವ ಸಾಹಿತ್ಯ ಜಾತ್ರೆಗಳಾಗಿವೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅತ್ಯಂತ ಹಳೆಯ ಸಂಸ್ಥೆಯಾಗಿದೆ. ಇದರಿಂದ ನಡೆಯುವ ಸಾಹಿತ್ಯ ಸಮ್ಮೇಳನಗಳು ಇದೀಗ ತಾಲೂಕು ಕೇಂದ್ರಗಳಿಗೂ ವಿಸ್ತರಿಸಿರುವುದು ವಿಶೇಷ ಎಂದರು. ನೂರು ಜನರ ಸದಸ್ಯರಿದ್ದ ಪರಿಷತ್ ಇಂದು ಐದು ಲಕ್ಷಕ್ಕೂ ಅಧಿಕ ಸದಸ್ಯತ್ವ ಪಡೆದು ಜಗತ್ತಿನ ವಿವಿಧೆಡೆಯೂ ಸದಸ್ಯರನ್ನು ಹೊಂದಿರುವದು ಹೆಮ್ಮೆಯ ವಿಚಾರ ಎಂದರು.

ನಾವೀಗ ಸಾಹಿತ್ಯ ಪರಿಷತ್‌ನ ಶತಮಾನೋತ್ಸವದ ಸಂಭ್ರಮದಲ್ಲಿದ್ದೇವೆ. ರಾಜಕಾರಣಿಗಳಲ್ಲಿ, ಧರ್ಮಗುರುಗಳಲ್ಲಿ ಸಹ ಸಾಹಿತ್ಯಾಸಕ್ತಿ ಬೆಳೆಸುವ ಕಾರ್ಯವನ್ನು ಇಂತಹ ಸಮ್ಮೇಳನಗಳು ಮಾಡುತ್ತಿರುವುದು ಹೆಗ್ಗಳಿಕೆಯಾಗಿದೆ. ಹೀಗೆ ಎಲ್ಲರನ್ನೂ ಒಳಗೊಂಡು ಸಾಹಿತ್ಯ ಪರಿಷತ್ ಮುನ್ನಡೆಯಬೇಕಿದೆ ಎಂದರು.

ವಚನ ಸಾಹಿತ್ಯವು ಪರ್ಯಾಯ ಸಂಸ್ಕೃತಿಯನ್ನು ಹುಟ್ಟುಹಾಕಿದೆ. ಸಾಹಿತ್ಯವು ಜನ ಸಂಕಷ್ಟಕ್ಕೆ, ನೋವಿಗೆ ಪರಿಹಾರ ಹುಡುಕುವಂತಾಗಬೇಕು. ರಾಜ್ಯ ಸರ್ಕಾರವು ಪುಸ್ತಕ ಓದುವ ಅಭಿರುಚಿ, ವೈಚಾರಿಕ ಅಭಿಪ್ರಾಯಗಳಿಗೆ ಒಲವು ತೋರಿಸುತ್ತಿರುವುದು ಸಮಧಾನಕರ ಬೆಳವಣಿಗೆಯಾಗಿದೆ ಎಂದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಹೋರಾಟಕ್ಕೆ ತಾವು ಬೆಂಬಲಿಸುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಕಿಲ್ಲೆ ಬೃಹನ್ಮಠದ ಶ್ರೀಶಾಂತಮಲ್ಲ ಶಿವಾಚಾರ್ಯರು, ಸಂಸದರಾದ ಜಿ.ಕುಮಾರನಾಯಕ, ಮಹಾನಗರ ಪಾಲಿಕೆಯ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವೆಂಕಟೇಶ ಬೇವಿನಬೆಂಚಿ, ಸಮ್ಮೇಳನಾಧ್ಯಕ್ಷರಾದ ಅಯ್ಯಪ್ಪಯ್ಯ ಹುಡಾ, ಮಹಾನಗರ ಪಾಲಿಕೆಯ ಸದಸ್ಯರಾದ ಜಯಣ್ಣ, ಐದನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಾಬು ಬಂಡಾರಿಗಲ್, ಹಿರಿಯ ಪತ್ರಕರ್ತರಾದ ಬಸವರಾಜ ಸ್ವಾಮಿ, ಅರವಿಂದ ಕುಲಕರ್ಣಿ, ಚನ್ನಬಸವಣ್ಣ, ಸಾಹಿತಿಗಳಾದ ಬಾಬು ಬಂಢಾರಿಗಲ್, ಭಗತರಾಜ ನಿಜಾಮಕಾರಿ, ನಾಗರಾಜ ಮಸ್ಕಿ, ತಾಯಪ್ಪ ಹೊಸೂರು, ಜಿ.ಸುರೇಶ ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ